ಸರ್ವೋದಯ ಮಂಡಲದಿಂದ ಈಸೂರಿನಲ್ಲಿ 2ದಿನಗಳ ರಾಷ್ಟ್ರೀಯ ಸಮಾವೇಶ ಹುತಾತ್ಮರ ದಿನ ಆಚರಣೆ..!

ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ಈಸೂರು ಹುತಾತ್ಮರ ಸ್ಮಾರಕದಲ್ಲಿ ರಾಷ್ಟ್ರೀಯ ಸಮಾವೇಶ ಮತ್ತು ಹುತಾತ್ಮರ ದಿನ ಆಚರಿಸುತ್ತಿದೆ. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಈಸೂರು ಗ್ರಾಮದ ವೀರ ಹೋರಾಟಗಾರರು ಸಕ್ರಿಯವಾಗಿ ಭಾಗವಹಿಸಿದ್ದರು.1942 ರ ಸೆಪ್ಟೆಂಬರ್ 25 ರಂದು ಗ್ರಾಮದ ವೀರಭದ್ರಸ್ವಾಮಿ ದೇವಾಲಯದ ಮೇಲೆ ತ್ರಿವರ್ಣಧ್ವಜ ಹಾರಿಸಿ ತಮ್ಮ ಗ್ರಾಮ ಸ್ವತಂತ್ರ್ಯ ಗಳಿಸಿತು. ಎಂಬುದನ್ನು ತೋರಿಸಿಕೊಟ್ಟರು. ಈ ಮೂಲಕ ಈಸೂರಿನ ಕೀರ್ತಿ ದೇಶಾದ್ಯಂತ ಪಸರಿಸಿತ್ತು. […]

ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ […]

ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶರಾವತಿ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಗ್ರಾಮ ಪಂಚಾಯ್ತಿ ಹಿರೇನಲ್ಲೂರು, ಎಂಬಿಎನ್‌ಆರ್‌ಇಬಿಎ ಅಡಿಯಲ್ಲಿ ಭಾರತ್ ನಿರ್ಮಾಣ್ ರಾಜೀವ್‌ಗಾಂಧಿ ಸೇವಾ ಕೇಂದ್ರ ಹಾಗೂ ಆರ್‌ಎಲ್‌ಎಂ ವರ್ಕ್ಶೆಡ್ ಶೀರ್ಷಿಕೆಯಡಿ ನಿರ್ಮಿಸಿದ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಶರಾವತಿ ಸಂತ್ರಸ್ತರು ಸೇರಿದಂತೆ ಚಕ್ರಾ, ವರಾಹಿ ಸಂತ್ರಸ್ತರ ಪರವಾಗಿಯೂ […]

ಸಾಲೂರು-ಹರಿಹರಪುರ ನಿರಂತರ ವಿದ್ಯುತ್ ವ್ಯತ್ಯಯ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಶಿಕಾರಿಪುರ ತಾಲೂಕಿನ ಸಾಲೂರು ಹಾಗೂ ಹರಿಹರಪುರ ಗ್ರಾಮಗಳಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಮಾಡಲಾಗಿದೆ ಎಂದು ಊರಿನ ಗ್ರಾಮಸ್ಥರು ಪಟ್ಟಣದ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕಳೆದ 12 ದಿನಗಳಿಂದ ವಿದ್ಯುತ್ ಇಲ್ಲದೆ ರತರು ಬೆಳೆದ ಬೆಳೆಗಳು ನಾಶವಾಗುತ್ತಿದೆ ಮೆಸ್ಕಾಂ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಮಸ್ಯೆ ಬಗ್ಗೆ ತಿಳಿಸಲಾಗಿದ್ದು ಅವರು ಸ್ಪಂದಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕೂಡಲೇ ಮೇಲಾಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ […]

ಭುವನೇಶ್ವರಿಯ ಪುತ್ಥಳಿ ವಿಧಾನಸೌಧದಲ್ಲಿ ಸ್ಥಾಪಿಸಿದ್ದು ಸಮಸ್ತ ಕನ್ನಡಿಗರ ಹೆಮ್ಮೆಯ ದಿನ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು:ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು […]

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು […]

ದೂರು ನೀಡಿದ್ದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡು ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿವನ್ನು ತೆರೆಯಲಾಗಿದೆ ಎಂದರು.

ಫ್ರೀಡಂ ಪಾರ್ಕ್ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು‌ ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು(ಫ್ರೀಡಂ ಪಾರ್ಕ್)ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ(ರೂ.5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿಸಿದರು. ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಕರಕುಶಲ ಉತ್ಪನ್ನಗಳನ್ನು ಖರೀದಿಸಿ, ಕುಶಲಕರ್ಮಿಗಳನ್ನು ಉತ್ತೇಜಿಸಿದರು. ಹಾಗೂ ತಿಂಡಿ ತಿನಿಸು ಮಳಿಗೆಯಲ್ಲಿ ತಿನಿಸುಗಳನ್ನು ಸವಿದರು. ಈ ವೇಳೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಅತ್ಯುತ್ತಮ ಕುಶಲಕರ್ಮಿಗಳು ಇದ್ದು, ಅಚ್ಚುಕಟ್ಟಾಗಿ […]

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿದ ಅವರು ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಎತ್ತರದ ಸಸಿಗಳನ್ನು ಹೆಚ್ಚು ಹೆಚ್ಚು ನೆಟ್ಟು, ಅವುಗಳಿಗೆ ನೀರುಣಿಸಿ, ಜಿಯೋ […]