ಶಿಕಾರಿಪುರ: ಚಿರತೆ ದಾಳಿಗೆ ಇಬ್ಬರು ರೈತರಿಗೆ ಗಾಯ; ಆತಂಕದಲ್ಲಿ ಗ್ರಾಮಸ್ಥರು

​ಶಿಕಾರಿಪುರ: ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಇಬ್ಬರು ರೈತರು ಗಾಯಗೊಂಡಿದ್ದಾರೆ. ಈ ಘಟನೆಗಳಿಂದಾಗಿ ಅಡಗಂಟಿ ಮತ್ತು ತಡಸನಹಳ್ಳಿ ಭಾಗದ ರೈತರಲ್ಲಿ ತೀವ್ರ ಭೀತಿ ಆವರಿಸಿದೆ. ​ಘಟನೆಯ ವಿವರ:ಅಡಗಂಟಿ ಗ್ರಾಮದ ನಿವಾಸಿ ಸುದೀಪ್ (24) ಎಂಬುವವರು ಶುಕ್ರವಾರ ಸಂಜೆ ತಮ್ಮ ಜಮೀನಿನಲ್ಲಿ ಮೇವು ಕೊಯ್ಯುತ್ತಿದ್ದಾಗ ಚಿರತೆ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ಮೈಕೈಗೆ ತರಚಿದ ಗಾಯಗಳಾಗಿದ್ದು, ಅವರನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸದ್ಯ ಶಿವಮೊಗ್ಗದ […]

ಚಾರ್ಮಾಡಿ ಘಾಟ್ ನಲ್ಲಿ ಟಿಟಿ ವಾಹನ ಪಲ್ಟಿ:9 ಮಂದಿಗೆ ಗಂಭೀರ ಗಾಯ, ಓರ್ವ ವೃದ್ಧ ಸಾವು

ಕೊಟ್ಟಿಗೆಹಾರ : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ವೃದ್ಧ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಮಾ.21 ರಂದು ಬೆಳಗ್ಗೆ ಘಟನೆ ನಡೆದಿದೆ. ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ […]

ಲಂಚ ಸ್ವೀಕರಿಸುತ್ತಿದ್ದ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ

​ಗದಗ/ಶಿರಹಟ್ಟಿ: ಸಣ್ಣ ನೀರಾವರಿ ಇಲಾಖೆಯ ಗುತ್ತಿಗೆ ಕಾಮಗಾರಿಯ ಬಿಲ್ ಮಂಜೂರಾತಿಗಾಗಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಶನಿವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರರೊಬ್ಬರಿಂದ ₹5 ಲಕ್ಷ ನಗದು ಸ್ವೀಕರಿಸುತ್ತಿದ್ದ ವೇಳೆ ಶಾಸಕರನ್ನು ಅಧಿಕಾರಿಗಳು ‘ರೆಡ್‌ಹ್ಯಾಂಡ್’ ಆಗಿ ಹಿಡಿದಿದ್ದಾರೆ.​₹11 ಲಕ್ಷಕ್ಕೆ ಬೇಡಿಕೆ: ₹5 ಲಕ್ಷ ಪಡೆಯುವಾಗ ಅಂದರ್​ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ನಡೆದಿದ್ದ ಕಾಮಗಾರಿಗೆ ಸಂಬಂಧಿಸಿದಂತೆ ವರ್ಗ-1ರ ಗುತ್ತಿಗೆದಾರರೊಬ್ಬರಿಂದ ಶಾಸಕರು ಒಟ್ಟು ₹11 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. […]

ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಒನ್ ಕೇಂದ್ರಗಳ ಫ್ರಾಂಚೈಸಿಗೆ ಅರ್ಜಿ ಆಹ್ವಾನ

​ಶಿವಮೊಗ್ಗ:ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒಂದೇ ಸೂರಿನಡಿ ತಲುಪಿಸುವ ಉದ್ದೇಶದಿಂದ, ಶಿವಮೊಗ್ಗ ಜಿಲ್ಲೆಯ ಪ್ರಮುಖ ನಗರ ಪ್ರದೇಶಗಳಲ್ಲಿ ಖಾಲಿ ಇರುವ ‘ಕರ್ನಾಟಕ ಒನ್’ (Karnataka One) ಫ್ರಾಂಚೈಸಿ ಕೇಂದ್ರಗಳ ಸ್ಥಾಪನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ​ನಗರ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಅವರ ಮನೆ ಬಾಗಿಲಿಗೇ ತಲುಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಸೇವಾ ಸಿಂಧು ಪೋರ್ಟಲ್ ಮೂಲಕ ಜಾರಿಗೆ ತರಲಾಗುತ್ತಿರುವ ಸರ್ಕಾರದ ನೂತನ ಯೋಜನೆಗಳನ್ನು ಜನರಿಗೆ ತಲುಪಿಸಲು ಈ ಕೇಂದ್ರಗಳು […]

ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರಕಾರದ ಚಳಿಬಿಡಿಸುವ ಕಾರ್ಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರಕಾರದ ಚಳಿ ಬಿಡಿಸುವ ಕುರಿತು ಈಗಾಗಲೇ ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ವಿಪಕ್ಷವಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸದನದ ಒಳಗಡೆ ಒಟ್ಟಾಗಿ ಸರಕಾರದ ಕಿವಿ ಹಿಂಡಲು ಈಗಾಗಲೇ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ತಿಳಿಸಿದರು. ಸದನದ ಹೊರಗಡೆಯೂ ಪ್ರತಿಭಟನೆ ನಡೆಯಲಿದೆ ಎಂದು ವಿವರಿಸಿದರು. ಮುಖ್ಯಮಂತ್ರಿಗಳು ಡಿಸಿಎಂ ಮನೆಗೆ ತಿಂಡಿಗೆ ಹೋಗುವುದಾದರೆ ಅದರ ಬಗ್ಗೆ ನಾವೇನು ಪ್ರತಿಕ್ರಿಯೆ ನೀಡಲಿದೆ? ಎಂದು […]

ಏ‌ ಕರಿ ಟೋಪಿ ಎಂಎಲ್ ಎ ಇಲ್ಲಿಬಾ ಎಂದ ಡಿಕೆಶಿ ವೇದಿಕೆ ಮೇಲೆ ಹೈಡ್ರಾಮ..!

ಬೆಂಗಳೂರು: ಮತ್ತಿಕರೆಯ ಜೆಪಿ ಪಾರ್ಕ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರ ʼಬೆಂಗಳೂರು ನಡಿಗೆʼ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ವೇದಿಕೆ ಕಾರ್ಯಕ್ರಮದಲ್ಲಿ ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ. ಡಿಕೆಶಿವಕುಮಾರ್‌ ಅವರು ಇಂದು ವಾಕ್‌ ಮಾಡುತ್ತಾ ಜೆಪಿ ಪಾರ್ಕ್‌ಗೆ ಆಗಮಿಸಿದರು. ಆರ್‌ಎಸ್‌ಎಸ್‌ ಪಥಸಂಚಲನ ಮುಗಿಸಿದ್ದ ಶಾಸಕ ಮುನಿರತ್ನ ಸಮವಸ್ತ್ರದಲ್ಲೇ ಜನರ ಮಧ್ಯೆ ಕುಳಿತಿದ್ದರು. ಮುನಿರತ್ನ ಅವರು ಕಾರ್ಯಕ್ರಮದಲ್ಲಿ ಕುಳಿತಿರುವುದನ್ನು ನೋಡಿದ ಡಿಕೆಶಿ ಅವರು ಕರಿ ಟೋಪಿ […]

ಶಿಕಾರಿಪುರ ಕುಟ್ರಹಳ್ಳಿ ಟೋಲ್ ತೆರುವುಗೊಳಿಸುವಂತೆ ಸದನದಲ್ಲಿ ಬಿ ವೈ ವಿಜಯೇಂದ್ರ ಆಗ್ರಹ

ಶಿಕಾರಿಪುರದ ರಾಜ್ಯ ಹೆದ್ದಾರಿ‌ಸಂಖ್ಯೆ 57 ರಲ್ಲಿ ಒಂದು‌ ಟೋಲ್ ಇನ್ನೊಂದು ಟೋಲ್ ಕುಟ್ರಳ್ಳಿ ಹತ್ತಿರ‌ ನಿರ್ಮಾಣವಾಗಿದ್ದು ಇದರಿಂದ ಸ್ಥಳೀಯಾರಿಗೆ ತೀವ್ರ‌ ತೊಂದರೆ ಆಗಿದೆ ಎಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಒಂದು ಟೋಲ್ ಗು ಇನ್ನೊಂದು ಟೋಲ್ ಗು 65 ಕಿಲೋಮೀಟರ್ ದೂರ ಇರಬೇಕು ಅನ್ನೋ‌ ನಿಯಮವಿದ್ರು ‌ಕೇವಲ 35 ಕಿಲೋಮೀಟರ್ ಗೆ ಕುಟ್ರಳ್ಖಿ ಸಮೀಪ ಟೋಲ್ ನಿರ್ಮಾಣ‌ ಮಾಡಿದ್ದು ಇಲ್ಲಿ ಪ್ರತಿನಿತ್ಯ 75 ರುಪಾಯಿ ಕೊಟ್ಟು ಸ್ಥಳೀಯ ಗ್ರಾಮಸ್ಥರು ಓಡಾಡುವ ಪರಿಸ್ಥಿತಿ ಬಂದಿದೆ […]

ವರ್ಷಾಂತ್ಯದೊಳಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ; ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಈ ವರ್ಷಾಂತ್ಯದಲ್ಲಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದ್ದು, 2-3 ತಿಂಗಳಲ್ಲಿ ನೋಟಿಫಿಕೇಶನ್ ಆಗಲಿದೆ ಎಂದ ಅವರು ಹೇಳಿದರು. ಮೀಸಲಾತಿ ಕುರಿತು ಹೈಕೋರ್ಟ್ನಲ್ಲಿ ಒಪ್ಪಿಕೊಂಡಿದ್ದು, ಅದರ ಆಂತರಿಕ ಕೆಲಸ ನಡೆಯುತ್ತಿದೆ. ಈ ವರ್ಷದಲ್ಲಿಯೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು. News By: Raghu Shikari-7411515737

ರೋಜಾ ಚೇತನ್ ಇವರಿಗೆ ಪಿ.ಹೆಚ್.ಡಿ ಪ್ರಶಸ್ತಿ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾ. ಹಿರೇಜಂಬೂರ ನಿವಾಸಿ ನಂದಿಹಳ್ಳಿ ಆನಂದಪ್ಪರವರ ಪುತ್ರಿ ಹಾಗೂ ಡಾ.ಚೇತನ್ ಹೆಚ್ ಪಿ ಅವರ ಪತ್ನಿ ಡಾ.ಎ ರೋಜಾ ಚೇತನ್ ಇವರು “ಕನ್ನಡ ಮಹಿಳಾ ಕಥನ ಸಾಹಿತ್ಯದಲ್ಲಿ ಮಹಿಳಾ ಪ್ರಶ್ನೆಗಳು” (21ನೇ ಶತಮಾನವನ್ನು ಅನುಲಕ್ಷಿಸಿ ) ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಕನ್ನಡ ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ. ಇವರಿಗೆ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಎ ಬಿ ಉಮೇಶ್ ಇವರು ಮಾರ್ಗದರ್ಶನ ನೀಡಿರುತ್ತಾರೆ. […]

ಬಹು ನಿರೀಕ್ಷಿತ ಒಳ ಮೀಸಲಾತಿ ಡಾ.ನಾಗಮೋಹನದಾಸ್ ಆಯೋಗ ಸಿಎಂಗೆ ವರದಿ ಸಲ್ಲಿಕೆ..!

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಶಿಫಾರಸು ಮಾಡಲು ರಾಜ್ಯ ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್‌ ನೇತೃತ್ವದ ಏಕಸದಸ್ಯ ಆಯೋಗವು ಶಿಫಾರಸುಗಳನ್ನು ಒಳಗೊಂಡ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಿದೆ‌. ಒಳಮೀಸಲಾತಿ ಬೇಕೆಂದು ನ್ಯಾಯಾಲಯಗಳ ಒಳಗೆ ಮತ್ತು ಹೊರಗೆ 30 ವರ್ಷಗಳ ಹೋರಾಟ ಅಂತಿಮವಾಗಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 01-08-2024 ರಂದು ದವಿಂದರ್‌ಸಿಂಗ್‌ ಪ್ರಕರಣದ ತೀರ್ಪಿನಲ್ಲಿ ಈ ರೀತಿ ಸ್ಪಷ್ಟಪಡಿಸಿತು ಉಪವರ್ಗೀಕರಣ ಮಾಡುವುದಕ್ಕೆ ಸಂವಿಧಾನದ ಅನುಚ್ಛೇದ 14 ರಲ್ಲಿ […]