ವಿದ್ಯುತ್ ಕಡಿತ ಖಂಡಿಸಿ ಯುವ ಕಾಂಗ್ರೆಸ್’ನಿಂದ ಮೇಸ್ಕಾಂ ಕಛೇರಿ ಎದುರು ಪ್ರತಿಭಟನೆ..!

ಶಿಕಾರಿಪುರ ತಾಲೂಕಿನಲ್ಲಿ ಮೇಸ್ಕಾಂ ಇಲಾಖೆ ನಿರ್ವಹಣೆ ನೆಪದಲ್ಲಿ ಪದೇ ಪದೇ ಭಾನುವಾರ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ಆರೋಪಿಸಿಪಟ್ಟಣದ ಮೇಸ್ಕಾಂ ಕಛೇರಿ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಮಾತನಾಡಿ ಮೇಸ್ಕಾಂ ಇಲಾಖೆ ನಿರ್ವಹಣೆ ಮಾಡುವ ನೆಪದಲ್ಲಿ ಭಾನುವಾರ 10 ಗಂಟೆಗೆ ವಿದ್ಯುತ್ ತೆಗೆದರೆ ರಾತ್ರಿ 7-8 ಗಂಟೆಗೆ ಕೊಡುತ್ತಿದ್ದಾರೆ. ಇದರಿಂದ ತಾಲೂಕಿನ ಜನತೆಗೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು ಅಧಿಕಾರಿಗಳು ಕೂಡಲೇ ಈ ಕುರಿತು ಗಮನ […]
11 ವರ್ಷಗಳಲ್ಲಿ ಮೋದಿ ಸರ್ಕಾರ ಜನ ಸಾಮಾನ್ಯರ ಅಭಿವೃದ್ಧಿಗೆ ಶ್ರಮಿಸಿದೆ: ಸಂಸದ ಬಿವೈ ರಾಘವೇಂದ್ರ

ಶಿಕಾರಿಪುರ: ಶಿಕಾರಿಪುರದ ಕಪ್ಪನಹಳ್ಳಿ ಮತ್ತು ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ಬಿವೈ ರಾಘವೇಂದ್ರ ಉದ್ಘಾಟಿಸಿ ಮಾತಮಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆಡಳಿತದ ಚುಕ್ಕಾಣಿ ಹಿಡಿದು 11ನೇ ವಸಂತಕ್ಕೆ ದಾಪುಗಾಲು ಇಟ್ಟಿರುವ ಈ ಐತಿಹಾಸಿಕ ಕ್ಷಣವನ್ನು ಮತದಾರರ ನಡುವೆ ಇನ್ನಷ್ಟು ಸಾಕ್ಷಿಕರಿಸಲು ಭಾರತೀಯ ಜನತಾ ಪಕ್ಷ ದೇಶದಾದ್ಯಂತ ಹಮ್ಮಿಕೊಂಡಿರುವ ಅನೇಕ ಅಭಿಯಾನಗಳಲ್ಲಿ ಒಂದಾಗಿರುವ “ವಿಕಸಿತ ಭಾರತ” ಅಭಿಯಾನದ ಭಾಗವಾಗಿ ಇಂದು ತಾಲ್ಲೂಕು ಬಿಜೆಪಿ ಘಟಕ ವಿವಿಧ ಕಾರ್ಯಕ್ರಮವನ್ನು ರೂಪಿಸಿದೆ ಎಂದರು. […]
ತುರ್ತು ಪರಿಸ್ಥಿತಿ ಅಧಿಕಾರಕ್ಕಾಗಿ ಪವಿತ್ರ ಸಂವಿಧಾನವನ್ನೇ ಬಲಿ ಕೊಟ್ಟ ದಿನಗಳು- ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಕೇವಲ ತಮ್ಮ ಅಧಿಕಾರಕ್ಕಾಗಿ ನಮ್ಮ ಪವಿತ್ರ ಸಂವಿಧಾನವನ್ನೇ ಆಗ ಬಲಿ ಕೊಡಲಾಗಿತ್ತು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. “ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಬೆಂಗಳೂರು” ಇವರ ವತಿಯಿಂದ ಇಂದು ಟೌನ್ ಹಾಲ್ ನಲ್ಲಿ “1975ರ ತುರ್ತು ಪರಿಸ್ಥಿತಿ 50ನೇ ವರ್ಷ-ಕರಾಳ ದಿನಗಳು” ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಗ […]
ರಾಜ್ಯದ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ ಪರಿಹಾರ ಘೋಷಣೆ..!

ಬೆಂಗಳೂರು: ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದಾರೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ 2025-26ನೇ ಸಾಲಿನಲ್ಲಿ ಕರ್ನಾಟಕದ ಮಾವು ಸಂಗ್ರಹಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕ್ವಿಂಟಾಲ್ಗೆ 1 ಸಾವಿರದ 616 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ 2 ಲಕ್ಷದ 50 ಸಾವಿರ ಮೆಟ್ರಿಕ್ ಟನ್ ಮಾವು ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. News by: Raghu […]
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಜಿ.ಪರಮೇಶ್ವರ

ಬಾಗಲಕೋಟೆ:, ಪಿಎಸ್ಐ ಹಗರಣ ನಂತರಐದು ವರ್ಷಗಳಿಂದ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಈಗ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಬಾಗಲಕೋಟೆ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಯಾವುದೇ ನೇಮಕಾತಿಗಳು ಆಗಿಲ್ಲ. ಒಂದು ಸಾವಿರ ಪಿಎಸ್ ಹುದ್ದೆಗಳು ಖಾಲಿ ಇದ್ದು ಈಗಾಗಲೇ 500 ಜನರ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು ಕೆಲವರು ತರಬೇತಿಯಲ್ಲಿ ದ್ದಾರೆ. ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ […]
ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧಯುವ ಕಾಂಗ್ರೆಸ್ ಪ್ರತಿಭಟನೆ..!

ಶಿಕಾರಿಪುರ: ಪಟ್ಟಣದ ತಾಲೂಕು ಕಚೇರಿಯರು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ಯುವ ಕಾಂಗ್ರಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮನವಿ ಸಲ್ಲಿಸಲಾಗಿದೆ. ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದ್ದು ಯುವ ಕಾಂಗ್ರೆಸ್ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದರು. ಕೇಂದ್ರ ಸರ್ಕಾರ ಅಚ್ಚದಿನ್ ಆಯೇಗಾ ಎಂದು ಹೇಳಿಕೊಂಡು ರೈತರಿಗೆ ಮೋಸ ಮಾಡುತ್ತಿದೆ ಕಳೆದ […]
ಬಿಜೆಪಿ ಕಾರ್ಯಕರ್ತರಿಂದ ಸಚಿವ ಮಧು ಬಂಗಾರಪ್ಪರಿಗೆ ಮುತ್ತಿಗೆ ಹಾಕಲಾಗುವುದು :ಹುಲ್ಮಾರ್ ಮಹೇಶ್

ಶಿಕಾರಿಪುರ: ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರ ಬಿವೈ ರಾಘವೇಂದ್ರ ವಿರುದ್ಧ ಹಗುರವಾಗಿ ಮಾತನಾಡುತ್ತಿದ್ದಾರೆ. ಇದೆ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತರಿಂದ ಘೇರವ್ ಹಾಕಲಾಗುವುದು ಎಂದು ಬಿಜೆಪಿ ಮುಖಂಡ ಮಹೇಶ್ ಹುಲ್ಮಾರ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ರೈತರು ಬೆಳೆದ ಬೆಳೆಗಳು ನಷ್ಟವಾಗಿದೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಿ ಅಭಿವೃದ್ಧಿ ಕಡೆಗೆ ಗಮನ ನೀಡಿ ಸಂಸದರು ಸಹಕಾರ ನೀಡುತ್ತಾರೆ ಎಂದರು.ಶಿವಮೊಗ್ಗದಲ್ಲಿ ಸಚಿವರ […]
ರಾಷ್ಟ್ರೀಯ ಸಮಗ್ರತೆಗೆ ಹೋರಾಡಿದ ಮಹಾನ್ ಚೇತನಗಳನ್ನು ನಾವು ಸ್ಮರಿಸಬೇಕು: ಬಿವೈ ವಿಜಯೇಂದ್ರ

ಶಿಕಾರಿಪುರ: ಪಟ್ಟಣದ ತಾಲೂಕು ಬಿಜೆಪಿ ಕಛೇರಿಯಲ್ಲಿ ನಡೆದ ಡಾ.ಶ್ಯಾಮ ಪ್ರಶಾದ್ ಮುಖರ್ಜಿಯವರ ಸ್ಮ್ರತಿ ದಿನ ಹಾಗೂ ಜಗನ್ನಾಥ ಜೋಷಿ ಯವರ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯ ಬಿಜೆಪಿಯ ಅಧ್ಯಕ್ಷರು ಶಾಸಕರಾದ ಬಿ.ವೈ ವಿಜಯೇಂದ್ರ ಉದ್ಘಾಟಿಸಿ ಮಾತನಾಡಿದರು. 1951 ರಲ್ಲಿ ಜನ ಸಂಘದ ಸ್ಥಾಪನೆಯಲ್ಲಿ ಇವರು ಸಹ ಪ್ರಮುಖರು ದೇಶಕ್ಕಾಗಿ ಹೋರಾಡಿದ ನಾಯಕರು ಕರ್ನಾಟಕ ಕೇಸರಿ ಎಂದೆ ಪ್ರಸಿದ್ಧಿಯಾದ ಜೋಷಿಯವರು ಸಹ ದೇಶಕ್ಕಾಗಿ ಪ್ರಾಣವನ್ನೆ ತ್ಯಾಗ ಮಾಡಿದವರು ಈ ಇಬ್ಬರ ಮಹಾನ್ ಚೇತನಗಳಿಗೆ ಈ ದಿನ ಗೌರವ ಸಲ್ಲಿಸುವ ವಿಶೇಷ […]
ಬಡವರಿಗೆ ಮನೆ ವಿತರಣೆಯಲ್ಲೂ ಭ್ರಷ್ಟಾಚಾರ: ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ:ಬಿವೈ ವಿಜಯೇಂದ್ರ

ಬೆಂಗಳೂರು:ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಬಿ.ಆರ್.ಪಾಟೀಲ್ ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚಲ್ಲಿದ್ದಾರೆ.ಬಡವರಿಗೆ ಮನೆಗಳನ್ನು ಕೊಡಬೇಕಿತ್ತು ಅಲ್ಲಿಯೂ ಸಹ ಭ್ರಷ್ಟಾಚಾರ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ . ಹಿರಿಯ ನಾಯಕರಾದ ಬಿ.ಆರ್ ಪಾಟೀಲ್ ರವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರಿಗೆ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ.ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರಪರ […]
ಶಿವಮೊಗ್ಗದಲ್ಲಿ ವ್ಯಕ್ತಿಯ ಕೊಲೆ ಬೊಮ್ಮನಕಟ್ಟೆ ಕೆರೆ ಬಳಿ ಶವ ಪತ್ತೆ..!

ಶಿವಮೊಗ್ಗ: ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಬಳಿ ಕೊಲೆಯಾದ ಪುರುಷನ ಶವವೊಂದು ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿ ಅವಿನಾಶ್ (35) ಎಂದು ಗುರುತಿಸಲಾಗಿದೆ.ಕೊಲೆ ನಡೆದ ಜಾಗ ರಕ್ತಸಿಕ್ತವಾಗಿದ್ದು,ಮದ್ಯದ ಬಾಟಲಿ, ಖಾರಾ ಮಿಕ್ಸ್ಚರ್ ಎಲ್ಲಾ ಬಿದ್ದಿದೆ. ವಿನೋಬನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬಹುಷ: ತಡರಾತ್ರಿಯ ವರೆಗೂ ಸ್ನೇಹಿತರ ಜೊತೆ ಡ್ರಿಂಕ್ಸ್ ಪಾರ್ಟಿ ಮಾಡಿ ನಂತರ ಜಗಳವಾಗಿ ಅದು ಕೊಲೆಯಲ್ಲಿ ಅವಸಾನ ಆಗಿದೆ ಎಂದು ಪೋಲಿಸರು ಅಂದಾಜಿಸಿದ್ದಾರೆ. ತುಂಗಾನಗರ […]