ಶಿಕಾರಿಪುರ ಪುರಸಭೆಯಲ್ಲಿ ಭೂ ಪರಿವರ್ತನೆ ಬ್ರಹ್ಮಾಂಡ ಭ್ರಷ್ಟಾಚಾರ:ಗೋಣಿ ಪ್ರಕಾಶ್ ಆರೋಪ

ಶಿಕಾರಿಪುರ : ಪಟ್ಟಣದ ಪುರಸಭಾ ವ್ಯಾಪ್ತಿಯ ಜಮೀನು ಭೂ ಪರಿವರ್ತನೆ ಎನ್ ಓ ಸಿ ನೀಡಲು ಪುರಸಭಾ ಮುಖ್ಯಾಧಿಕಾರಿಗಳ ಹಾಗೂ ನಿಕಟಪೂರ್ವ ಅಧ್ಯಕ್ಷರ ಅವಧಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಪುರಸಭಾ ಸದಸ್ಯ ಗೋಣಿ ಪ್ರಕಾಶ್ ಗಂಭೀರವಾಗಿ ಆರೋಪಿಸಿದ್ದಾರೆ. ಪುರಸಭಾ ಸಭಾಂಗಣದಲ್ಲಿ ಗುರುವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಪಟ್ಟಣದ ಪುರಸಭೆಗೆ ಒಳಪಡುವ ರೈತರು ನಿವೇಶನೆ ಭೂ ಪರಿವರ್ತನೆ ಏನ್ ಓ ಸಿ ನೀಡಲು ತಮ್ಮ ಜಮೀನುಗಳ ದಾಖಲೆ ಸಹಿತ ಪುರಸಭೆಗೆ ಅರ್ಜಿ […]
ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲಿ ಗೇಟ್ ಪಾಸ್ : ರಮೇಶ್ ಗುಂಡ ಆರೋಪ..!

ಶಿಕಾರಿಪುರ ಪಟ್ಟಣದ ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡಾರವರು ಮಾತನಾಡಿ ಪಟ್ಟಣದ ಹಾಗೂ ತಾಲೂಕಿನ ಅನೇಕ ಖಾಸಗಿ ವಿದ್ಯಾ ಸಂಸ್ಥೆಗಳು ಎಲ್ ಕೆ ಜಿ ಯಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡಿ ನಂತರಅಂಕಗಳು ಕಡಿಮೆ ಬಂದಿದೆ ಎಂದು 9ನೇ ತರಗತಿಯ ನಂತರ ಎಸ್ ಎಸ್ ಎಲ್ ಸಿ ಗೆ ಹೋಗಬೇಕಿದ್ದ ಅನೇಕ ವಿದ್ಯಾರ್ಥಿಗಳಿಗೆ ಬೇರೆ ಖಾಸಗಿ ಶಾಲೆಗೆ ಅಥವಾ ಸರ್ಕಾರಿ ಶಾಲೆಗೆ ಹೋಗುವಂತೆ ಶಾಲೆಯಿಂದ ವರ್ಗಾವಣೆ ಪತ್ರ ನೀಡಿ ಕಳಿಸಿದ್ದಾರೆ ಎಂದು […]
ಅಲ್ಪಸಂಖ್ಯಾತರ ವಸತಿ ಶಾಲೆ/ಕಾಲೇಜುಗಳಲ್ಲಿ ವಿವಿಧ ಶಿಕ್ಷಕರ/ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳಿಗೆ ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲೀಷ್ ಭಾಷಾ ಶಿಕ್ಷಕರು-9, ಹಿಂದಿ ಭಾಷಾ ಶಿಕ್ಷಕರು-4, ಉರ್ದು ಭಾಷಾ ಶಿಕ್ಷಕರು-2, ಗಣಿತ ಶಿಕ್ಷಕರು-4, ಸಾಮಾನ್ಯ ವಿಜ್ಞಾನ ಶಿಕ್ಷಕರು-4, ಸಮಾಜ […]
ಹುಚ್ಚರಾಯಸ್ವಾಮಿ ಜಾತ್ರೆ ಪ್ರಯುಕ್ತ ಪುರಸಭೆಯಿಂದ ಅನ್ನಸಂತರ್ಪಣೆ ಪಾನಕ ವಿತರಣೆ

ಶಿಕಾರಿಪುರ ಪುರಸಭೆಯ ವತಿಯಿಂದ ಶ್ರೀ ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಿರುವ ಸರ್ವ ಭಕ್ತಾದಿಗಳಿಗೆ ತರಳಬಾಳು ಸಮುದಾಯ ಭವನದಲ್ಲಿ ದಿನಾಂಕ 11.04.2025 ರ ಶುಕ್ರವಾರ ರಾತ್ರಿ ಅನ್ನ ಸಂತರ್ಪಣೆ ವಿತರಣೆ ನಡೆಸಲಾಗುವುದು. ದಿನಾಂಕ 12.04.2025 ರ ಶನಿವಾರ ಬೆಳಗ್ಗೆ 6: 30ರಿಂದ 11:30ವರೆಗೆ ಉಪಹಾರ ವ್ಯವಸ್ಥೆ ಮತ್ತು ಸಂಜೆ 5:00 ವರೆಗೆ ಪಾನಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸರ್ವ ಭಕ್ತಾದಿಗಳು ಆಗಮಿಸಿ ಶ್ರೀ ಹುಚ್ಚರಾಯಸ್ವಾಮಿ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ. ಪಟ್ಟಣದ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕರಿಂದ ಪಾನಕ,ಮಜ್ಜಗೆ […]
ದೂಪದಹಳ್ಳಿ ಬಳಿ ಮಹಿಷಿ ಮಠ ದರೋಡೆ ಆರೋಪಿ ಕಾಲಿಗೆ ಗುಂಡು..!

ಶಿಕಾರಿಪುರ ಪಟ್ಟಣದ ಪ್ರಗತಿ ನಗರದ ನಿವಾಸಿ ಆರೋಪಿ ಶ್ರೀನಿವಾಸ್ ಅವರ ಎಡಗಾಲಿಗೆ ಮಾಲೂರು ಪಿಎಸ್ಐ ಕುಮಾರ್ ಗುಂಡು ಹಾರಿಸಿದ್ದಾರೆ. ಇತ್ತೀಚೆಗೆ ಮಾಲೂರು ಪಿಎಸ್ಐ ವ್ಯಾಪ್ತಿಯಲ್ಲಿ ನಡೆದ ಮಹಿಷಿ ಮಠದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ.ಆತನಿಗೂ ಅಪರಾಧ ಹಿನ್ನೆಲೆ ಇದೆ. ಪಿಎಸ್ ಐ ಕುಮಾರ್ ಮತ್ತು ತಂಡ ಆರೋಪಿ ಶ್ರೀನಿವಾಸ್ ಅವರನ್ನು ಹಿಡಿಯಲು ಪ್ರಯತ್ನಿಸಿದಾಗ ಪೋಲಿಸ್ ಸಿಬ್ಬಂದಿ ಸಂತೋಷ್ ಮೇಲೆ ಆರೋಪಿ ದಾಳಿ ಮಾಡಲು ಯತ್ನಿಸಿದಾನೆ. ಪದೇ ಪದೇ ಎಚ್ಚರಿಕೆ ನೀಡಿದ್ದರೂ ಶರಣಾಗದೆ ಮತ್ತೆ ದಾಳಿ ಮಾಡಲು […]
ಬೆಂಗಳೂರಿನಲ್ಲಿ ಆರ್ ಸಿಬಿ – ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿ

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯ ಗೆದ್ದು, ಉತ್ತಮ ಆರಂಭ ಮಾಡಿದೆ. ಇಂದು ತವರಿನಲ್ಲಿ ಗೆಲುವಿನ ಖಾತೆ ತೆರೆಯುವ ತವಕದಲ್ಲಿದೆ. ಕ್ರಿಕೆಟ್ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸೇವೆಯ ಸಮಯವನ್ನು ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕು […]
ಮನೆಯ ಮೇಲೆ ಉರುಳಿ ಬಿದ್ದ ಸರ್ಕಾರಿ ಬಸ್ : 20 ಜನರೀಗೆ ಗಾಯ

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಇಳಿಜಾರಿನ ಮನೆಯೊಂದರ ಮೇಲೆ ಸರ್ಕಾರಿ ಬಸ್ ಉರುಳಿಬಿದ್ದು ಸುಮಾರು 20 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಶೃಂಗೇರಿಗೆ ಬರುತಿದ್ದ ಬಸ್ ಅಪಘಾತಕೀಡಾಗಿದ್ದು ಬಸ್ಸಿನಲ್ಲಿ 50 ಕ್ಕು ಹೆಚ್ಚು ಪ್ರಯಾಣಿಕರು ಪ್ರಯಾಣಿಸುತಿದ್ದರು. ಅಪಘಾತದಿಂದ ಮನೆಗು ಹಾನಿಯುಂಟಾಗಿದೆ. ಇನ್ನು ಗಾಯಗೊಂಡ ಪ್ರಯಾಣಿಕರನ್ನು ಕೊಪ್ಪ, ಎನ್.ಆರ್ ಪುರದ ಆಸ್ಪತ್ರೆಗಳೀಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಯಪುರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ […]
ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತಡೆಗೆ ಹೊಸ ಕಾನೂನು ಜಾರಿ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತಡೆಗೆ ಕಾನೂನು ತರಲು ತೀರ್ಮಾನಿಸಲಾಗಿದ್ದು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಮಾತನಾಡಿದ ಅವರು, ಬಂಡವಾಳ ಹೂಡಿಕೆ ಮತ್ತು ಜಿಎಸ್ಟಿ ಪಾವತಿಸುವುದರಲ್ಲಿ ದೇಶದಲ್ಲೇ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಹೇಳಿದರು. ಐದು ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯನಲ್ಲಿ ಹಣ ಮೀಸಲಿಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಯಾವುದಾದರು […]
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮೇಲೆ ಇಡಿ ದಾಳಿ..!

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ ನಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು. ಇಡಿ ತನಿಖೆಗೆ ಮುಂದಾಗುತ್ತಿದ್ದಂತೆ ಮಂಜುನಾಥ್ ಗೌಡ […]
ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವೆ- ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ. […]