ಪುರಸಭೆ ಸಿಸಿ ಕ್ಯಾಮರಗಳ ನಿರ್ಲಕ್ಷ್ಯ:ಎಸ್ ಸಿಪಿ ಟಿಎಸ್ ಪಿ ಯೋಜನೆ ಫಲಾನುಭವಿಗಳ ಆಯ್ಕೆ ವ್ಯತ್ಯಾಸ-ಸದಸ್ಯ ಸುರೇಶ್ ಆರೋಪ

ಶಿಕಾರಿಪುರ: ಸಿಸಿ ಕ್ಯಾಮೆರಾ ಗಳು ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಹಲವು ಬಾರಿ ಹೇಳಿದರೂ ಮುಖ್ಯ ಅಧಿಕಾರಿ ಅದನ್ನು ಸರಿಪಡಿಸಿಲ್ಲ ಸಭೆಗಳಲ್ಲಿ ಏನಾದರೂ ಅವಘಡ ಸಂಭವಿಸಿದರೆ ದಾಖಲೆಯಾಗಿ ಉಳಿಯುತ್ತದೆ ಆ ವ್ಯವಸ್ಥೆಯನ್ನು ಏಕೆ ಸರಿ ಮಾಡಿಲ್ಲ ಎಂದು ಮುಖ್ಯ ಅಧಿಕಾರಿಗಳನ್ನು ಸದಸ್ಯ ಸುರೇಶ್ ಪ್ರಶ್ನಿಸಿದರು. ಪಟ್ಟಣದ ಪುರಸಭಾ ಕಾರ್ಯಾಲಯದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕೋಟ್ಯಂತರ ರೂ ವ್ಯವಹಾರ ನಡೆಯುವ ಜಾಗ ಲಕ್ಷಾಂತರ ರೂಪಾಯಿಗಳು ವಾಹನಗಳು ಕೋಟ್ಯಾನು ಕೋಟಿ […]

ಉದ್ಯಮಿ ಬಿಜೆಪಿ ಮುಖಂಡ ಎನ್‌.ವಿ ಈರೇಶ್ ಕಾಂಗ್ರೇಸ್ ಸೇರ್ಪಡೆಗೆ ವೇದಿಕೆ ಸಿದ್ದತೆ.?

ಶಿಕಾರಿಪುರ ತಾಲ್ಲೂಕಿನ‌ ಉದ್ಯಮಿ ಅಖಿಲ ಕರ್ನಾಟಕ ವೀರಶೈವ ಮಹಾಸಭಾದ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ ಎನ್.ವಿ ಈರೇಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನುವ ಪೋಟೋ ಸಖತ್ ವೈರಲ್ ಆಗಿತ್ತು. ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿಲ್ಲ. ಈ ಕುರಿತು ಎನ್ ವಿ ಈರೇಶ್ ಅವರು ಶಿಕಾರಿ ನ್ಯೂಸ್‌ ನೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ವಿವಿಧ ಸಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಾನು ಕಾಂಗ್ರೆಸ್ ಪಕ್ಷದ ಮೂಲಕ ಮುಂದಿನ ರಾಜಕೀಯ ಭವಿಷ್ಯವನ್ನು […]

ಶಿಕಾರಿಪುರ ಕುಟ್ರಹಳ್ಳಿ ಟೋಲ್ ತೆರುವುಗೊಳಿಸುವಂತೆ ಸದನದಲ್ಲಿ ಬಿ ವೈ ವಿಜಯೇಂದ್ರ ಆಗ್ರಹ

ಶಿಕಾರಿಪುರದ ರಾಜ್ಯ ಹೆದ್ದಾರಿ‌ಸಂಖ್ಯೆ 57 ರಲ್ಲಿ ಒಂದು‌ ಟೋಲ್ ಇನ್ನೊಂದು ಟೋಲ್ ಕುಟ್ರಳ್ಳಿ ಹತ್ತಿರ‌ ನಿರ್ಮಾಣವಾಗಿದ್ದು ಇದರಿಂದ ಸ್ಥಳೀಯಾರಿಗೆ ತೀವ್ರ‌ ತೊಂದರೆ ಆಗಿದೆ ಎಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಒಂದು ಟೋಲ್ ಗು ಇನ್ನೊಂದು ಟೋಲ್ ಗು 65 ಕಿಲೋಮೀಟರ್ ದೂರ ಇರಬೇಕು ಅನ್ನೋ‌ ನಿಯಮವಿದ್ರು ‌ಕೇವಲ 35 ಕಿಲೋಮೀಟರ್ ಗೆ ಕುಟ್ರಳ್ಖಿ ಸಮೀಪ ಟೋಲ್ ನಿರ್ಮಾಣ‌ ಮಾಡಿದ್ದು ಇಲ್ಲಿ ಪ್ರತಿನಿತ್ಯ 75 ರುಪಾಯಿ ಕೊಟ್ಟು ಸ್ಥಳೀಯ ಗ್ರಾಮಸ್ಥರು ಓಡಾಡುವ ಪರಿಸ್ಥಿತಿ ಬಂದಿದೆ […]

ಎಡಪಂಥೀಯ ಒತ್ತಡಕ್ಕೆ ಮಣಿದು ಸಿಎಂ ಎಸ್’ಐಟಿ ರಚಿಸಿದ್ದಾರೆ: ಬಿ.ವೈ ವಿಜಯೇಂದ್ರ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ ನಡೆದಿದ್ದು, ಅವುಗಳಿಗೆ ಕಡಿವಾಣ ಹಾಕಲು ಸರಕಾರ ಮುಂದಾಗಿಲ್ಲ ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಕೇಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಧರ್ಮಸ್ಥಳದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ ಶ್ರೀ ಕ್ಷೇತ್ರ ಧರ್ಮಸ್ಥಳ, ದೇವರು, ಅಣ್ಣಪ್ಪ ಸ್ವಾಮಿ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಅಸಂಖ್ಯಾತ ಭಕ್ತರಲ್ಲಿ ಗೊಂದಲ ಸೃಷ್ಟಿಸುವ ಷಡ್ಯಂತ್ರವೂ ನಡೆದಿದೆ ಎಂದು ತಿಳಿಸಿದರು. […]

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು, ಹಳದಿ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಹಸಿರು ನಿಶಾನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಬೆಳಗ್ಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲನ್ನು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಉದ್ಘಾಟಿಸಲಿದ್ದಾರೆ. ಆರ್.ವಿ. ರಸ್ತೆಯಿಂದ ಕೋನಪ್ಪನ ಆಗ್ರಹಾರಕ್ಕೆ ತೆರಳುವ ಹಳದಿ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ ಬೆಂಗಳೂರು ಮೆಟ್ರೋದ ಮೂರನೇ ಹಂತದ ರೈಲು ಮಾರ್ಗಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಬಳಿಕ, ಪ್ರಧಾನಿಯವರು ಅಮೃತಸರ ಶ್ರೀಮಾತಾ ವೈಷ್ಣೋದೇವಿ ಕತ್ರಾ ರೈಲಿಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿಯವರ […]

ಬೆಂಗಳೂರಿನ ಮಹಾದೇವ್‌ಪುರ ಕ್ಷೇತ್ರ ಒಂದರಲ್ಲೇ 1 ಲಕ್ಷ 250 ಮತಚೌರ್ಯ : ರಾಹುಲ್ ಗಾಂಧಿ ಆರೋಪ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದಾರೆ. ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಇಂದು ನಡೆದ ’ಮತದಾರರ ಅಧಿಕಾರ ರ‍್ಯಾಲಿ’ ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಚುನಾವಣಾ ಆಯೋಗ ಕಳೆದ 10 ವರ್ಷಗಳ ಮತದಾರರ ಪಟ್ಟಿಯ ಡಿಜಿಟಲ್ ರೂಪಾಂತರ ಮತ್ತು ವಿಡಿಯೋಗ್ರಾಫಿ ಅನ್ನು ತಕ್ಷಣ ತಮ್ಮ ಪಕ್ಷಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದರು. ಮತದಾರರ ಪಟ್ಟಿಯಲ್ಲಿ ಮೋಸ ನಡೆದಿದೆ ಎಂದು ಆರೋಪಿಸಿದ ಅವರು, ಇದರಿಂದ ಬಿಜೆಪಿಗೆ ಚುನಾವಣೆಯಲ್ಲಿ […]

ಶಿರಾಳಕೊಪ್ಪದಲ್ಲಿ ಪೋಲಿಸರ ದಾಳಿ ಗೋ ಮಾಂಸ ವಶ: ಕರ್ತವ್ಯಕ್ಕೆ ಅಡ್ಡಿ..!

ಶಿರಾಳಕೊಪ್ಪ:‌ ಪಟ್ಟಣದಲ್ಲಿ ಪೋಲಿಸರ ದಾಳಿ ನಡೆಸಿದ್ದು ಇಬ್ಬರು ಆರೋಪಿಗಳು ಮತ್ತು ಗೋವಿನ ಮಾಂಸ ಪತ್ತೆಯಾಗಿದೆ. ಪಿಎಸ್ಐ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆದಿದೆ ಈ ಘಟನೆಗೆ ಸಂಬಂಧಿಸಿದಾಗ ಮೂವರು ಪೊಲೀಸ್ ಮತ್ತು ಆರೋಪಿತರ ಕಡೆಯಿಂದ ಒಬ್ಬರು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ದಾಳಿಯಲ್ಲಿ ಮೊದಲಿಗೆ ಆರೋಪಿತರೊಬ್ಬರು ಪೊಲೀಸರ ತಡೆಯಲು ಯತ್ನಿಸಿದ್ದಾರೆ. ಮನೆಯ ಮೇಲೆ ದಾಳಿ ಮಾಡಲು ಹೋದ ಪೊಲೀಸರನ್ನ ಮನೆಯವರು ಗೇಟ್ ಬಳಿಯೇ ತಡೆದು ನಿಮಗೆ ದಾಳಿ ಮಾಡಲು ಏನು ಅಧಿಕಾರವಿದೆ ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಎನ್ನಲಾಗಿದೆ. […]

ಶಿಕಾರಿಪುರಶ್ರಾವಣ ಮಾಸದ ಪ್ರಯುಕ್ತ ಬೃಹತ್ ಅನ್ನ ಸಂತರ್ಪಣೆ

ಶಿಕಾರಿಪುರ ಪಟ್ಟಣದ ಆರಾಧ್ಯ ದೈವ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇದೇ ತಿಂಗಳ 9 ರ ಶನಿವಾರ ನೂಲು ಹುಣ್ಣಿಮೆಯ ದಿವಸ ಬರುವ ಭಕ್ತಾದಿಗಳಿಗೆ ಎ ಪಿ ಎಂ ಸಿ ವರ್ತಕರು ಮತ್ತು ರೈಸ್ ಮಿಲ್ ಮಾಲಿಕರ ಸಂಯುಕ್ತಶ್ರಯದಲ್ಲಿ ಬೆಳಗ್ಗೆಯಿಂದಲೇ ಬೃಹತ್ ಅನ್ನ ಸಂತರ್ಪಣೆ ಹಾಗೂ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದೆ ಎಂದು ವರ್ತಕರ ಸಂಘದ ಕರಿಬಸಪ್ಪನವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರಾವಣ ಮಾಸದ ಮೂರನೇ ಶನಿವಾರದಂದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದು, […]

ವರ್ಷಾಂತ್ಯದೊಳಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ; ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಈ ವರ್ಷಾಂತ್ಯದಲ್ಲಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದ್ದು, 2-3 ತಿಂಗಳಲ್ಲಿ ನೋಟಿಫಿಕೇಶನ್ ಆಗಲಿದೆ ಎಂದ ಅವರು ಹೇಳಿದರು. ಮೀಸಲಾತಿ ಕುರಿತು ಹೈಕೋರ್ಟ್ನಲ್ಲಿ ಒಪ್ಪಿಕೊಂಡಿದ್ದು, ಅದರ ಆಂತರಿಕ ಕೆಲಸ ನಡೆಯುತ್ತಿದೆ. ಈ ವರ್ಷದಲ್ಲಿಯೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು. News By: Raghu Shikari-7411515737

ರೋಜಾ ಚೇತನ್ ಇವರಿಗೆ ಪಿ.ಹೆಚ್.ಡಿ ಪ್ರಶಸ್ತಿ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾ. ಹಿರೇಜಂಬೂರ ನಿವಾಸಿ ನಂದಿಹಳ್ಳಿ ಆನಂದಪ್ಪರವರ ಪುತ್ರಿ ಹಾಗೂ ಡಾ.ಚೇತನ್ ಹೆಚ್ ಪಿ ಅವರ ಪತ್ನಿ ಡಾ.ಎ ರೋಜಾ ಚೇತನ್ ಇವರು “ಕನ್ನಡ ಮಹಿಳಾ ಕಥನ ಸಾಹಿತ್ಯದಲ್ಲಿ ಮಹಿಳಾ ಪ್ರಶ್ನೆಗಳು” (21ನೇ ಶತಮಾನವನ್ನು ಅನುಲಕ್ಷಿಸಿ ) ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಕನ್ನಡ ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ. ಇವರಿಗೆ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಎ ಬಿ ಉಮೇಶ್ ಇವರು ಮಾರ್ಗದರ್ಶನ ನೀಡಿರುತ್ತಾರೆ. […]