ಫ್ರೀಡಂ ಪಾರ್ಕ್ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು(ಫ್ರೀಡಂ ಪಾರ್ಕ್)ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ(ರೂ.5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿಸಿದರು. ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಕರಕುಶಲ ಉತ್ಪನ್ನಗಳನ್ನು ಖರೀದಿಸಿ, ಕುಶಲಕರ್ಮಿಗಳನ್ನು ಉತ್ತೇಜಿಸಿದರು. ಹಾಗೂ ತಿಂಡಿ ತಿನಿಸು ಮಳಿಗೆಯಲ್ಲಿ ತಿನಿಸುಗಳನ್ನು ಸವಿದರು. ಈ ವೇಳೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಅತ್ಯುತ್ತಮ ಕುಶಲಕರ್ಮಿಗಳು ಇದ್ದು, ಅಚ್ಚುಕಟ್ಟಾಗಿ […]
ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿದ ಅವರು ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಎತ್ತರದ ಸಸಿಗಳನ್ನು ಹೆಚ್ಚು ಹೆಚ್ಚು ನೆಟ್ಟು, ಅವುಗಳಿಗೆ ನೀರುಣಿಸಿ, ಜಿಯೋ […]
ಚಾರ್ಮಾಡಿ ಘಾಟಿಯ ಬಳಿ ಅರಣ್ಯಕ್ಕೆ ಭಾರಿ ಪ್ರಮಾಣದ ಕಾಡ್ಗಿಚ್ಚು..!

ಕೊಟ್ಟಿಗೆಹಾರ: ಚಾರ್ಮಾಡಿಘಟ್ ಬಳಿ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆಪರದಾಡಿದ್ದಾರೆ ಎನ್ನಲಾಗಿದೆ.ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್ರಾಜ್(ಚಾಲಕ) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ 10 ಕಿಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ […]
ಕೊರಟಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಿವರಾಜ್ ಜಿಪಿ ಅವಿರೋಧ ಆಯ್ಕೆ

ಶಿಕಾರಿಪುರ ತಾಲೂಕಿನ ಕೊರಟಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಶಿವರಾಜ್ ಜಿಪಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪಾಲಾಕ್ಷಪ್ಪ ಮುಳಕೊಪ್ಪ ಅವರು ಆಯ್ಕೆಯಾಗಿದ್ದಾರೆ. ಗ್ರಾಮದ ಮುಖಂಡರು ಕಾರ್ಯಕರ್ತರು ಅಭಿನಂದಿಸಿದ್ದಾರೆ.
ಶಿಕಾರಿಪುರ ಪಿಎಲ್ ಡಿ ಬ್ಯಾಂಕ್ ಕಾಂಗ್ರೇಸ್ ತೆಕ್ಕೆಗೆ..!

ಶಿಕಾರಿಪುರ ತಾಲೂಕು ಪ್ರಾಥಮಿಕ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರ ಉಪಾಧ್ಯಕ್ಷರಾದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಲೋಹಿತ್ ಕಪ್ಪನಹಳ್ಳಿ ಉಪಾಧ್ಯಕ್ಷರಾಗಿ ಶಾಂತಮ್ಮ ಈಶ್ವರಪ್ಪ ಆಯ್ಕೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ನಾಗರಾಜ್ ಗೌಡ ಮಾತನಾಡಿ ಕಳೆದ 25 ವರ್ಷಗಳ ನಂತರ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರ ಪರಿಶ್ರಮದಿಂದ ನಮ್ಮ ಪಕ್ಷ ಬೆಂಬಲಿತರು ಅಧಿಕಾರ ಹಿಡಿದಿದ್ದು ಗ್ರಾಮೀಣ ರೈತರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ನಗರದ […]
ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ..!

ಶಿವಮೊಗ್ಗ: ಮಲೆನಾಡಿನ ಅನೇಕ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿಗಿದ್ದು ಅನೇಕ ಕಡೆಗಳಲ್ಲಿ ಕಾಡು ಆನೆಗಳ ದಾಳಿಯಿಂದ ರೈತರ ಬೆಳೆಗಳು ನಾಶವಾಗಿದೆ ಪ್ರಾಣಿಹಾನಿಯಂತ ಘಟನೆಗಳು ನಡೆಯುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದರು. ಶಿವಮೊಗ್ಗ ನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಎದುರು ಬಿಜೆಪಿ ರೈತಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಿ ಕಾಡುಪ್ರಾಣಿಗಳಿಂದ ದಾಳಿಗೆ ಒಳಾದ ಕುಟುಂಬಕ್ಕೆ ಪರಿಹಾರ ಹಾಗೂ ಬೆಳೆಹಾನಿಯಾದ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಮನವಿ ಮಾಡಲಾಯಿತು. ಈ […]
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ […]
ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಮತ್ತು ಅರಣ್ಯಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ, ಕಾಡ್ಗಿಚ್ಚು ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನಿರ್ದೇಶಿಸಲೂ ಸೂಚಿಸಿದ್ದಾರೆ. ಚಾರ್ಮಾಡಿಘಾಟ್ ಕಾಡ್ಗಿಚ್ಚಿನ ವಿವರ ಕೇಳಿಸ ಸಚಿವರು :ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ […]
ಬಿ.ಎಸ್ ಯಡಿಯೂರಪ್ಪನವರ ವಿರುದ್ಧದ ಅಪಮಾನ ಕಾರ್ಯಕರ್ತರು ನೊಂದಿದ್ದಾರೆ : ಬಿ ವೈ ವಿಜಯೇಂದ್ರ

ಶಿವಮೊಗ್ಗದ ಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದಲ್ಲಿನ ಆಂತರಿಕ ಗೊಂದಲಗಳು ತನಗೆ ಖುಷಿ ತಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುವ ಮೊದಲೇ ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳು ಬಗೆಹರಿಯಬೇಕು. ನಾನೂ ಸಹ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ. ಈ ಅಹಿತ ಬೆಳವಣಿಗೆಗಳು ನನಗೂ ಸಂತೋಷ ತಂದಿಲ್ಲ. ಕಾರ್ಯಕರ್ತರಲ್ಲೂ ಸಹ ಬೇಸರದಿಂದಿದ್ದಾರೆ. ಕೇಂದ್ರ ನಾಯಕರ ಮೇಲೆ ನನಗೆ ವಿಶ್ವಾಸವಿದೆ. ವಿಶೇಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ […]
FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ

ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]