ಉಪನೋಂದಣಿ ಕಚೇರಿ 2ನೇ ಮತ್ತು 4ನೇ ಶನಿವಾರ ಮತ್ತು ಭಾನುವಾರದಂದು ಕಾರ್ಯನಿರ್ವಹಣೆ..!

ಶಿವಮೊಗ್ಗ: ಜೂನ್ ಮಾಹೆಯಲ್ಲಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಉಪನೋಂದಣಿ ಕಚೇರಿ ಜೂ. 01, ತೀರ್ಥಹಳ್ಳಿ ಉಪನೋಂದಣಿ ಕಚೇರಿ ಜೂ.08, ಶಿಕಾರಿಪುರ ಉಪನೋಂದಣಿ ಕಚೇರಿ ಜೂ.14, ಸೊರಬ ಉಪನೋಂದಣಿ ಕಚೇರಿ ಜೂ.15, ಸಾಗರ ಉಪನೋಂದಣಿ ಕಚೇರಿ ಜೂ.22, ಭದ್ರಾವತಿ ಉಪನೋಂದಣಿ ಕಚೇರಿ ಜೂ.28 ಹಾಗೂ ಹೊಸನಗರ ಉಪನೋಂದಣಿ ಕಚೇರಿ ಜೂ.29 ರಂದು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿಕಾರಿಪುರ ತಾಲೂಕಿ‌‌ನ ಎರಡು ಗ್ರಾಮ ಪಂಚಾಯತ್ ಉಪ ಚುನಾವಣೆ ಫಲಿತಾಂಶ ಪ್ರಕಟ..!

ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಮತ್ತು ಬಳ್ಳಿಗಾವಿ ಗ್ರಾಮ ಪಂಚಾಯತಿ ತಲಾ‌ 1 ಕ್ಷೇತ್ರಕ್ಕೆ ಮೆ.25 ರಂದು ಉಪ ಚುನಾವಣೆ ನಡೆದಿದ್ದು ಅದರ ಫಲಿತಾಂಶ ಇಂದು ಪ್ರಕಟವಾಗಿದೆ‌. ಅಂಬಾರಗೊಪ್ಪ ಗ್ರಾಮ ಪಂಚಾಯತಿ ಒಂದು ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ 4 ಜನ ಅಭ್ಯರ್ಥಿಗಳು ಸ್ಪರ್ಧೆ ನಡೆಸಿದ್ದು ಕಾಂಗ್ರೆಸ್ ಬೆಂಬಲಿತ ಮಂಜುನಾಯ್ಕ್ ಅವರು 216 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದಾರೆ. ಸುರೇಶ್ ನಾಯ್ಕ್ 77 ಮತ್ತು ಹಾಗೂ ರಘುನಾಯ್ಕ್ 74 ದಯಾನಂದನಾಯ್ಕ್ 23 ಮತಗಳನ್ನು ಪಡೆದುಕೊಂಡಿದ್ದಾರೆ. ಬಳ್ಳಿಗಾವಿ ಗ್ರಾಮ ಪಂಚಾಯತಿ ಮಳ್ಳೂರು […]

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು‌ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಶಿಷ್ಟ ರಕ್ಷಣೆ-ದುಷ್ಟರ […]

ಸರ್ಕಾರದ ಎರಡು ವರ್ಷದಲ್ಲಿ ಅತ್ಯುತ್ತಮ ಕಾರ್ಯ: ಸಚಿವ ಮಧು ಬಂಗಾರಪ್ಪ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ: ದರ್ಶನ್ ಉಳ್ಳಿ

ಶಿಕಾರಿಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರ ಪರ ಜನಸಾಮಾನ್ಯರ ಪರವಾದ‌ ಆಡಳಿತ ನೀಡಿದೆ‌ ಜೊತೆ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಎರಡು ವರ್ಷದಲ್ಲಿ ಶಿಕ್ಷಣ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಇತಿಹಾಸದಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ಮೂಲಕ ಇದುವರೆಗೂ ಯಾವ ಸಚಿವರು ಮಾಡದೇ ಇರುವ ಕೆಲಸವನ್ನು ಮಾಡಿದ್ದಾರೆ‌. 13 ಸಾವಿರ ಕಾಯಂ ಶಿಕ್ಷಕರ ನೇಮಕಾತಿ,ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಶಿಕ್ಷಕರ ನೇಮಕ ಮುಂದಿನ ದಿನಗಳಲ್ಲಿ 71 ಸಾವಿರ ಶಿಕ್ಷಕರ […]

ಶಿಕಾರಿಪುರ: ಎಸ್ಎಸ್ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಕಾರ್ಯಾಗಾರ..!

ಶಿಕಾರಿಪುರ: ಭಾರತೀಯ ವಿದ್ಯಾರ್ಥಿ ಸಂಘ ಶಿಕಾರಿಪುರ ಶಾಖೆ ಹಾಗೂ ಶ್ರೀ ಶಿವಶರಣರ ಮಾದರ ಚನ್ನಯ್ಯ ಜನ್ಮಸ್ಥಳ ಅಭಿವೃದ್ಧಿ ಸಮಿತಿ ಬಳ್ಳಿಗಾವಿ ವತಿಯಿಂದ ಎಸ್ಎಸ್ಎಲ್‌ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ದಿನಗ ಕಾರ್ಯಾಗಾರವನ್ನು ದಿ:30 ರಂದು ಪಟ್ಟಣದ ಗುರು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕ ಮುಖೇಶ್ ಮತ್ತಿಕೊಟ್ಟೆ ತಿಳಿಸಿದ್ದಾರೆ. ಪಟ್ಟಣದ ಪತ್ರಿಕಾ‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್ ಎಸ್ ಎಲ್ ಸಿ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸದ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು ಶಿಕ್ಷಣ ತಜ್ಞ […]

ಶಿರಾಳಕೊಪ್ಪದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ: ಶಿಕಾರಿಪುರದಲ್ಲಿ ಶೀಘ್ರದಲ್ಲಿ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರ : ಶಿರಾಳಕೊಪ್ಪ ಪಟ್ಟಣದಲ್ಲಿ ಇಂದು ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ಈಗಾಗಲೇ ಸೊರಬ ಆನವಟ್ಟಿ, ಶಿರಾಳಕೊಪ್ಪ ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದು. ಮುಂದಿನ ದಿನಗಳಲ್ಲಿ ಶಿಕಾರಿಪುರ ಪಟ್ಟಣದಲ್ಲಿ ಸಹ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲಿದ್ದೇವೆ ಎಂದರು. ದಿವಂಗತ ಶ್ರೀಮತಿ ಇಂದಿರಾ ಗಾಂಧಿ ಪ್ರಧಾನಿಯಾದ ಸಮಯದಲ್ಲಿ ಬಡವರ ಕಲ್ಯಾಣಕ್ಕಾಗಿ 20 ಅಂಶಗಳ ಕಾರ್ಯಕ್ರಮವನ್ನು ಅವರ ಹಮ್ಮಿಕೊಂಡಿದ್ದು. ಅದರಲ್ಲಿ ಹಸಿವು ಮುಕ್ತ ಭಾರತ ಕಾರ್ಯಕ್ರಮವು ಒಂದಾಗಿದೆ. ವಿರೋಧ ಪಕ್ಷದವರು ಇಷ್ಟು ದಿನ ನಾವು […]

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ :ಜನರು ಆತಂಕ ಪಡುವ ಅಗತ್ಯವಿಲ್ಲ :ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ವರ್ಷ ಇಲ್ಲಿಯವರೆಗೆ, 35 ಪ್ರಕರಣಗಳು ವರದಿಯಾಗಿದ್ದು, ಕಳೆದ 15 ದಿನಗಳಲ್ಲಿ ಸ್ವಲ್ಪ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನದಟ್ಟಣೆಯ ಸ್ಥಳಗಳಿಗೆ ಭೇಟಿ ನೀಡುವಾಗ ಜಾಗರೂಕರಾಗಿರಬೇಕು. ಜನದಟ್ಟಣೆಯ ಪ್ರದೇಶಗಳಲ್ಲಿ […]

ಕುವೆಂಪು ವಿವಿ, ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಯಡವಟ್ಟು,ಪರೀಕ್ಷೆ ದಿಢೀರ್ ರದ್ದು: ಗೊದ್ದಲಕ್ಕೆ ಕಾರಣರಾದ ಅಧ್ಯಾಪಕರ ವಿರುದ್ಧ ಕ್ರಮಕ್ಕೆ ಸೂಚನೆ

ಶಿವಮೊಗ್ಗ : ಪ್ರಶ್ನೆ ಪತ್ರಿಕೆಯಲ್ಲಿನ ಗೊಂದಲದಿಂದಾಗಿ ಕುವೆಂಪು ವಿಶ್ವವಿದ್ಯಾಲಯದ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ ದಿಢೀ‌ರ್ ರದ್ದಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ಹಿಂಪಡೆದು ಕಳುಹಿಸಲಾಗಿದೆ. ಬಿ.ಎ. 6ನೇ ಸೆಮಿಸ್ಟರ್ ಐಚ್ಛಿಕ ಕನ್ನಡ ಪರೀಕ್ಷೆ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ಇಂದು ನಿಗದಿಯಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಬದಲಾದ ಹಿನ್ನೆಲೆ ಗೊಂದಲ ಉಂಟಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಲಕೋಟೆ ತೆರೆದಾಗ ಪ್ರಶ್ನೆ ಪತ್ರಿಕೆಯಲ್ಲಿನ ಸಮಸ್ಯೆ ಗೊತ್ತಾಗಿದೆ. ಆತಂಕ, ಗೊಂದಲದಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯಿಂದ ಇವತ್ತು […]

ಮುಂಗಾರು ಪೂರ್ವ ಮಳೆಗೆ ಅಧಿಕಾರಿಗಳು ಮನಚ್ಚರಿಕೆ‌ ವಹಿಸಿ: ಸಂಸದ ಬಿವೈ ರಾಘವೇಂದ್ರ ಸೂಚನೆ

ಶಿಕಾರಿಪುರ: ತಾಲ್ಲೂಕಿನಲ್ಲಿ ಮುಂಗಾರು ಪೂರ್ವ ಮಳೆ ನಿರೀಕ್ಷೆಗಿಂತಲೂ ಹೆಚ್ಚಾಗಿದ್ದು ಯಾವುದೆ ಅನಾಹುತ ಆಗದಂತೆ ಈಗಲೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪಟ್ಟಣದಲ್ಲಿ ಗುರುವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಮುಂಗಾರು ಆರಂಭಕ್ಕೂ ಮುನ್ನವೆ ತಾಲ್ಲೂಕಿನ ಅಂಜನಾಪುರ, ಅಂಬ್ಲಿಗೊಳ್ಳ ನಾಲೆ ಸ್ವಚ್ಛಗೊಳಿಸುವ ಕೆಲಸಕ್ಕೆ ಆದ್ಯತೆ ನೀಡಬೇಕು, ಶಾಲೆ, ಹಾಸ್ಟೆಲ್ ಆರಂಭಗೊಂಡ ನಂತರ ಸ್ವಚ್ಚತೆ ಕೈಗೊಳ್ಳದೆ ಮಳೆಗಾಲಕ್ಕೂ ಮುನ್ನೆಚ್ಚರಿಕೆ ಸೇರಿ ಈಗಲೆ ಯಾವುದೆ ಸಣ್ಣ ಪುಟ್ಟ ಕೆಲಸ ಪೂರ್ಣಗೊಳಿಸಬೇಕು. ಆರೋಗ್ಯ ಕೇಂದ್ರದಲ್ಲೂ ಮಳೆಗಾಲಕ್ಕೆ ಅಗತ್ಯವಿರುವ ಔಷಧ […]

ಸಾರ್ವಜನಿಕರಿಗೆ ತೊಂದರೆ ಕೊಡದೆ ಜವಾಬ್ದಾರಿಯಿಂದ‌ ಕರ್ತವ್ಯ ನಿರ್ವಹಿಸಿ: ಶಾಸಕ ಬಿ ವೈ ವಿಜಯೇಂದ್ರ

ಶಿಕಾರಿಪುರ: ಪಟ್ಟಣದ ತಾಲೂಕ್ ಕಛೇರಿ ಸಭಾಂಗಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್‌ ವಿತರಿಸಿ ಶಾಸಕ ಬಿವೈ ವಿಜಯೇಂದ್ರ ಮಾತನಾಡಿದರು. ಸರ್ಕಾರ ಕಂದಾಯ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಗಮನಿಸಿ ತಂತ್ರಜ್ಞಾನ ಬಳಸಿಕೊಂಡು‌ ಜನರಿಗೆ ಹೆಚ್ಚು ಸೇವೆ‌ ಒದಗಿಸು ಅಧಿಕಾರಿಗಳಿಗೆ ಸಹಕಾರಿಯಾಗಲು ಲ್ಯಾಪ್ ಟಾಪ್ ನೀಡಲಾಗಿದೆ‌.ಶಿಕಾರಿಪುರ ತಾಲೂಕು ರಾಜ್ಯದಲ್ಲಿ ಅಭಿವೃದ್ಧಿ ಹೊಂದಿದ ತಾಲೂಕು ಎಂಬ ಹೆಗ್ಗಳಿಕೆಗೆ ಸಾಕ್ಷಿಯಾಗಿದೆ ಅಧಿಕಾರಿಗಳು ಜ‌ನರಿಗೆ ತೊಂದರೆ ಕೊಡದೆ ಪ್ರೀತಿ ವಿಶ್ವಾಸದಿಂದ ಕೆಲಸ ಮಾಡಬೇಕು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು‌. ಸಂಸದ ಬಿವೈ ರಾಘವೇಂದ್ರ […]