ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಖಂಡ್ರೆ ಸೂಚನೆ

ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ. […]

ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಚಿಂಕೆ ಮರಿ ಸಾವು..!

ಶಿವಮೊಗ್ಗ: ಅರಣ್ಯ ಅಧಿಕಾರಿಗಳಿಂದ ಜಿಂಕೆ ಮರಿಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಗ್ರಾಮದ ಬಳಿ ಶನಿವಾರ ನಡೆದಿದೆ. ಉಳವಿ ಗ್ರಾಮದಿಂದ ಶಿರಾಳಕೊಪ್ಪ ಹೋಗುವ ಮಾರ್ಗದಲ್ಲಿ ಬರುವ ದಟ್ಟ ಕಾಡಿನ ನಡುವೆ ಚಿಂಕೆ ಮರಿ ಒಂದು ದಿಢೀರನೇ ರಸ್ತೆಗೆ ಬಂದಿದೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಪರಿಚಿತ ಕಾರು ಒಂದು ಚಿಂಕೆ ಮರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಮರಿಯ ಕಾಲಿಗೆ ತೀವ್ರವಾದ ಪೆಟ್ಟು ಬಿದ್ದು ರಸ್ತೆಗೆ ಬಿದ್ದಿತ್ತು. ತಕ್ಷಣ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರು ಹಾಗೂ […]

ಸಿಎಂ‌ ಸಿದ್ದರಾಮಯ್ಯನವರ ಎಲ್ಲಾ ಕಾರ್ಯಕ್ರಮ ರದ್ದು ದಿಢೀರ್ ಆಸ್ಪತ್ರೆಗೆ ದಾಖಲು..!

ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಮಾಧ್ಯಮ ತಿಳಿಸಿದೆ. […]

ಜಿಲ್ಲಾದ್ಯಂತ ಒಂದೆ ದರದಲ್ಲಿ ಅಡಿಕೆ ಖೇಣಿ ಹಿಡಿಯಲು ಖೇಣಿದಾರರ ಸಂಘ ನಿರ್ಧಾರ..!

ಶಿಕಾರಿಪುರ ತಾಲೂಕಿನ ಕಣಿವೆಮನೆ ಗ್ರಾಮದಲ್ಲಿ ಜಿಲ್ಲಾ ಅಡಿಕೆ ಖೇಣಿದಾರರ ಸೌಹಾರ್ದ ಸಹಕಾರ ಸಂಘದ ವತಿಯಿಂದ ಜಿಲ್ಲಾ ಖೇಣಿದಾರರ ಸಭೆ ನಡೆಸಲಾಯಿತು. ಈ ವೇಳೆ ಜಿಲ್ಲೆಯ ಅಡಿಕೆ ಖೇಣಿದಾರರು ಒಂದೇ ದರದಲ್ಲಿ ರೈತರ ತೋಟಗಳನ್ನು ಹಿಡಿಯಬೇಕು ಹಾಗೂ ಆಗಸ್ಟ್ 15ರ ನಂತರ ಅಡಿಕೆ ಕೊಯ್ಲು ಶುರು ಮಾಡಬೇಕು ಇದರಿಂದ ರೈತರಿಗೂ ಹಾಗೂ ಖೇಣಿದಾರರಿಗೂ ಅನುಕೂಲ ಆಗಲಿದೆ ಎಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ. ಜಿಲ್ಲಾದ್ಯಂತ ಪ್ರತಿ 75ಕೆಜಿ ಗೆ 1kg ಪೆಚ್ಚು ನಿಗದಿ ಇನ್ನು ಹೆಚ್ಚಿನ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು […]

ಕೇಂದ್ರ ಬಜೆಟ್‌ ಮಂಡನೆ ಯಾವ ಕ್ಷೇತ್ರಕ್ಕೆ ಎಷ್ಟು? ಯಾರಿಗೆ ಲಾಭನಷ್ಟ ..?

ನವದೆಹಲಿ :ಲೋಕಸಭೆಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದರು. ಈ ಬಾರಿಯ ಬಜೆಟ್ ಕೃಷಿ ವಲಯ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಹೂಡಿಕೆ ವಲಯ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವಿಶೇಷತೆಗಳನ್ನು ಹೊಂದಿದೆ. ಬಜೆಟ್ ಮಂಡನೆಯ ಆರಂಭದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಈ ಬಾರಿಯ ಬಜೆಟ್ ಬೆಳವಣಿಗೆಗೆ ಹೊಸ ಶಕ್ತಿ ನೀಡುವ ಒಳಗೊಳ್ಳುವ ಅಭಿವೃದ್ಧಿ ಖಾತ್ರಿಪಡಿಸುವ, ಖಾಸಗಿ ಹೂಡಿಕಯನ್ನು ಉತ್ತೇಜಿಸುವ ಮತ್ತು ಮಧ್ಯಮವರ್ಗದವರ […]

ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಕೋಟೆಹೊಂಡ ರವಿ ಶರಣಾಗತಿ :ನಕ್ಸಲ್ ಮುಕ್ತ ರಾಜ್ಯವಾಗಿ ಘೋಷಣೆ..!

ಚಿಕ್ಕಮಗಳೂರು: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ […]

ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಣೆ : ಈಶ್ವರ ಖಂಡ್ರೆ

ಬೆಂಗಳೂರು: ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿಗೆ ಅತ್ಯಾವಶ್ಯಕವಾಗಿರುವ ಹೆಸರಘಟ್ಟ ಕೆರೆ ಮತ್ತು ಸುತ್ತಲಿನ ಪ್ರದೇಶವನ್ನು ‘ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಿದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 133 ಪ್ರಭೇದದ ಪಕ್ಷಿಗಳು, 40 ಸ್ಥಳೀಯ ಹಾಗೂ ನೈಸರ್ಗಿಕ ಸಸ್ಯಗಳು ಮತ್ತು ಚಿರತೆ, ತೋಳ, ಕಾಡುಪಾಪ ಮೊದಲಾದ ವನ್ಯಜೀವಿಗಳಿಗೆ ಆಶ್ರಯತಾಣವಾದ ಈ ಕಾನನ ಮತ್ತು ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ ತಮ್ಮ […]

ಪೋಲೀಸ್ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಇಲ್ಲಿದೆ ಮಾಹಿತಿ..!

ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಪೇದೆಗಳಿಂದ ಡಿವೈಎಸ್ಪಿ ಹುದ್ದೆವರೆಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇಖಡ 2 ರಿಂದ ಶೇಖಡ 3 ಕ್ಕೆ ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕ ಸೇವಾ ಆಯೋಗ ತಿದ್ದುಪಡಿ ನಿಯಮಗಳು 2024 ರ ಕರಡನ್ನು ಸಂವಿಧಾನದ ಅನುಚ್ಛೇದ 318ರ ಅನ್ವಯ ರಾಜ್ಯಪಾಲರ ಅನುಮೋದನೆ ಪಡೆದು ರಾಜ್ಯಪತ್ರದಲ್ಲಿ ಪ್ರಕಟಿಸಿ, ಸಲಹೆಗಳನ್ನು ಆಹ್ವಾನಿಸಲು ಸಚಿವ ಸಂಪುಟ ನಿರ್ಧರಿಸಿದೆ. ಕರಡು ನಿಯಮಗಳಲ್ಲಿ ಯಾವುದೇ […]

ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಣ್ಣ ಹಣಕಾಸು ಸಂಸ್ಥೆಗಳ ಹಾವಳಿ ತಡೆಗೆ ನೂತನ ವಿಧೇಯಕ ತರಲು ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಸಣ್ಣ ಹಣಕಾಸು ಸಂಸ್ಥೆಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಂಕಿತ ಪಡೆಯಲಿದೆ. ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ದಿಶೆಯಲ್ಲಿ ಪರಮಾಧಿಕಾರ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ರಾಜ್ಯದಲ್ಲಿ ಸಣ್ಣ ಹಣಕಾಸು […]

ಕೇಂದ್ರ ಬಜೆಟ್ ಅಧಿವೇಶನ ನಾಳೆಯಿಂದ ಆರಂಭ:ಸಚಿವ ಕಿರಣ್ ರಿಜಿಜು

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿಂದು ಸರ್ವಪಕ್ಷಗಳ ಸಭೆ ನಡೆಯಿತು. ಸಭೆ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸುದ್ದಿಗಾರರೊಂದಿಗೆ ಮಾತನಾಡಿ, ಸುಗಮ ಕಲಾಪಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಕೋರಲಾಗಿದೆ. ನಾಳೆ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ತದ ನಂತರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು, ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಶನಿವಾರ ಕೇಂದ್ರ ಬಜೆಟ್ ಮಂಡನೆಯಾಗಲಿದೆ. 16 ಮಸೂದೆಗಳು ಸದನದಲ್ಲಿ […]