ಬೆಂಗಳೂರಿನಲ್ಲಿ ಆರ್ ಸಿಬಿ – ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿ

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯ ಗೆದ್ದು, ಉತ್ತಮ ಆರಂಭ ಮಾಡಿದೆ. ಇಂದು ತವರಿನಲ್ಲಿ ಗೆಲುವಿನ ಖಾತೆ ತೆರೆಯುವ ತವಕದಲ್ಲಿದೆ. ಕ್ರಿಕೆಟ್ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸೇವೆಯ ಸಮಯವನ್ನು ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕು […]

ಮನೆಯ ಮೇಲೆ ಉರುಳಿ ಬಿದ್ದ ಸರ್ಕಾರಿ ಬಸ್ : 20 ಜನರೀಗೆ ಗಾಯ

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಇಳಿಜಾರಿನ ಮನೆಯೊಂದರ ಮೇಲೆ ಸರ್ಕಾರಿ ಬಸ್ ಉರುಳಿಬಿದ್ದು ಸುಮಾರು 20 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಶೃಂಗೇರಿಗೆ ಬರುತಿದ್ದ ಬಸ್ ಅಪಘಾತಕೀಡಾಗಿದ್ದು ಬಸ್ಸಿನಲ್ಲಿ 50 ಕ್ಕು ಹೆಚ್ಚು ಪ್ರಯಾಣಿಕರು ಪ್ರಯಾಣಿಸುತಿದ್ದರು. ಅಪಘಾತದಿಂದ ಮನೆಗು ಹಾನಿಯುಂಟಾಗಿದೆ. ಇನ್ನು ಗಾಯಗೊಂಡ ಪ್ರಯಾಣಿಕರನ್ನು ಕೊಪ್ಪ, ಎನ್.ಆರ್ ಪುರದ ಆಸ್ಪತ್ರೆಗಳೀಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಯಪುರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ […]

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತಡೆಗೆ ಹೊಸ ಕಾನೂನು ಜಾರಿ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತಡೆಗೆ ಕಾನೂನು ತರಲು ತೀರ್ಮಾನಿಸಲಾಗಿದ್ದು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಮಾತನಾಡಿದ ಅವರು, ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಪಾವತಿಸುವುದರಲ್ಲಿ ದೇಶದಲ್ಲೇ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಹೇಳಿದರು. ಐದು ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯನಲ್ಲಿ ಹಣ ಮೀಸಲಿಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಯಾವುದಾದರು […]

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮೇಲೆ ಇಡಿ ದಾಳಿ..!

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ ನಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು. ಇಡಿ ತನಿಖೆಗೆ ಮುಂದಾಗುತ್ತಿದ್ದಂತೆ ಮಂಜುನಾಥ್ ಗೌಡ […]

ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವೆ- ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ. […]

ದಲಿತ ಸಮುದಾಯದ ಒಳ ಮೀಸಲಾತಿ ನ್ಯಾ. ನಾಗಮೋಹನ್ ದಾಸ್ ಸಮಿತಿ ಸಿಎಂಗೆ ವರದಿ ಸಲ್ಲಿಕೆ..!

ಬೆಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುದ್ದಿ ಜಾಹೀರಾತಿಗಾಗಿ- 7411515737

ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಯತ್ನಾಳ್ ಉಚ್ಚಾಟನೆ..!

ಬಿಜೆಪಿಯ ಹಿರಿಯ ನಾಯಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯ ಬಿಜೆಪಿ ನಾಯಕರ ವಿರುದ್ದ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್‌ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಬಸನಗೌಡ ಪಾಟೀಲ್‌ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು […]

ಚಿಕ್ಕಮಗಳೂರಿಗೆ ಸಮೀಪವೇ ಬಂದ ಒಂಟಿ ಸಲಗ: ಸ್ಥಳೀಯರಲ್ಲಿ ಆತಂಕ

ಚಿಕ್ಕಮಗಳೂರು: ಕಳೆದ ರಾತ್ರಿ ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು, ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಸಿಸಿಟಿವಿಯಲ್ಲಿ ಸೆರೆನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳ ಹರಸಾಹಸಸಲಗವನ್ನು ಕಾಡು ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ […]

ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು:ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು. ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತಂದಿದ್ದು, ಅದನ್ನು ಪುನರ್ ಪರ್ಯಾಲೋಚಿಸಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು. “ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ […]

ಚಿಕ್ಕಮಗಳೂರು ಜಿಲ್ಲಾ‌ ಪ್ರವಾಸ ಮಾರ್ಚ್ 15 ರಿಂದ 17 ವರೆಗೆ ತಾತ್ಕಾಲಿಕ ನಿರ್ಬಂಧ..!

ಚಿಕ್ಕಮಗಳೂರು ಜಿಲ್ಲಾಡಳಿತವು ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ದತ್ತಪೀಠದಲ್ಲಿ ನಡೆಯಲಿರುವ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳ ಹೆಚ್ಚಿನ ಸಂಖ್ಯೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗಿರಿಸಾಲೆಯ ಹೊಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು […]