ಮಂಗಳೂರು: ಸಹಕಾರಿ ಬ್ಯಾಂಕ್ ದರೋಡೆ, 12 ಕೋಟಿ ರೂ. ಚಿನ್ನ, ನಗದು ಲೂಟಿ

ದಕ್ಷಿಣ ಕನ್ನಡ: ಉಳ್ಳಾಲ (ದಕ್ಷಿಣ ಕನ್ನಡ): ಬೀದರ್ ನಗರದಲ್ಲಿ ಎಟಿಎಂಗೆ ಹಣ ತುಂಬಲು ಬಂದ ವಾಹನದ ದರೋಡೆ ಮಾಡಿರುವ ಘಟನೆ ಹಸಿರಾಗಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (ಕೋಟೆಕಾರು ಬ್ಯಾಂಕ್) ಮಧ್ಯಾಹ್ನ 11.30ರಿಂದ 12.30ರ ನಡುವಿನ ಅವಧಿಯಲ್ಲಿ ಐದು ಮಂದಿ ಮುಸುಕುಧಾರಿಗಳು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ ಚಿನ್ನಾಭರಣ ಮತ್ತು ನಗದು ಲೂಟಿ ಮಾಡಿದ್ದಾರೆ. ಇವರು ಸುಮಾರು ರೂ. 12 ಕೋಟಿ ರೂ. ಮೌಲ್ಯದ ನಗದು ಮತ್ತು […]
ಹಾಸನ: ಪತ್ನಿ ಕಿರುಕುಳ ಆರೋಪ, ಸಾಫ್ಟ್ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆ

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ಅಂತಹದ್ದೇ ಕೆಲವು ಪ್ರಕರಣಗಳು ವರದಿಯಾಗುತ್ತಿವೆ. ಹೆಂಡತಿ ಕಾಟಕ್ಕೆ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಹಾಸನದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕ್ರೀಡಾಶಾಲೆ-ಕ್ರೀಡಾ ನಿಲಯಗಳಿಗೆ ಆಯ್ಕೆ

ಶಿವಮೊಗ್ಗ,07 ( ಕರ್ನಾಟಕ ವಾರ್ತೆ) ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಕ್ರೀಡಾಶಾಲೆ / ಕ್ರೀಡಾನಿಲಯಗಳ ಪ್ರವೇಶಕ್ಕೆ ವಿವಿಧ ಮಟ್ಟದಲ್ಲಿ ಆಯ್ಕೆ ನಡೆಸಲಾಗುವುದು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಮಾಡಲಾಗುವುದು. ದಿ: 20-01-2025 ರಂದು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು, ತೀರ್ಥಹಳ್ಳಿ. ದಿ: 21-01-2025 ಸಾಗರ ತಾಲ್ಲೂಕಿನಲ್ಲಿ ಸಾಗರ ತಾಲ್ಲೂಕು ಕ್ರೀಡಾಂಗಣ. ದಿ: 23-01-2025 ಹೊಸನಗರ ತಾಲ್ಲೂಕಿನಲ್ಲಿ ಹೊಸನಗರ ತಾಲ್ಲೂಕು ಕ್ರೀಡಾಂಗಣ. ದಿ: 24-01-2025 ಸೊರಬ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು […]
ತೀರ್ಥಹಳ್ಳಿ : ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ, ಜನವರಿ 15, (ಕರ್ನಾಟಕ ವಾರ್ತೆ) : ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜ. 20 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬAಧ ಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;9448289508.
ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ

ಶಿವಮೊಗ್ಗ, ಜ.17 ( ಕರ್ನಾಟಕ ವಾರ್ತೆ): ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಜ.22 ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ನ ಬಸವಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವ ಏರ್ಪಡಿಸಲಾಗಿದೆ.ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಅಗ್ರಾಸನ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ರವರ ಉಪಸ್ಥಿತಿಯಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ […]
ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]
ಜ.22 ರಂದು ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ ಸುಗ್ಗಿ ಸಂಭ್ರಮ

ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಜ.22 ರ ಮಧ್ಯಾಹ್ನ 2 ಗಂಟೆಗೆ ಇರುವಕ್ಕಿಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 9 ನೇ ವಾರ್ಷಿಕ ಘಟಿಕೋತ್ಸವ ಸುಗ್ಗಿ ಸಂಭ್ರಮವನ್ನು ಏರ್ಪಡಿಸಲಾಗಿದೆ.ರಾಜ್ಯಪಾಲರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷಿ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಎನ್.ಚಲುವರಾಯಸ್ವಾಮಿ ಗೌರವ ಉಪಸ್ಥಿತಿ ಇರಲಿದ್ದು, ರಾಷ್ಟಿçÃಯ ಜೀವ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಪ್ರೊ.ಎಲ್.ಎಸ್ ಶಶಿಧರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕೆಳದಿ […]
ಯುವನಿಧಿ ನೋಂದಣಿ ಅಭಿಯಾನ

ಶಿಕಾರಿಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಜ.20ವರೆಗೆ ಕಾಲೇಜಿನಲ್ಲಿ ಸಹಾಯಕೇಂದ್ರ ಸ್ಥಾಪಿಸಲಾಗಿದೆ. ಯುವನಿಧಿ ಅರ್ಜಿ ಸಲ್ಲಿಸುವ ಯುವಕ/ಯುವತಿಯರು 2022, 2023 ಹಾಗೂ 2024ರಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸಿರಬಾರದು ಎಂಬ ನಿಬಂಧನೆಗಳಿವೆ. ಅರ್ಹ ಯುವಕ/ಯುವತಿಯರು ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಸ್ಥಳೀಯ ಸೈಬರ್ ಕೇಂದ್ರಗಳು, ಸೇವಾಸಿಂಧು ಪೋರ್ಟಲ್ […]
8ನೇ ವೇತನ ಆಯೋಗ ಸ್ಥಾಪನೆಗೆ ಕೇಂದ್ರ ಸಂಪುಟ ಅಸ್ತು; ಸರ್ಕಾರಿ ನೌಕರರಿಗೆ ಸಖತ್ ಖುಷಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ವೇತನ ಆಯೋಗ ವ್ಯವಸ್ಥೆಗೆ ತಿಲಾಂಜಲಿ ಹಾಡಲಿದೆ. ವೇತನ ಪರಿಷ್ಕರಣೆಗೆ ಹೊಸ ವ್ಯವಸ್ಥೆ ರೂಪಿಸಲಿದೆ ಎಂದು ದಟ್ಟವಾಗಿ ಹಬ್ಬಿದ್ದ ಸುದ್ದಿಗೆ ತೆರೆ ಬಿದ್ದಿದೆ. 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಂಪುಟ ಇಂದು ಗುರುವಾರ ಅಸ್ತು ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಡಾ. ಎ ವೈಷ್ಣವ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾಡುತ್ತಾ ಬಂದಿದ್ದ ಒತ್ತಾಯಗಳಿಗೆ ಸರ್ಕಾರ ಬಗ್ಗಿದೆ. ಪ್ರಸಕ್ತ ಚಾಲ್ತಿಯಲ್ಲಿರುವ 7ನೇ ವೇತನ ಆಯೋಗದ ಶಿಫಾರಸುಗಳು […]
ಹೃದ್ರೋಗದ ಅಪಾಯ ಕಡಿಮೆ ಮಾಡಲು ಈ 6 ತರಕಾರಿಗಳನ್ನು ಸೇವನೆ ಮಾಡಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯವಾಗಿರಲು ನಾನಾ ರೀತಿಯ ಕಸರತ್ತುಗಳು ನಡೆಯುತ್ತಲೇ ಇರುತ್ತದೆ. ಅದರಲ್ಲಿಯೂ ಹೃದ್ರೋಗದ ಅಪಾಯ ಕಡಿಮೆ ಮಾಡಿ ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಳ್ಳುವುದು ಸುಲಭದ ಮಾತಲ್ಲ. ಏಕೆಂದರೆ ನಾವು ಆರೋಗ್ಯವಾಗಿರಲು ನಮ್ಮ ಆಹಾರ ಪದ್ಧತಿ ಸರಿಯಾಗಿ ಇರಬೇಕು. ಅದಲ್ಲದೆ ಈಗ ಚಳಿಗಾಲವಾದ್ದರಿಂದ ಹಲವಾರು ರೀತಿಯ ಆರೋಗ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಅದಕ್ಕೆಲ್ಲಾ ಪರಿಹಾರವೆಂದರೆ ನಾವು ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಮಾಡಬೇಕು ಅದರಲ್ಲಿಯೂ ಹಸಿರು ತರಕಾರಿಗಳ ಸೇವನೆ ನಮ್ಮ ಹೃದಯದ ಆರೋಗ್ಯವನ್ನು ಚೆನ್ನಾಗಿಡುವುದರ ಜೊತೆಗೆ ಹೃದ್ರೋಗದ ಅಪಾಯವೂ ಕಡಿಮೆ […]