ದಾವಣಗೆರೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.ಶಾಮನೂರು ಶಿವಶಂಕರಪ್ಪ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದರು.

ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರಕಾರದ ಚಳಿಬಿಡಿಸುವ ಕಾರ್ಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರಕಾರದ ಚಳಿ ಬಿಡಿಸುವ ಕುರಿತು ಈಗಾಗಲೇ ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ವಿಪಕ್ಷವಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸದನದ ಒಳಗಡೆ ಒಟ್ಟಾಗಿ ಸರಕಾರದ ಕಿವಿ ಹಿಂಡಲು ಈಗಾಗಲೇ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ತಿಳಿಸಿದರು. ಸದನದ ಹೊರಗಡೆಯೂ ಪ್ರತಿಭಟನೆ ನಡೆಯಲಿದೆ ಎಂದು ವಿವರಿಸಿದರು. ಮುಖ್ಯಮಂತ್ರಿಗಳು ಡಿಸಿಎಂ ಮನೆಗೆ ತಿಂಡಿಗೆ ಹೋಗುವುದಾದರೆ ಅದರ ಬಗ್ಗೆ ನಾವೇನು ಪ್ರತಿಕ್ರಿಯೆ ನೀಡಲಿದೆ? ಎಂದು […]

ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣವಾಗಬೇಕು:ಸಿ.ಬಿ. ವೆಂಕಟೇಶ್

ಶಿಕಾರಿಪುರ 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕ ದೌರ್ಜನ್ಯವೆಸಗಿದರೆ ಅಪರಾಧ ಘಟಿಸಿದ 24 ಗಂಟೆಗಳಲ್ಲಿ ಮಕ್ಕಳ ವಿಶೇಷ ಪೊಲೀಸರಿಗೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಈ ರೀತಿ ಮಾಡುವುದರಿಂದ ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣಮಾಡಲು ಸಹಾಯವಾಗುತ್ತದೆಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿ.ಬಿ. ವೆಂಕಟೇಶ್ ಅಭಿಮತ ವ್ಯಕ್ತಪಡಿಸಿದರು. ಸಮುದಾಯ ಆರೋಗ್ಯ ಕೇಂದ್ರ ಶಿಕಾರಿಪುರ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಕ್ಕಳಿಗೆ […]

ಏ‌ ಕರಿ ಟೋಪಿ ಎಂಎಲ್ ಎ ಇಲ್ಲಿಬಾ ಎಂದ ಡಿಕೆಶಿ ವೇದಿಕೆ ಮೇಲೆ ಹೈಡ್ರಾಮ..!

ಬೆಂಗಳೂರು: ಮತ್ತಿಕರೆಯ ಜೆಪಿ ಪಾರ್ಕ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರ ʼಬೆಂಗಳೂರು ನಡಿಗೆʼ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ವೇದಿಕೆ ಕಾರ್ಯಕ್ರಮದಲ್ಲಿ ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ. ಡಿಕೆಶಿವಕುಮಾರ್‌ ಅವರು ಇಂದು ವಾಕ್‌ ಮಾಡುತ್ತಾ ಜೆಪಿ ಪಾರ್ಕ್‌ಗೆ ಆಗಮಿಸಿದರು. ಆರ್‌ಎಸ್‌ಎಸ್‌ ಪಥಸಂಚಲನ ಮುಗಿಸಿದ್ದ ಶಾಸಕ ಮುನಿರತ್ನ ಸಮವಸ್ತ್ರದಲ್ಲೇ ಜನರ ಮಧ್ಯೆ ಕುಳಿತಿದ್ದರು. ಮುನಿರತ್ನ ಅವರು ಕಾರ್ಯಕ್ರಮದಲ್ಲಿ ಕುಳಿತಿರುವುದನ್ನು ನೋಡಿದ ಡಿಕೆಶಿ ಅವರು ಕರಿ ಟೋಪಿ […]

ಪುರಸಭೆ ಸಿಸಿ ಕ್ಯಾಮರಗಳ ನಿರ್ಲಕ್ಷ್ಯ:ಎಸ್ ಸಿಪಿ ಟಿಎಸ್ ಪಿ ಯೋಜನೆ ಫಲಾನುಭವಿಗಳ ಆಯ್ಕೆ ವ್ಯತ್ಯಾಸ-ಸದಸ್ಯ ಸುರೇಶ್ ಆರೋಪ

ಶಿಕಾರಿಪುರ: ಸಿಸಿ ಕ್ಯಾಮೆರಾ ಗಳು ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಹಲವು ಬಾರಿ ಹೇಳಿದರೂ ಮುಖ್ಯ ಅಧಿಕಾರಿ ಅದನ್ನು ಸರಿಪಡಿಸಿಲ್ಲ ಸಭೆಗಳಲ್ಲಿ ಏನಾದರೂ ಅವಘಡ ಸಂಭವಿಸಿದರೆ ದಾಖಲೆಯಾಗಿ ಉಳಿಯುತ್ತದೆ ಆ ವ್ಯವಸ್ಥೆಯನ್ನು ಏಕೆ ಸರಿ ಮಾಡಿಲ್ಲ ಎಂದು ಮುಖ್ಯ ಅಧಿಕಾರಿಗಳನ್ನು ಸದಸ್ಯ ಸುರೇಶ್ ಪ್ರಶ್ನಿಸಿದರು. ಪಟ್ಟಣದ ಪುರಸಭಾ ಕಾರ್ಯಾಲಯದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕೋಟ್ಯಂತರ ರೂ ವ್ಯವಹಾರ ನಡೆಯುವ ಜಾಗ ಲಕ್ಷಾಂತರ ರೂಪಾಯಿಗಳು ವಾಹನಗಳು ಕೋಟ್ಯಾನು ಕೋಟಿ […]

ಉದ್ಯಮಿ ಬಿಜೆಪಿ ಮುಖಂಡ ಎನ್‌.ವಿ ಈರೇಶ್ ಕಾಂಗ್ರೇಸ್ ಸೇರ್ಪಡೆಗೆ ವೇದಿಕೆ ಸಿದ್ದತೆ.?

ಶಿಕಾರಿಪುರ ತಾಲ್ಲೂಕಿನ‌ ಉದ್ಯಮಿ ಅಖಿಲ ಕರ್ನಾಟಕ ವೀರಶೈವ ಮಹಾಸಭಾದ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ ಎನ್.ವಿ ಈರೇಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನುವ ಪೋಟೋ ಸಖತ್ ವೈರಲ್ ಆಗಿತ್ತು. ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿಲ್ಲ. ಈ ಕುರಿತು ಎನ್ ವಿ ಈರೇಶ್ ಅವರು ಶಿಕಾರಿ ನ್ಯೂಸ್‌ ನೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ವಿವಿಧ ಸಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಾನು ಕಾಂಗ್ರೆಸ್ ಪಕ್ಷದ ಮೂಲಕ ಮುಂದಿನ ರಾಜಕೀಯ ಭವಿಷ್ಯವನ್ನು […]

ಶಿಕಾರಿಪುರ ಕುಟ್ರಹಳ್ಳಿ ಟೋಲ್ ತೆರುವುಗೊಳಿಸುವಂತೆ ಸದನದಲ್ಲಿ ಬಿ ವೈ ವಿಜಯೇಂದ್ರ ಆಗ್ರಹ

ಶಿಕಾರಿಪುರದ ರಾಜ್ಯ ಹೆದ್ದಾರಿ‌ಸಂಖ್ಯೆ 57 ರಲ್ಲಿ ಒಂದು‌ ಟೋಲ್ ಇನ್ನೊಂದು ಟೋಲ್ ಕುಟ್ರಳ್ಳಿ ಹತ್ತಿರ‌ ನಿರ್ಮಾಣವಾಗಿದ್ದು ಇದರಿಂದ ಸ್ಥಳೀಯಾರಿಗೆ ತೀವ್ರ‌ ತೊಂದರೆ ಆಗಿದೆ ಎಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಒಂದು ಟೋಲ್ ಗು ಇನ್ನೊಂದು ಟೋಲ್ ಗು 65 ಕಿಲೋಮೀಟರ್ ದೂರ ಇರಬೇಕು ಅನ್ನೋ‌ ನಿಯಮವಿದ್ರು ‌ಕೇವಲ 35 ಕಿಲೋಮೀಟರ್ ಗೆ ಕುಟ್ರಳ್ಖಿ ಸಮೀಪ ಟೋಲ್ ನಿರ್ಮಾಣ‌ ಮಾಡಿದ್ದು ಇಲ್ಲಿ ಪ್ರತಿನಿತ್ಯ 75 ರುಪಾಯಿ ಕೊಟ್ಟು ಸ್ಥಳೀಯ ಗ್ರಾಮಸ್ಥರು ಓಡಾಡುವ ಪರಿಸ್ಥಿತಿ ಬಂದಿದೆ […]

ಎಡಪಂಥೀಯ ಒತ್ತಡಕ್ಕೆ ಮಣಿದು ಸಿಎಂ ಎಸ್’ಐಟಿ ರಚಿಸಿದ್ದಾರೆ: ಬಿ.ವೈ ವಿಜಯೇಂದ್ರ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ ನಡೆದಿದ್ದು, ಅವುಗಳಿಗೆ ಕಡಿವಾಣ ಹಾಕಲು ಸರಕಾರ ಮುಂದಾಗಿಲ್ಲ ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಕೇಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಧರ್ಮಸ್ಥಳದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ ಶ್ರೀ ಕ್ಷೇತ್ರ ಧರ್ಮಸ್ಥಳ, ದೇವರು, ಅಣ್ಣಪ್ಪ ಸ್ವಾಮಿ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಅಸಂಖ್ಯಾತ ಭಕ್ತರಲ್ಲಿ ಗೊಂದಲ ಸೃಷ್ಟಿಸುವ ಷಡ್ಯಂತ್ರವೂ ನಡೆದಿದೆ ಎಂದು ತಿಳಿಸಿದರು. […]

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು, ಹಳದಿ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಹಸಿರು ನಿಶಾನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಬೆಳಗ್ಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲನ್ನು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಉದ್ಘಾಟಿಸಲಿದ್ದಾರೆ. ಆರ್.ವಿ. ರಸ್ತೆಯಿಂದ ಕೋನಪ್ಪನ ಆಗ್ರಹಾರಕ್ಕೆ ತೆರಳುವ ಹಳದಿ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ ಬೆಂಗಳೂರು ಮೆಟ್ರೋದ ಮೂರನೇ ಹಂತದ ರೈಲು ಮಾರ್ಗಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಬಳಿಕ, ಪ್ರಧಾನಿಯವರು ಅಮೃತಸರ ಶ್ರೀಮಾತಾ ವೈಷ್ಣೋದೇವಿ ಕತ್ರಾ ರೈಲಿಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿಯವರ […]

ಬೆಂಗಳೂರಿನ ಮಹಾದೇವ್‌ಪುರ ಕ್ಷೇತ್ರ ಒಂದರಲ್ಲೇ 1 ಲಕ್ಷ 250 ಮತಚೌರ್ಯ : ರಾಹುಲ್ ಗಾಂಧಿ ಆರೋಪ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದಾರೆ. ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಇಂದು ನಡೆದ ’ಮತದಾರರ ಅಧಿಕಾರ ರ‍್ಯಾಲಿ’ ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಚುನಾವಣಾ ಆಯೋಗ ಕಳೆದ 10 ವರ್ಷಗಳ ಮತದಾರರ ಪಟ್ಟಿಯ ಡಿಜಿಟಲ್ ರೂಪಾಂತರ ಮತ್ತು ವಿಡಿಯೋಗ್ರಾಫಿ ಅನ್ನು ತಕ್ಷಣ ತಮ್ಮ ಪಕ್ಷಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದರು. ಮತದಾರರ ಪಟ್ಟಿಯಲ್ಲಿ ಮೋಸ ನಡೆದಿದೆ ಎಂದು ಆರೋಪಿಸಿದ ಅವರು, ಇದರಿಂದ ಬಿಜೆಪಿಗೆ ಚುನಾವಣೆಯಲ್ಲಿ […]