ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಠಿಣ ಕಾನೂನು ಜಾರಿಗೆ ಸಿದ್ದತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಸಣ್ಣ ಹಣಕಾಸು ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಂಡದ ಪ್ರಮಾಣವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಸಷ್ಟಪಡಿಸಿದ್ದಾರೆ. ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ರಾಜ್ಯಪಾಲರಿಗೆ ಈಗಾಗಲೇ ಮಸೂದೆ ಕಳುಹಿಸಲಾಗಿದೆ. ಅವರು ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ […]

ನಾಳೆ ದೆಹಲಿ ವಿಧಾನಸಭಾ ಚುನಾವಣೆಗೆ ರಾಷ್ಟ್ರ ರಾಜಧಾನಿ ಸಕಲ ಸಿದ್ಧತೆ..!

ದೆಹಲಿ: 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಕೋಟಿ 56 ಲಕ್ಷಕ್ಕೂ ಹೆಚ್ಚು ಮತದಾರರು ಕಣದಲ್ಲಿರುವ 699 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ. ಈ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ. ಸುಗಮ ಚುನಾವಣೆಗಾಗಿ ಚುನಾವಣಾ ಆಯೋಗ 1.8 ಲಕ್ಷಕ್ಕೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದೆ. ಇಲ್ಲಿಯವರೆಗೆ ಸುಮಾರು 220 ಕೋಟಿಗೂ ಅಧಿಕ […]

ಶಾಸಕ‌ ಬಿವೈ ವಿಜಯೇಂದ್ರ ಸಂಧಾನಕ್ಕೂ ಜಗ್ಗದ ರೈತರು ಮುಂದುವರಿದ ಅಹೋರಾತ್ರಿ ಧರಣಿ..!

ಶಿಕಾರಿಪುರ: ತಾಲೂಕಿಮ ಈಸೂರಿನಿಂದ -ಅಂಜನಾಪುರ ವರೆಗೆ ಕೆಇಬಿ 11 ಕೆವಿ ಗ್ರೀಡ್ ನೀಲನಕ್ಷೆ ವಿದ್ಯುತ್ ಮಾರ್ಗ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಸೋಮವಾರ ಬೆಳಗ್ಗೆಯಿಂದಲೇ ಆರಂಭವಾದ ಪ್ರತಿಭಟನೆ ಅಹೋರಾತ್ರಿ ಭಜನೆ ಮಾಡಲುವ ಮೂಲಕ‌ ಚಳಿಯನ್ನು ಲೆಕ್ಕಿಸದೇ ರೈತರು ಪ್ರತಿಭಟನೆ ಧರಣಿ ಮುಂದುವರಿಸಿದ್ದಾರೆ. ಶಾಸಕ ಬಿವೈ ವಿಜಯೇಂದ್ರ ಮನವೋಲಿಕೆ ವಿಫಲ:ಶಾಸಕ ಬಿವೈ ವಿಜಯೇಂದ್ರ ಸಂಜೆ ವೇಳೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಧರಣಿ ನಿಲ್ಲಿಸುವಂತೆ ಮನವಿ […]

ಭದ್ರಾವತಿ ಕಾರ್ಖಾನೆ ಮರುಜೀವ :ಹೆಚ್ ಡಿ ಕುಮಾರಸ್ವಾಮಿ..!

ಹಾಸನ: ಭದ್ರಾವತಿಯಲ್ಲಿ ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರು ಕಟ್ಟಿರುವ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚಿ ಹೋಗಿದೆ. ಅದಕ್ಕೆ ಮರು ಜೀವ ಪ್ರಯತ್ನಕ್ಕೂ ಕೈ ಹಾಕಿದ್ದೇನೆ ಎಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಕಾಂಗ್ರೆಸ್ ಸರಕಾರ ಎಷ್ಟರಮಟ್ಟಿಗೆ ನನಗೆ ಬೆಂಬಲ ಕೊಡುತ್ತೋ, ಬಿಡುತ್ತೋ ಗೊತ್ತಿಲ್ಲ. ಇತಿಚೆಗೆ ಜಾರ್ಖಂಡ್ ರಾಜ್ಯದ ಬೋಕಾರೋ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ್ದೆ. ಅಲ್ಲಿ ವಿಸ್ತರಣಾ ಯೋಜನೆಗೆ ₹20,000 […]

ತಾಲೂಕು ಕಚೇರಿ ಎದುರು ಪ್ರತಿಭಟನೆ ವೇಳೆ ವಿಷ ಕುಡಿಯಲು ಯತ್ನಿಸಿದ ರೈತ..!

ಶಿಕಾರಿಪುರ ಪಟ್ಟಣದ ತಾಲೂಕ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಈಸೂರಿನಿಂದ ಅಂಜನಾಪುರವರೆಗೆ ಕೆಇಬಿಗ್ರೀಡ್ ಅವೈಜ್ಞಾನಿಕ ನೀಲನಕ್ಷೆ ವಿದ್ಯುತ್ ಮಾರ್ಗದ ವಿರುದ್ದ ತಾಲೂಕ್ ಕಛೇರಿ ಎದುರು ಪ್ರತಿಭಟನೆ ವೇಳೆ ರೈತನೋರ್ವ ವಿಷ ಕುಡಿಯಲು ಯತ್ನಿಸಿದ ಘಟನೆ ನಡೆದಿದೆ. ಚಿಕ್ಕಜೋಗಿಹಳ್ಳಿಯ ಸುಭಷ್ ಚಂದ್ರ ಎನ್ನುವ ರೈತ ವಿಷ ಕುಡಿಯಲು‌ ಯತ್ನಿಸಿದ ರೈತ ಎಂದು ತಿಳಿದು ಬಂದಿದೆ. ತಕ್ಷಣ ರೈತ ಮುಖಂಡರು ಪೋಲಿಸ್ ಇಲಾಖೆ ಸಿಬ್ಬಂದಿಗಳು ಬಟರ್ ಅನ್ನು ಕಸಿದುಕೊಂಡಿದ್ದಾರೆ. ಸುದ್ದಿ ಜಾಹೀರಾತಿಗಾಗಿ-7411515737

ಪಕ್ಷದಲ್ಲಿ ಏನೆಲ್ಲಾ ಡ್ಯಾಮೇಜ್ ಆಗಬೇಕು ಎಲ್ಲಾವೂ ಆಗಿದೆ: ಬಿವೈ ವಿಜಯೇಂದ್ರ

ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಕ್ಷಕ್ಕೆ ಏನೆಲ್ಲಾ ಡ್ಯಾಮೇಜ್ ಆಗಬೇಕು ಎಲ್ಲಾ‌ ಆಗಿದೆ ಇನ್ನೊಂದು ವಾರದಲ್ಲಿ ರಾಜ್ಯಾಧ್ಯಕ್ಷರು ಯಾರು ಆಗಲಿದ್ದಾರೆ ಎಲ್ಲಾ ತಿಳಿಯಲಿದೆ. ಬಿಜೆಪಿ ಯತ್ನಲ್ ಬಣದಿಂದ ದೆಹಲಿ ಪ್ರವಾಸ ಕೈಗೊಂಡಿದ್ದು ಇಂದು ಬಿಜೆಪಿ ಹೈ ಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಒಂದು‌ ವರ್ಷದಿಂದ ನಾನು ಯಾರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ ಪಕ್ಷಕ್ಕೆ ನಿಷ್ಠನಾಗಿ ದುಡಿಯುತ್ತಿದ್ದೇನೆ.ಇನ್ನೋಂದು ವಾರ […]

ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಖಂಡ್ರೆ ಸೂಚನೆ

ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ. […]

ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಚಿಂಕೆ ಮರಿ ಸಾವು..!

ಶಿವಮೊಗ್ಗ: ಅರಣ್ಯ ಅಧಿಕಾರಿಗಳಿಂದ ಜಿಂಕೆ ಮರಿಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಗ್ರಾಮದ ಬಳಿ ಶನಿವಾರ ನಡೆದಿದೆ. ಉಳವಿ ಗ್ರಾಮದಿಂದ ಶಿರಾಳಕೊಪ್ಪ ಹೋಗುವ ಮಾರ್ಗದಲ್ಲಿ ಬರುವ ದಟ್ಟ ಕಾಡಿನ ನಡುವೆ ಚಿಂಕೆ ಮರಿ ಒಂದು ದಿಢೀರನೇ ರಸ್ತೆಗೆ ಬಂದಿದೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಪರಿಚಿತ ಕಾರು ಒಂದು ಚಿಂಕೆ ಮರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಮರಿಯ ಕಾಲಿಗೆ ತೀವ್ರವಾದ ಪೆಟ್ಟು ಬಿದ್ದು ರಸ್ತೆಗೆ ಬಿದ್ದಿತ್ತು. ತಕ್ಷಣ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರು ಹಾಗೂ […]

ಸಿಎಂ‌ ಸಿದ್ದರಾಮಯ್ಯನವರ ಎಲ್ಲಾ ಕಾರ್ಯಕ್ರಮ ರದ್ದು ದಿಢೀರ್ ಆಸ್ಪತ್ರೆಗೆ ದಾಖಲು..!

ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಮಾಧ್ಯಮ ತಿಳಿಸಿದೆ. […]

ಜಿಲ್ಲಾದ್ಯಂತ ಒಂದೆ ದರದಲ್ಲಿ ಅಡಿಕೆ ಖೇಣಿ ಹಿಡಿಯಲು ಖೇಣಿದಾರರ ಸಂಘ ನಿರ್ಧಾರ..!

ಶಿಕಾರಿಪುರ ತಾಲೂಕಿನ ಕಣಿವೆಮನೆ ಗ್ರಾಮದಲ್ಲಿ ಜಿಲ್ಲಾ ಅಡಿಕೆ ಖೇಣಿದಾರರ ಸೌಹಾರ್ದ ಸಹಕಾರ ಸಂಘದ ವತಿಯಿಂದ ಜಿಲ್ಲಾ ಖೇಣಿದಾರರ ಸಭೆ ನಡೆಸಲಾಯಿತು. ಈ ವೇಳೆ ಜಿಲ್ಲೆಯ ಅಡಿಕೆ ಖೇಣಿದಾರರು ಒಂದೇ ದರದಲ್ಲಿ ರೈತರ ತೋಟಗಳನ್ನು ಹಿಡಿಯಬೇಕು ಹಾಗೂ ಆಗಸ್ಟ್ 15ರ ನಂತರ ಅಡಿಕೆ ಕೊಯ್ಲು ಶುರು ಮಾಡಬೇಕು ಇದರಿಂದ ರೈತರಿಗೂ ಹಾಗೂ ಖೇಣಿದಾರರಿಗೂ ಅನುಕೂಲ ಆಗಲಿದೆ ಎಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ. ಜಿಲ್ಲಾದ್ಯಂತ ಪ್ರತಿ 75ಕೆಜಿ ಗೆ 1kg ಪೆಚ್ಚು ನಿಗದಿ ಇನ್ನು ಹೆಚ್ಚಿನ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು […]