ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್ ಅಧಿಕಾರಿ, ಗ್ರಾಮ ಸಹಾಯಕ..!

ಶಿವಮೊಗ್ಗ: ಬಾಡಿಗೆ ಕಾರಿನ ಹಣ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಅವರ ಪರವಾಗಿ ಹಣ ಸ್ವೀಕರಿಸುತ್ತಿದ್ದ ಗ್ರಾಮ ಸಹಾಯಕ ಇಂದು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಘಟನೆಯ ಹಿನ್ನೆಲೆ:ಓಟಿಘಟ್ಟ ಗ್ರಾಮದ ನಿವಾಸಿ ಶ್ರೀ ಕೇಶವಮೂರ್ತಿ ಎ.ಬಿ. ಎಂಬುವವರು ತಮ್ಮ ಮಾಲೀಕತ್ವದ ‘ಮಾರುತಿ ಎರ್ಟಿಗಾ’ ಕಾರನ್ನು ಶಿವಮೊಗ್ಗದ ಎನ್.ಹೆಚ್-206 ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿಗೆ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ನೀಡಿದ್ದರು. ಪ್ರತಿ ತಿಂಗಳು ಕಾರಿನ ಬಾಡಿಗೆ ಮೊತ್ತವನ್ನು ಚೆಕ್ ಮೂಲಕ ನೀಡಲಾಗುತ್ತಿತ್ತು. ಆದರೆ, […]
ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ: ಡಿ.ಕೆ.ಶಿವಕುಮಾರ್

ದಾವಣಗೆರೆ: ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ಬಹಳ ಸಂತೋಷ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು, ರಾಜು ಅವರು ಡಿಕೆ ಕಮ್ ಬ್ಯಾಕ್ ಎಂದು ಕರೆದಿದ್ದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ನೂರು ಜನ ಕಿರುಚಾಡಬಹುದು. ಈ ನೂರು ಜನರಿಗೆ ಜಗ್ಗುವ ಮಗ ಡಿ.ಕೆ. ಶಿವಕುಮಾರ್ ಅಲ್ಲ. ಇಲ್ಲಿರುವ ಸಾವಿರಾರು ಜನ, ನನ್ನ ತತ್ವ, ನಿಷ್ಠೆ, ಸಿದ್ಧಾಂತ ತಿಳಿದಿದ್ದಾರೆ. ಇತಿಹಾಸ ಮರೆತವ, ಇತಿಹಾಸ ಸೃಷ್ಟಿಸಲು […]
ಬಿಜೆಪಿ ಮುಖಂಡನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ..!

ಶಿಕಾರಿಪುರ: ವಿರೋಧಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳಿ ಅಧ್ಯಕ್ಷ ಬಿ.ಡಿ ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಚಿವ ಸಂಪುಟ ಸ್ಥಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರ ಎಲ್ಲಾ ನಿಗಮ ಮಂಡಳಿಯ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಆದೇಶವನ್ನು ನೀಡಿತ್ತು. ಬಿ.ಡಿ.ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಂಪುಟ ಸ್ಥಾನವನ್ನ ಸರ್ಕಾರ ಹಿಂಪಡೆದಿದ್ದು ಬಿ.ಡಿ.ಭೂಕಾಂತ್ ಅವರು ಬಿಜೆಪಿ ಮುಖಂಡರಾಗಿದ್ದು ಆಗಿದ್ದು ಅವರ ಪತ್ನಿ ಬಿಜೆಪಿಯಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದು ಇನ್ನೂ […]
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿ ನೋಂದಣಿ ಮಾಡಲು ಫೆ.14 ಹಾಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕಪಾವತಿಸಲು ಫೆ.16 ಕಡೆಯ ದಿನವಾಗಿದೆ. ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು ಹತ್ತನೇ ತರಗತಿಯಲ್ಲಿ […]
ಶಿಕಾರಿಪುರ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿ ಲೋಕಯುಕ್ತ ಬಲೆಗೆ..!

ಶಿಕಾರಿಪುರ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವಾಗ ಲೋಕಯುಕ್ತ ಅಧಿಕಾರಿಗಳ ಬಲೆಗೆ ಬಿದಿದ್ದಾರೆ. ಶಿಕಾರಿಪುರ ತಾಲ್ಲೂಕಿಕ ಚಿಕ್ಕ ಜಂಬೂರು ಗ್ರಾಮದ ಗ್ರಾಮ ಆಡಳಿತ ಅಧಿಕಾರಿ( VA) ವಿಠ್ಠಲ್ ಕೋಲ್ಹಾರ 1ಲಕ್ಷ ಲಂಚ ಸ್ವೀಕರಿಸುವಾಗ ಟ್ರ್ಯಾಪ್ ಮಾಡಲಾಗಿದೆ. ಎಂದು ಲೋಕಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದಾವಣಗೆರೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.ಶಾಮನೂರು ಶಿವಶಂಕರಪ್ಪ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದರು.
ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರಕಾರದ ಚಳಿಬಿಡಿಸುವ ಕಾರ್ಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರಕಾರದ ಚಳಿ ಬಿಡಿಸುವ ಕುರಿತು ಈಗಾಗಲೇ ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ವಿಪಕ್ಷವಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸದನದ ಒಳಗಡೆ ಒಟ್ಟಾಗಿ ಸರಕಾರದ ಕಿವಿ ಹಿಂಡಲು ಈಗಾಗಲೇ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ತಿಳಿಸಿದರು. ಸದನದ ಹೊರಗಡೆಯೂ ಪ್ರತಿಭಟನೆ ನಡೆಯಲಿದೆ ಎಂದು ವಿವರಿಸಿದರು. ಮುಖ್ಯಮಂತ್ರಿಗಳು ಡಿಸಿಎಂ ಮನೆಗೆ ತಿಂಡಿಗೆ ಹೋಗುವುದಾದರೆ ಅದರ ಬಗ್ಗೆ ನಾವೇನು ಪ್ರತಿಕ್ರಿಯೆ ನೀಡಲಿದೆ? ಎಂದು […]
ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣವಾಗಬೇಕು:ಸಿ.ಬಿ. ವೆಂಕಟೇಶ್

ಶಿಕಾರಿಪುರ 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕ ದೌರ್ಜನ್ಯವೆಸಗಿದರೆ ಅಪರಾಧ ಘಟಿಸಿದ 24 ಗಂಟೆಗಳಲ್ಲಿ ಮಕ್ಕಳ ವಿಶೇಷ ಪೊಲೀಸರಿಗೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಈ ರೀತಿ ಮಾಡುವುದರಿಂದ ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣಮಾಡಲು ಸಹಾಯವಾಗುತ್ತದೆಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿ.ಬಿ. ವೆಂಕಟೇಶ್ ಅಭಿಮತ ವ್ಯಕ್ತಪಡಿಸಿದರು. ಸಮುದಾಯ ಆರೋಗ್ಯ ಕೇಂದ್ರ ಶಿಕಾರಿಪುರ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಕ್ಕಳಿಗೆ […]
ಏ ಕರಿ ಟೋಪಿ ಎಂಎಲ್ ಎ ಇಲ್ಲಿಬಾ ಎಂದ ಡಿಕೆಶಿ ವೇದಿಕೆ ಮೇಲೆ ಹೈಡ್ರಾಮ..!

ಬೆಂಗಳೂರು: ಮತ್ತಿಕರೆಯ ಜೆಪಿ ಪಾರ್ಕ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ʼಬೆಂಗಳೂರು ನಡಿಗೆʼ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ವೇದಿಕೆ ಕಾರ್ಯಕ್ರಮದಲ್ಲಿ ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ. ಡಿಕೆಶಿವಕುಮಾರ್ ಅವರು ಇಂದು ವಾಕ್ ಮಾಡುತ್ತಾ ಜೆಪಿ ಪಾರ್ಕ್ಗೆ ಆಗಮಿಸಿದರು. ಆರ್ಎಸ್ಎಸ್ ಪಥಸಂಚಲನ ಮುಗಿಸಿದ್ದ ಶಾಸಕ ಮುನಿರತ್ನ ಸಮವಸ್ತ್ರದಲ್ಲೇ ಜನರ ಮಧ್ಯೆ ಕುಳಿತಿದ್ದರು. ಮುನಿರತ್ನ ಅವರು ಕಾರ್ಯಕ್ರಮದಲ್ಲಿ ಕುಳಿತಿರುವುದನ್ನು ನೋಡಿದ ಡಿಕೆಶಿ ಅವರು ಕರಿ ಟೋಪಿ […]
ಪುರಸಭೆ ಸಿಸಿ ಕ್ಯಾಮರಗಳ ನಿರ್ಲಕ್ಷ್ಯ:ಎಸ್ ಸಿಪಿ ಟಿಎಸ್ ಪಿ ಯೋಜನೆ ಫಲಾನುಭವಿಗಳ ಆಯ್ಕೆ ವ್ಯತ್ಯಾಸ-ಸದಸ್ಯ ಸುರೇಶ್ ಆರೋಪ

ಶಿಕಾರಿಪುರ: ಸಿಸಿ ಕ್ಯಾಮೆರಾ ಗಳು ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಹಲವು ಬಾರಿ ಹೇಳಿದರೂ ಮುಖ್ಯ ಅಧಿಕಾರಿ ಅದನ್ನು ಸರಿಪಡಿಸಿಲ್ಲ ಸಭೆಗಳಲ್ಲಿ ಏನಾದರೂ ಅವಘಡ ಸಂಭವಿಸಿದರೆ ದಾಖಲೆಯಾಗಿ ಉಳಿಯುತ್ತದೆ ಆ ವ್ಯವಸ್ಥೆಯನ್ನು ಏಕೆ ಸರಿ ಮಾಡಿಲ್ಲ ಎಂದು ಮುಖ್ಯ ಅಧಿಕಾರಿಗಳನ್ನು ಸದಸ್ಯ ಸುರೇಶ್ ಪ್ರಶ್ನಿಸಿದರು. ಪಟ್ಟಣದ ಪುರಸಭಾ ಕಾರ್ಯಾಲಯದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕೋಟ್ಯಂತರ ರೂ ವ್ಯವಹಾರ ನಡೆಯುವ ಜಾಗ ಲಕ್ಷಾಂತರ ರೂಪಾಯಿಗಳು ವಾಹನಗಳು ಕೋಟ್ಯಾನು ಕೋಟಿ […]