ಕೆಎಸ್ಆರ್ ಟಿಸಿ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರ ಸ್ಥಿತಿ ಗಂಭೀರ…!

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿದ್ದು ಪೊಲೀಸರು ಸಂಚಾರ ತೆರವುಗೊಳಿಸುವಲ್ಲಿ ಕಾರ್ಯನಿರತರಾಗಿದ್ದಾರೆ.ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ […]
ಧರ್ಮಸ್ಥಳ ಪ್ರಕರಣ:ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ತನಿಖೆಗಾಗಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ ಎಂದು ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕರಾದ ಪ್ರಣವ್ ಮೊಹಂತಿ ಅವರ ನೇತೃತ್ವದ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಿಕ ಎಂ.ಎಂ.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ […]
ಚಿಕ್ಕಮಗಳೂರು ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಖಾಸಗಿ ಬಸ್ ಪಲ್ಟಿ..!

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್ರವಾಸಿಗರು ಜಿಲ್ಲೆಯ ನಾನಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಕೂಡ ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆಂದು ಬರುತ್ತಿದ್ದ ಬೆಂಗಳೂರು ಮೂಲದ ಖಾಸಗಿ ಬಸ್ ಮಳೆ-ಮಂಜುವಿನ ಕಾರಣದಿಂದಾಗಿ […]
ವಿಜ್ಞಾನ-ವಿನೋದ ವಿಚಾರ ಮಂಥನಕ್ಕೆ ಪರಮ್ ಸೈನ್ಸ್ ಎಕ್ಸ್ಪೀರಿಯನ್ಸ್ ಸೆಂಟರ್!

ಬೆಂಗಳೂರು: ಸೈನ್ಸ್ ಅಥವಾ ವಿಜ್ಞಾನ ಅನ್ನೋದು ಕಬ್ಬಿಣದ ಕಡಲೆ ಅಲ್ಲ. ಅರ್ಥ ಮಾಡಿಕೊಳ್ಳಲಾಗದ ವಿಷಯವೂ ಅಲ್ಲ. ಅದೊಂದು ವಿನೋದ. ಬಗೆದಷ್ಟೂ ತಿಳಿದುಕೊಳ್ಳುವ ಆಸಕ್ತಿ ನಿಮಗಿದ್ದರೆ, ನಿಮ್ಮ ಮಕ್ಕಳಿಗೆ ಕಲಿಸಬೇಕೆಂದಿದ್ದರೆ ಬೆಂಗಳೂರಿನ ಜಯನಗರದ ಹೃದಯ ಭಾಗದಲ್ಲಿರುವ “ದಿ ಪರಮ್ ಸೈನ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ಗೆ” (ParSEC) ಬನ್ನಿ. ಈ ಕೇಂದ್ರದಲ್ಲಿ ಪ್ರಾಯೋಗಿಕ ಕಲಿಕೆಗೆ ಅವಕಾಶ ಇದ್ದು, ನಮ್ಮ ಜೀವನದಲ್ಲಿ ವಿಜ್ಞಾನ ಹೇಗೆ ಅಡಗಿದೆ ಎಂಬುದನ್ನು ಇಲ್ಲಿ ಅರಿಯಬಹುದಾಗಿದೆ. ಅಲ್ಲದೆ, ವಿಜ್ಞಾನದಲ್ಲಿ ತಂತ್ರಜ್ಞಾನದ ಬಳಕೆಯನ್ನೂ ಕಲಿಯಬಹುದಾಗಿದೆ. ವಿಜ್ಞಾನ ನಮ್ಮ ದೈನಂದಿನ ಜೀವನದ […]
ಪತ್ರಕರ್ತರು ಸಂವಿಧಾನಕ್ಕೆ ನಿಷ್ಠರಾಗಿರಬೇಕು: ಎನ್ ರವಿಕುಮಾರ್

ಶಿಕಾರಿಪುರ: ಪತ್ರಕರ್ತರು ಸಂವಿಧಾನಕ್ಕೆ ಪೂರಕವಾಗಿ ನಡೆದುಕೊಳ್ಳಬೇಕಾಗಿದೆ ಯಾವುದೇ ಧರ್ಮಕ್ಕೆ ,ಜಾತಿಗೆ ಸೀಮಿತವಾಗಿರದೇ ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕಾಗಿದೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಎನ್ ರವಿಕುಮಾರ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜಕ್ಕೆ ಪೂರಕವಾದ ಸುದ್ದಿಗಳು ಇಂದು ನಮ್ಮ ದೃಶ್ಯಮಾಧ್ಯಮಗಳಲ್ಲಿ ಕಳೆದುಹೊಗಿದೆ ಸಮಾಜಕ್ಕೆ ನಾವು ಪಶ್ನಾತೀತರಲ್ಲ ಸಮಾಜಿಕ ನ್ಯಾಯದ ಪರವಾಗಿ ಇರುವ ಪತ್ರಕರ್ತ ಮಾತ್ರ ನಿಜವಾದ ಪತ್ರಕರ್ತ ವಾಟ್ಸಪ್ ಯುನಿವರ್ಸಿಟಿ ಯನ್ನು ನಂಬಿ ಅದನ್ನ ನಿಜ […]
ಸಿಗಂದೂರು ಸೇತುವೆ ಲೋಕಾರ್ಪಣೆ:ಚೌಡೇಶ್ವರಿ ದೇವಿ ಹೆಸರು ನಾಮಕರಣ..!

ಶಿವಮೊಗ್ಗ: ಕರ್ನಾಟಕದ ವಿಕಾಸಕ್ಕೆ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 6 ದಶಕಗಳ ಕನಸಾಗಿದ್ದ ಶಿವಮೊಗ್ಗದ ಸಿಗಂದೂರು ಭಾಗದ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಅಂಬಲಗೋಡು- ಕಳಸವಳ್ಳಿ- ಸಿಗಂಧೂರು ಸೇತುವೆಯನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಸೇತುವೆಯಾಗಿದ್ದು, ಇದರ ಹೆಸರನ್ನು ಸಿಗಂಧೂರು ಚೌಡೇಶ್ವರಿ ದೇವಿ ಸೇತುವೆ ಎಂದು ಪ್ರಕಟಿಸಿದರು. ನಂತರ […]
ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಎನ್ ಎಸ್’ಯುಐ ಮನವಿ

ಪಟ್ಟಣದ ಬಿಇಓ ಕಚೇರಿಯದರು ತಾಲೂಕು ಎನ್ ಎಸ್ ಯು ಐ ಹಾಗೂ ದಲಿತ ಸಂಘರ್ಷ ಸಮಿತಿ ವಿವಿಧ ಸಂಘ ಸಂಸ್ಥೆಗಳ ಸಹಾಯಕದೊಂದಿಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಬೇಕು ಎಂದು ಆದೇಶವಿದ್ದರೂ ಕೆಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಿಸುತ್ತಿಲ್ಲ ಈ ವಿಷಯ ತಮ್ಮ ಗಮನಕ್ಕೆ ಬಂದಿದೆ ಕೂಡಲೇ ಅಧಿಕಾರಿಗಳು ಈ […]
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ – ಬಿ.ವೈ. ವಿಜಯೇಂದ್ರ

ಶಿಕಾರಿಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಶೇಕಡ 50:50 ರ ಅನುದಾನದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಶಿಕಾರಿಪುರ ತಾಲ್ಲೂಕು ಅಂಜನಾಪುರ ಡ್ಯಾಮ್ ನಿಂದ 199 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ವಿಳಂಬ ಮಾಡದೇ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರುಗಳಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸಲು ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಇಂದು ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ […]
ವಸತಿ ಶಾಲೆ ವಿದ್ಯಾರ್ಥಿಗಳಿಗೆ ಇನ್ಸ್ಪೈಯರ್ ವಿಡಿಯೋ ಸಂವಾದ ಕಾರ್ಯಕ್ರಮ

ಶಿವಮೊಗ್ಗ: ಇನ್ಸ್ಪೈಯರ್ ಎಂಬ ಕಾರ್ಯಕ್ರಮದಲ್ಲಿ ಇನ್ಪ್ಸರ್ ಇಗ್ನಿಟ್ ಮೈಂಡ್ಸ್ ಇಗ್ನಿಟ್ ಪಾಸಿಟಿವಿಟಿ” ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತ ಮತ್ತು ನಾಲ್ಕು ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ನಡೆದ ಶಿವಮೊಗ್ಗ ಜಿಲ್ಲೆಯ 32 ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು 259 ವಿದ್ಯಾರ್ಥಿ ನಿಲಯಗಳ 6ನೇ ತರಗತಿಯಿಂದ ಇಂಜಿನಿಯರಿಂಗ್ ಓದುತ್ತಿರುವ ಸುಮಾರು 12-13 ಸಾವಿರ ವಿದ್ಯಾರ್ಥಿಗಳೊಂದಿಗೆ ವಿಶೇಷವಾದ ಇನ್ಸ್ಪೈಯರ್ (Inspire) ಎಂಬ ವೀಡಿಯೋ ಸಂವಾದ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ವಿಧಾನ ಪರಿಷತ್ […]
ಒಳಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿ ಹಾಗೂ ಮುಂಬಡ್ತಿ ಇಲ್ಲ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಸರ್ಕಾರ ಬದ್ಧವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ರಾಜ್ಯದಲ್ಲಿ 2 ಲಕ್ಷ 50 ಸಾವಿರ ಹುದ್ದೆಗಳು ನೇಮಕವಾಗಬೇಕಿದೆ. ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇವೆ. ಕಾರಾಗೃಹದಲ್ಲಿ ಶೇಕಡ 38ರಷ್ಟು ಹುದ್ದೆಗಳು ಖಾಲಿ ಇವೆ. ಆರೋಗ್ಯ ಇಲಾಖೆ, ಶಿಕ್ಷಣ […]