ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತಡೆಗೆ ಹೊಸ ಕಾನೂನು ಜಾರಿ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತಡೆಗೆ ಕಾನೂನು ತರಲು ತೀರ್ಮಾನಿಸಲಾಗಿದ್ದು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಮಾತನಾಡಿದ ಅವರು, ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಪಾವತಿಸುವುದರಲ್ಲಿ ದೇಶದಲ್ಲೇ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಹೇಳಿದರು. ಐದು ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯನಲ್ಲಿ ಹಣ ಮೀಸಲಿಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಯಾವುದಾದರು […]

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮೇಲೆ ಇಡಿ ದಾಳಿ..!

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ ನಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು. ಇಡಿ ತನಿಖೆಗೆ ಮುಂದಾಗುತ್ತಿದ್ದಂತೆ ಮಂಜುನಾಥ್ ಗೌಡ […]

ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವೆ- ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ. […]

ಚಿಕ್ಕಮಗಳೂರು ಜಿಲ್ಲಾ‌ ಪ್ರವಾಸ ಮಾರ್ಚ್ 15 ರಿಂದ 17 ವರೆಗೆ ತಾತ್ಕಾಲಿಕ ನಿರ್ಬಂಧ..!

ಚಿಕ್ಕಮಗಳೂರು ಜಿಲ್ಲಾಡಳಿತವು ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ದತ್ತಪೀಠದಲ್ಲಿ ನಡೆಯಲಿರುವ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳ ಹೆಚ್ಚಿನ ಸಂಖ್ಯೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗಿರಿಸಾಲೆಯ ಹೊಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು […]

ಟೆಕ್ನಿಕಲ್ ಆಫಿಸರ್ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೆಎಸ್‌ಎಪಿಎಸ್ ವತಿಯಿಂದ ವೈರಲ್ ಲೋಡ್ ಲ್ಯಾಬೊರೇಟರಿ(ವಿಎಲ್‌ಎಲ್) ಮಂಜೂರಾಗಿದ್ದು ಈ ವಿಭಾಗಕ್ಕೆ ಅವಶ್ಯವಿರುವ ಟೆಕ್ನಿಕಲ್ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.05 ಕಡೆಯ ದಿನವಾಗಿರುತ್ತದೆ. ಟೆಕ್ನಿಕಲ್ ಆಫಿಸರ್ ಹುದ್ದೆ 01, ವೇತನ ರೂ.35000/- ಇರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಸಂಸ್ಥೆಯ ವೆಬ್‌ಸೈಟ್ www.sims_shimogaj.com ನಲ್ಲಿ ಪಡೆಯತಕ್ಕದ್ದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ […]

ಕುವೆಂಪು ವಿವಿ ಅಂತರ್ ಕಾಲೇಜು ದೇಹಧಾರ್ಢ್ಯ ಸ್ಪರ್ಧೆಯಲ್ಲಿ ಪವನ್’ಗೆ ಚಿನ್ನದ ಪದಕ..!

ಶಿಕಾರಿಪುರ: ಸರ್ಕಾರಿ ಪ್ರಥಮದರ್ಜೆ ಕಾಲೇಜು ತರೀಕೆರೆಯಲ್ಲಿ ನೆಡೆದ 2024 – 25ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಪುರುಷರ ಅಂತರ ಕಾಲೇಜು ದೇಹಧಾರ್ಡ್ಯತೆ ಸ್ಪರ್ದೆಯಲ್ಲಿ ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪವನ್ ಜೆ.ಎಂ ತೃತೀಯ ಬಿ.ಎ.ನಲ್ಲಿ ವಿದ್ಯಾರ್ಥಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಅಂತರ್ ಕಾಲೇಜು ಮಟ್ಟದ 85 ಕೆ ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಬಂಗಾರದ ಪದಕ ಪಡೆದು ಕಾಲೇಜುಗೆ ಕೀರ್ತಿಯನ್ನು ತಂದಿರುತ್ತಾನೆ‌. ಶಿಕಾರಿಪುರ ನಿವಾಸಿ ಬಸ್ ಏಜೆಂಟ್ ಮಂಜುನಾಥ ಅವರ ಪುತ್ರನಾಗಿದಾನೆ. ಈ […]

ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು ಅಪಾರ ಪ್ರಮಾಣದ ಅರಣ್ಯ ನಾಶ..!

ಚಿಕ್ಕಮಗಳೂರು : ಜಿಲ್ಲೆಯ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಮುಳ್ಳಯ್ಯನಗಿರಿ, ಸೀತಾಳ್ಳಯ್ಯನಗಿರಿ ಪರ್ವತದಲ್ಲಿ ಬೆಂಕಿ ಹೊತ್ತಿಕೊಂಡಿದ್ದು 15 ಕಿಲೋ ಮೀಟರ್ ಗು ಹೆಚ್ಚು ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ ಸ್ಥಳಕ್ಕೆ ಅಗ್ನಿ ಶಾಮಕದಳ, ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದರು ಬೆಂಕಿ ಸಂಪೂರ್ಣ ನಂದಿಸಲು ಸಾಧ್ಯವಾಗಿಲ್ಲ. ಬೆಂಕಿಯಿಂದಾಗಿ ಈ ಪರ್ವತದಲ್ಲಿರುವ ಅಪರೂಪದ ಔಷಧಿಗುಣಗಳ ಸಸ್ಯ ಸಂಪತ್ತು,ಇತರೆ ಮರ ಗಿಡಗಳು ನಾಶವಾಗಿವೆ. ಇನ್ನು ಕಳೆದ […]

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ದರಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು:ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿ‌ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ […]

ಕೆಪಿಸಿಸಿ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಲು ಸಿದ್ಧ : ಸಹಕಾರ ಸಚಿವ ಕೆ‌.ಎನ್ ರಾಜಣ್ಣ

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಲು ಸಿದ್ದ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಹೈಕಮಾಂಡ್‌ಗೆ ತಮ್ಮ ಅಭಿಪ್ರಾಯ ತಿಳಿಸಿದ್ದು, ’ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ ಸಿದ್ಧಾಂತಕ್ಕೆ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಎಲ್ಲ ಸಮುದಾಯಗಳು ಬೆಂಬಲ ನೀಡಿದ್ದು, ಶೋಷಿತ ವರ್ಗಗಳ ಸಮಾವೇಶ ಏರ್ಪಡಿಸುವ […]

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ದಿನಾಂಕ: 03-03-2025 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ವೆಬ್‌ಸೈಟ್ www.indiapostgdsonline.gov.in ಮೂಲಕವೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ […]