ಕೇಂದ್ರ ಬಜೆಟ್‌ ಮಂಡನೆ ಯಾವ ಕ್ಷೇತ್ರಕ್ಕೆ ಎಷ್ಟು? ಯಾರಿಗೆ ಲಾಭನಷ್ಟ ..?

ನವದೆಹಲಿ :ಲೋಕಸಭೆಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದರು. ಈ ಬಾರಿಯ ಬಜೆಟ್ ಕೃಷಿ ವಲಯ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಹೂಡಿಕೆ ವಲಯ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವಿಶೇಷತೆಗಳನ್ನು ಹೊಂದಿದೆ. ಬಜೆಟ್ ಮಂಡನೆಯ ಆರಂಭದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಈ ಬಾರಿಯ ಬಜೆಟ್ ಬೆಳವಣಿಗೆಗೆ ಹೊಸ ಶಕ್ತಿ ನೀಡುವ ಒಳಗೊಳ್ಳುವ ಅಭಿವೃದ್ಧಿ ಖಾತ್ರಿಪಡಿಸುವ, ಖಾಸಗಿ ಹೂಡಿಕಯನ್ನು ಉತ್ತೇಜಿಸುವ ಮತ್ತು ಮಧ್ಯಮವರ್ಗದವರ […]

ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಕೋಟೆಹೊಂಡ ರವಿ ಶರಣಾಗತಿ :ನಕ್ಸಲ್ ಮುಕ್ತ ರಾಜ್ಯವಾಗಿ ಘೋಷಣೆ..!

ಚಿಕ್ಕಮಗಳೂರು: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ […]

ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಣೆ : ಈಶ್ವರ ಖಂಡ್ರೆ

ಬೆಂಗಳೂರು: ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿಗೆ ಅತ್ಯಾವಶ್ಯಕವಾಗಿರುವ ಹೆಸರಘಟ್ಟ ಕೆರೆ ಮತ್ತು ಸುತ್ತಲಿನ ಪ್ರದೇಶವನ್ನು ‘ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಿದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 133 ಪ್ರಭೇದದ ಪಕ್ಷಿಗಳು, 40 ಸ್ಥಳೀಯ ಹಾಗೂ ನೈಸರ್ಗಿಕ ಸಸ್ಯಗಳು ಮತ್ತು ಚಿರತೆ, ತೋಳ, ಕಾಡುಪಾಪ ಮೊದಲಾದ ವನ್ಯಜೀವಿಗಳಿಗೆ ಆಶ್ರಯತಾಣವಾದ ಈ ಕಾನನ ಮತ್ತು ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ ತಮ್ಮ […]

ಪೋಲೀಸ್ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಇಲ್ಲಿದೆ ಮಾಹಿತಿ..!

ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಪೇದೆಗಳಿಂದ ಡಿವೈಎಸ್ಪಿ ಹುದ್ದೆವರೆಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇಖಡ 2 ರಿಂದ ಶೇಖಡ 3 ಕ್ಕೆ ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕ ಸೇವಾ ಆಯೋಗ ತಿದ್ದುಪಡಿ ನಿಯಮಗಳು 2024 ರ ಕರಡನ್ನು ಸಂವಿಧಾನದ ಅನುಚ್ಛೇದ 318ರ ಅನ್ವಯ ರಾಜ್ಯಪಾಲರ ಅನುಮೋದನೆ ಪಡೆದು ರಾಜ್ಯಪತ್ರದಲ್ಲಿ ಪ್ರಕಟಿಸಿ, ಸಲಹೆಗಳನ್ನು ಆಹ್ವಾನಿಸಲು ಸಚಿವ ಸಂಪುಟ ನಿರ್ಧರಿಸಿದೆ. ಕರಡು ನಿಯಮಗಳಲ್ಲಿ ಯಾವುದೇ […]

ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಣ್ಣ ಹಣಕಾಸು ಸಂಸ್ಥೆಗಳ ಹಾವಳಿ ತಡೆಗೆ ನೂತನ ವಿಧೇಯಕ ತರಲು ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಸಣ್ಣ ಹಣಕಾಸು ಸಂಸ್ಥೆಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಂಕಿತ ಪಡೆಯಲಿದೆ. ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ದಿಶೆಯಲ್ಲಿ ಪರಮಾಧಿಕಾರ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ರಾಜ್ಯದಲ್ಲಿ ಸಣ್ಣ ಹಣಕಾಸು […]

ಕೇಂದ್ರ ಬಜೆಟ್ ಅಧಿವೇಶನ ನಾಳೆಯಿಂದ ಆರಂಭ:ಸಚಿವ ಕಿರಣ್ ರಿಜಿಜು

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿಂದು ಸರ್ವಪಕ್ಷಗಳ ಸಭೆ ನಡೆಯಿತು. ಸಭೆ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸುದ್ದಿಗಾರರೊಂದಿಗೆ ಮಾತನಾಡಿ, ಸುಗಮ ಕಲಾಪಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಕೋರಲಾಗಿದೆ. ನಾಳೆ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ತದ ನಂತರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು, ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಶನಿವಾರ ಕೇಂದ್ರ ಬಜೆಟ್ ಮಂಡನೆಯಾಗಲಿದೆ. 16 ಮಸೂದೆಗಳು ಸದನದಲ್ಲಿ […]

ಶಿವಮೊಗ್ಗಕ್ಕೆ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ

ಶಿವಮೊಗ್ಗ: ಇಂದು ಸಂಜೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ಸಂಜೆ 5 ಗಂಟೆಗೆ ವಿಮಾನ ಮೂಲಕ‌ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 6 ಗಂಟೆಗೆ ಆಗಮಿಸಲಿದ್ದು ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಗುರುವಾರ ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ ದಿ.31 ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಪ್ರಯಾಣ ಬೆಳಸಲಿದ್ದಾರೆ. ಸುದ್ದಿ ಮತ್ತು ಜಾಹೀರಾತಿಗಾಗಿ-7411515737

ಪ್ರಯಾಗ್ ರಾಜ್ ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ರಾಜ್ಯದ 4 ಮಂದಿ ಸಾವು..!

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಭಕ್ತರ ಜನದಟ್ಟಣೆಯಿಂದ ಕಾಲ್ತುಳಿತ ಉಂಟಾಗಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದ್ದಾರೆ. ಮಹಾಕುಂಭ ಮೇಳದ ಕಾಲ್ತುಳಿತಕ್ಕೆ ಸಿಲುಕಿದ್ದ ಇವರನ್ನು ಪ್ರಯಾಗರಾಜ್ ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಇದೇ 26 ರಂದು ಖಾಸಗಿ ಸಾರಿಗೆ ಸಂಸ್ಥೆಯ ಮೂಲಕ 13 ಜನರ ತಂಡ ಕುಂಭಮೇಳಕ್ಕೆ ತೆರಳಿತ್ತು ಎಂದು ಅವರು ವಿವರ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ […]

ಸರ್ವೋದಯ ಮಂಡಲದಿಂದ ಈಸೂರಿನಲ್ಲಿ 2ದಿನಗಳ ರಾಷ್ಟ್ರೀಯ ಸಮಾವೇಶ ಹುತಾತ್ಮರ ದಿನ ಆಚರಣೆ..!

ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ಈಸೂರು ಹುತಾತ್ಮರ ಸ್ಮಾರಕದಲ್ಲಿ ರಾಷ್ಟ್ರೀಯ ಸಮಾವೇಶ ಮತ್ತು ಹುತಾತ್ಮರ ದಿನ ಆಚರಿಸುತ್ತಿದೆ. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಈಸೂರು ಗ್ರಾಮದ ವೀರ ಹೋರಾಟಗಾರರು ಸಕ್ರಿಯವಾಗಿ ಭಾಗವಹಿಸಿದ್ದರು.1942 ರ ಸೆಪ್ಟೆಂಬರ್ 25 ರಂದು ಗ್ರಾಮದ ವೀರಭದ್ರಸ್ವಾಮಿ ದೇವಾಲಯದ ಮೇಲೆ ತ್ರಿವರ್ಣಧ್ವಜ ಹಾರಿಸಿ ತಮ್ಮ ಗ್ರಾಮ ಸ್ವತಂತ್ರ್ಯ ಗಳಿಸಿತು. ಎಂಬುದನ್ನು ತೋರಿಸಿಕೊಟ್ಟರು. ಈ ಮೂಲಕ ಈಸೂರಿನ ಕೀರ್ತಿ ದೇಶಾದ್ಯಂತ ಪಸರಿಸಿತ್ತು. […]

ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]