ಪೋಲಿಸರು ಸ್ವತ ವಾಹನದ‌‌‌ ಮೇಲೆ‌ ಪೋಲಿಸ್ ಎಂದು ಬರೆಸುವಂತಿಲ್ಲ:ಡಾ.ಜಿ ಪರಮೇಶ್ವರ್

ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ ಪರಮೇಶ್ವರ್​ ಉತ್ತರಿಸಿದ್ದಾರೆ. ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು […]

ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರ ಮಾಹಿತಿ ನೀಡಲು ಸಿಎಂಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ.ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದುಬೈಗೆ ಬೇರೆ ಬೇರೆ ದೇಶಗಳಿಗೆ […]

3025 ಎಕರೆ ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ: ಈಶ್ವರ ಖಂಡ್ರೆ

ವಿಧಾನಪರಿಷತ್ತು: ಶಿರಾ ತಾಲೂಕು ಮುದಿಗೆರೆಯ ಅಮೃತ ಮಹಲಾ ಕಾವಲ್ ನ 3025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ, ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯ ಚಿದಾನಂದ್ ಎಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುದಿಗೆರೆ ಅಮೃತ ಮಹಲ್ ಅನ್ನು ರಾಜ್ಯ ಅರಣ್ಯ ಎಂದು ಅಂದಿನ ಮೈಸೂರು ಮಹಾರಾಜರು 1900ರಲ್ಲಿ ಅಧಿಸೂಚನೆ ಹೊರಡಿಸಿರುತ್ತಾರೆ. ಒಂದು ಬಾರಿ ಅರಣ್ಯ ಎಂದು ಅಧಿಸೂಚನೆ ಆದ […]

ಟೆಕ್ನಿಕಲ್ ಆಫಿಸರ್ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೆಎಸ್‌ಎಪಿಎಸ್ ವತಿಯಿಂದ ವೈರಲ್ ಲೋಡ್ ಲ್ಯಾಬೊರೇಟರಿ(ವಿಎಲ್‌ಎಲ್) ಮಂಜೂರಾಗಿದ್ದು ಈ ವಿಭಾಗಕ್ಕೆ ಅವಶ್ಯವಿರುವ ಟೆಕ್ನಿಕಲ್ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.05 ಕಡೆಯ ದಿನವಾಗಿರುತ್ತದೆ. ಟೆಕ್ನಿಕಲ್ ಆಫಿಸರ್ ಹುದ್ದೆ 01, ವೇತನ ರೂ.35000/- ಇರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಸಂಸ್ಥೆಯ ವೆಬ್‌ಸೈಟ್ www.sims_shimogaj.com ನಲ್ಲಿ ಪಡೆಯತಕ್ಕದ್ದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ […]

ಕುವೆಂಪು ವಿವಿ ಅಂತರ್ ಕಾಲೇಜು ದೇಹಧಾರ್ಢ್ಯ ಸ್ಪರ್ಧೆಯಲ್ಲಿ ಪವನ್’ಗೆ ಚಿನ್ನದ ಪದಕ..!

ಶಿಕಾರಿಪುರ: ಸರ್ಕಾರಿ ಪ್ರಥಮದರ್ಜೆ ಕಾಲೇಜು ತರೀಕೆರೆಯಲ್ಲಿ ನೆಡೆದ 2024 – 25ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಪುರುಷರ ಅಂತರ ಕಾಲೇಜು ದೇಹಧಾರ್ಡ್ಯತೆ ಸ್ಪರ್ದೆಯಲ್ಲಿ ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪವನ್ ಜೆ.ಎಂ ತೃತೀಯ ಬಿ.ಎ.ನಲ್ಲಿ ವಿದ್ಯಾರ್ಥಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಅಂತರ್ ಕಾಲೇಜು ಮಟ್ಟದ 85 ಕೆ ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಬಂಗಾರದ ಪದಕ ಪಡೆದು ಕಾಲೇಜುಗೆ ಕೀರ್ತಿಯನ್ನು ತಂದಿರುತ್ತಾನೆ‌. ಶಿಕಾರಿಪುರ ನಿವಾಸಿ ಬಸ್ ಏಜೆಂಟ್ ಮಂಜುನಾಥ ಅವರ ಪುತ್ರನಾಗಿದಾನೆ. ಈ […]

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ ಸಾವು..!

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ  ಸಿಲುಕಿ ಮೃತಪಟ್ಟಿದೆ. ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಶುಕ್ರವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆ ರಕ್ಷಣೆಗೆ ಪ್ರಯತ್ನಿಸಿದರು.  ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಉಸಿರಾಟ ನಿಲ್ಲಿಸಿದ್ದು, ಮೃತಪಟ್ಟಿದೆ ಎಂದು ಅಧಿಕಾರಿಗಳು ಘೋಷಣೆ ಮಾಡಿದರು. ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ […]

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ – ಸಾವು ಬದುಕಿನ ನಡುವೆ ಹೋರಾಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆ ಒಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ ಬಳಿಕ ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ನಂತರ ಮೂಡಿಗೆರೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಚಿರತೆಗೆ ಅಗತ್ಯವಾದ ರಕ್ಷಣೆಯನ್ನು ನೀಡಲು ಶ್ರಮಿಸುತ್ತಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಲು ಶಿವಮೊಗ್ಗದಿಂದ ಅರವಳಿಕೆ ತಜ್ಞರನ್ನು ಕರೆಸಲಾಗುತ್ತಿದೆ. ಅರಣ್ಯಾಧಿಕಾರಿಗಳು ಚಿರತೆಗೆ ಅರವಳಿಕೆ ನೀಡಿ ಅದನ್ನು ಸುರಕ್ಷಿತ ಸ್ಥಳಕ್ಕೆ […]

ಶಿರಾಳಕೊಪ್ಪ ಪುರಸಭೆ :ಎ ಮತ್ತು ಬಿ ಖಾತಾ ಪಡೆಯಲು ಅವಕಾಶ

ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪುರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಶಿರಾಳಕೊಪ್ಪ ಪುರಸಭೆ ಪ್ರಕಟಣೆಯಲ್ಲಿ ತಿಳಿಸಿದೆ. ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿAದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ […]

ಅಂಬ್ಲಿಗೊಳ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡು (ಪೆಲೆಟ್ಸ್) ಹೊಡೆದ ಗಾಯವೂ ಇರುವುದಾಗಿ ಮಾಧ್ಯಮಗಳಲ್ಲಿ ಸಚಿತ್ರ […]

ಅನಧಿಕೃತ ರೆವಿನ್ಯೂ ಬಡಾವಣೆಗಳಿಗೆ ’ಬಿ’ ಖಾತಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅನಧಿಕೃತ ಬಡಾವಣೆಗಳಿಗೆ ’ಬಿ’ ಖಾತಾ ನೀಡಿ ಆಧಾಯಗಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ, ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸದ ಅವರು, ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ. ಪರಿಣಾಮ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇದಕ್ಕೆ ಅಂತ್ಯ ಹಾಡಬೇಕಿದೆ. ಹೀಗಾಗಿ ಈ ರೀತಿಯ ನಿವೇಶನಗಳಿಗೆ ’ಬಿ’ ಖಾತಾಗಳನ್ನು ನೀಡಲು ಅಭಿಯಾನ ಆರಂಭಿಸುವಂತೆ ನಿರ್ದೇಶಿಸಿದರು. ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಅನಧಿಕೃತ ಬಡಾವಣೆಗಳು ಇವೆ. […]