ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ,ಹವಾಮಾನ ಕ್ಲಬ್ ಸ್ಥಾಪನೆಗೆ ಆದೇಶ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿ ಪರಿಸರ, ಹವಾಮಾನ ವೈಪರಿತ್ಯ ಜಾಗತಿಕ ಕ್ಲಬ್ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂಬ ಆದೇಶ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನ ೨೦೨೫ರ ಅಂಗವಾಗಿ ಆಯೋಜಿಸಿದ್ದ ಪರಿಸರ ನಡಿಗೆ ಕಾರ್ಯಕ್ರಮಕ್ಕೆ, ವಿಧಾನ ಸೌಧದ ಮುಂಭಾಗದಲ್ಲಿ ಚಾಲನೆ ನೀಡಿದ ಅವರು, ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಜಾಗೃತಿ ಕ್ಲಬ್ಗಳನ್ನು ರಚನೆ ಮಾಡಬೇಕೆಂದು ಹೇಳಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿ ಸಸಿಯನ್ನು ದತ್ತು ಪಡೆಯಬೇಕೆಂದು ಸಲಹೆ […]
ರಾಜ್ಯದಲ್ಲಿಯೇ ಮಾದರಿ ಅಂಗನವಾಡಿ ಕೇಂದ್ರಗಳನ್ನಾಗಿಸಲು ಶಕ್ತಿ ಮೀರಿ ಶ್ರಮಿಸಿ: ಬಿವೈ ವಿಜಯೇಂದ್ರ

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶಿಕಾರಿಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಎಲ್.ಇ.ಡಿ ಟಿವಿ ವಿತರಣೆ ಅಂಗನವಾಡಿ ಕೇಂದ್ರಗಳಿಗೆ ಎಲ್.ಇ.ಡಿ ಟಿವಿ ಕೇಂದ್ರ ಪುರಸ್ಕೃತ ಸಕ್ಷಮ ಅಂಗನವಾಡಿ ಯೋಜನೆ ಅಡಿಯಲ್ಲಿ ಎಲ್.ಇ.ಡಿ ಟಿವಿ, ವಿತರಿಸಿ ಬಿಜೆಪಿ ರಾಜ್ಯಾಧ್ಯಕ್ಷರು ಶಾಸಕರಾದ ಬಿ.ವೈ ವಿಜಯೇಂದ್ರ ಮಾತನಾಡಿದರು. ಶಿಕಾರಿಪುರ ಎಲ್ಲಾ ಅಂಗನವಾಡಿ ಕೇಂದ್ರಗಳು ರಾಜ್ಯದಲ್ಲಿಯೇ ಮಾದರಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಎಲ್ಲರೂ ಶಕ್ತಿ ಮೀರಿ ಶ್ರಮಿಸಬೇಕು ‘ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆ’ಯ 4564 ಫಲಾನುಭವಿಗಳಿಗೆ ಮಂಜೂರಾತಿ ನೀಡಿದ್ದು ಇದರಲ್ಲಿ 3987 ಫಲಾನುಭವಿಗಳಿಗೆ ಪಾಸ್ ಪುಸ್ತಕ ವಿತರಿಸಲಾಗಿದ್ದು […]
ಕೋಮು ಸಂಘರ್ಷ ತಡೆಗೆ ವಿಶೇಷ ಕಾರ್ಯಪಡೆ ರಚನೆ:ಗೃಹ ಸಚಿವ ಚಾಲನೆ

ಮಂಗಳೂರು: ಕೋಮು ಸಂಘರ್ಷವನ್ನು ತಡೆಗಟ್ಟುವ ಸಲುವಾಗಿ ಮಂಗಳೂರಿನಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದ್ದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಸ್ಪೆಷಲ್ ಆಕ್ಷನ್ ಫೋರ್ಸ್ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲಿದೆ. ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದ್ದು,284 ಸಿಬ್ಬಂದಿ ಒಳಗೊಂಡ ಮೂರು ಕಂಪನಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ದಕ್ಷಿಣ ಕನ್ನಡ, […]
ಶಿಕಾರಿಪುರ ಮಹಿಳೆಯ ಕೊಲೆ..!

ಶಿಕಾರಿಪುರ ಪಟ್ಟಣದ ಸೋಸೈಟಿ ಕೇರಿಯಲ್ಲಿ ಇಂದು ಮುಂಜಾನೆ ಮಹಿಳೆಯೊಬ್ಬರ ಕೊಲೆಯಾಗಿದೆ. ಪಟ್ಟಣದ ಸೋಸೈಟಿ ಕೇರಿ ವಾಸಿ ಮಂಜುಳ( 33) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದ್ದು ಆಕೆಯ ಪತಿಯೆ ಕೊಲೆ ಮಾಡಿರಿವುದಾಗಿ ಅನುಮಾನ ವ್ಯಕ್ಯವಾಗಿದೆ.ಮೃತ ಮಹಿಳೆಗೆ ಮೂರು ಜನ ಮಕ್ಕಳು ಇದ್ದರು ಎನ್ನಲಾಗಿದ್ದು ಶಾಹಿ ಗಾರ್ಮೇಂಟ್ಸ್ ಉದ್ಯೋಗಿಯಾಗಿದ್ದರ ಎಂದು ತಿಳಿದುಬಂದಿದೆ. ಈ ಕುರಿತು ಪಟ್ಟಣದ ಪೋಲಿಸ್ ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದು ನಿಖರ ಮಾಹಿತಿ ದೊರೆಯಬೇಕಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು -ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಮತ್ತು ಡಿಎನ್ಎ ಕಾರ್ಯಕ್ರಮ ನಿರ್ವಹಣಾ ಕಂಪನಿ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಆರ್ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಈವೆಂಟ್ ಮ್ಯಾನೇಜ್ಮೆಂಟ್ನ ಸುನಿಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ […]
ಹೆಚ್ ಟಿ ಬಳೆಗಾರ್ ಫೌಂಡೇಶನ್ ವತಿಯಿಂದ ಬುದ್ಧಿಮಾಂಧ್ಯ ಮಕ್ಕಳ ವಸತಿ ಶಾಲೆಗೆ ಕೊಡುಗೆ

ಶಿಕಾರಿಪುರ :ಪಟ್ಟಣದ ದೊಡ್ಡಪೇಟೆ ಯಲ್ಲಿರುವ ವಿದ್ಯಾ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲಾಯಲ್ಲಿ ಶುಕ್ರವಾರ ದಿ. ಹೆಚ್ ಟಿ. ಬಳೆಗಾರ್ ರವರ ಜನ್ಮ ದಿನಾಚರಣೆಯನ್ನು ಹೆಚ್ ಟಿ. ಬಳೆಗಾರ್ ಫೌಂಡೇಶನ್ ವತಿಯಿಂದ ಆಚರಿಸಲಾಯಿತು. ಈ ಸಂದರ್ಭ ಫೌಂಡೇಶನ್ ಅಧ್ಯಕ್ಷರಾದ ವೈಭವ ಬಸವರಾಜ್ ಮಾತನಾಡಿ. ಬಳೆಗಾರರವರು ಶೋಷಿತರ, ನೊಂದವರ, ಅಸಹಾಯಕರ ಪರವಾಗಿ ಇದ್ದಂತ ವ್ಯಕ್ತಿತ್ವದವರು ಆದ್ದರಿಂದ ಅವರ ಜನ್ಮದಿನ ಆಚರಣೆಯನ್ನು ಬಡ ಬುದ್ದಿ ಮಾಂದ್ಯ ಮಕ್ಕಳ ಶಾಲೆಯಲ್ಲಿ ಆಚರಿಸಿಲಾಗಿ ಈ ಶಾಲೆಗೆ ಫೌಂಡೇಶನ್ ವತಿಯಿಂದ ನಿತ್ಯಪಯೋಗಿ ಸಾಮಗ್ರಿಗಳನ್ನು ನೀಡುತ್ತಿದ್ದು […]
ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ:ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ […]
ಶಿಕಾರಿಪುರ ಪುರಸಭೆಯಲ್ಲಿ ಭೂ ಪರಿವರ್ತನೆ ಬ್ರಹ್ಮಾಂಡ ಭ್ರಷ್ಟಾಚಾರ:ಗೋಣಿ ಪ್ರಕಾಶ್ ಆರೋಪ

ಶಿಕಾರಿಪುರ : ಪಟ್ಟಣದ ಪುರಸಭಾ ವ್ಯಾಪ್ತಿಯ ಜಮೀನು ಭೂ ಪರಿವರ್ತನೆ ಎನ್ ಓ ಸಿ ನೀಡಲು ಪುರಸಭಾ ಮುಖ್ಯಾಧಿಕಾರಿಗಳ ಹಾಗೂ ನಿಕಟಪೂರ್ವ ಅಧ್ಯಕ್ಷರ ಅವಧಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಪುರಸಭಾ ಸದಸ್ಯ ಗೋಣಿ ಪ್ರಕಾಶ್ ಗಂಭೀರವಾಗಿ ಆರೋಪಿಸಿದ್ದಾರೆ. ಪುರಸಭಾ ಸಭಾಂಗಣದಲ್ಲಿ ಗುರುವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಪಟ್ಟಣದ ಪುರಸಭೆಗೆ ಒಳಪಡುವ ರೈತರು ನಿವೇಶನೆ ಭೂ ಪರಿವರ್ತನೆ ಏನ್ ಓ ಸಿ ನೀಡಲು ತಮ್ಮ ಜಮೀನುಗಳ ದಾಖಲೆ ಸಹಿತ ಪುರಸಭೆಗೆ ಅರ್ಜಿ […]
ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲಿ ಗೇಟ್ ಪಾಸ್ : ರಮೇಶ್ ಗುಂಡ ಆರೋಪ..!

ಶಿಕಾರಿಪುರ ಪಟ್ಟಣದ ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡಾರವರು ಮಾತನಾಡಿ ಪಟ್ಟಣದ ಹಾಗೂ ತಾಲೂಕಿನ ಅನೇಕ ಖಾಸಗಿ ವಿದ್ಯಾ ಸಂಸ್ಥೆಗಳು ಎಲ್ ಕೆ ಜಿ ಯಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡಿ ನಂತರಅಂಕಗಳು ಕಡಿಮೆ ಬಂದಿದೆ ಎಂದು 9ನೇ ತರಗತಿಯ ನಂತರ ಎಸ್ ಎಸ್ ಎಲ್ ಸಿ ಗೆ ಹೋಗಬೇಕಿದ್ದ ಅನೇಕ ವಿದ್ಯಾರ್ಥಿಗಳಿಗೆ ಬೇರೆ ಖಾಸಗಿ ಶಾಲೆಗೆ ಅಥವಾ ಸರ್ಕಾರಿ ಶಾಲೆಗೆ ಹೋಗುವಂತೆ ಶಾಲೆಯಿಂದ ವರ್ಗಾವಣೆ ಪತ್ರ ನೀಡಿ ಕಳಿಸಿದ್ದಾರೆ ಎಂದು […]
ಅಲ್ಪಸಂಖ್ಯಾತರ ವಸತಿ ಶಾಲೆ/ಕಾಲೇಜುಗಳಲ್ಲಿ ವಿವಿಧ ಶಿಕ್ಷಕರ/ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳಿಗೆ ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲೀಷ್ ಭಾಷಾ ಶಿಕ್ಷಕರು-9, ಹಿಂದಿ ಭಾಷಾ ಶಿಕ್ಷಕರು-4, ಉರ್ದು ಭಾಷಾ ಶಿಕ್ಷಕರು-2, ಗಣಿತ ಶಿಕ್ಷಕರು-4, ಸಾಮಾನ್ಯ ವಿಜ್ಞಾನ ಶಿಕ್ಷಕರು-4, ಸಮಾಜ […]