ಮೈಸೂರಿನಲ್ಲಿ ನಟ ಡಾಲಿ ಧನಂಜಯ್ ಮದುವೆ: ಅಭಿಮಾನಿಗಳಿಗೆ ಮುಕ್ತ ಅವಕಾಶ

ಮೈಸೂರು : ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಅವರ ವಿವಾಹ ಫೆಬ್ರವರಿ 15ಮತ್ತು 16ರಂದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ನೆರವೇರಲಿದ್ದು ಅಭಿಮಾನಿಗಳು ಪಾಲ್ಗೊಳ್ಳಲು ಮುಕ್ತ ಅವಕಾಶ ನೀಡಲಾಗಿದೆ. ಈ ಕುರಿತು ಸ್ವತಃ ನಟ ಡಾಲಿ ಧನಂಜಯ್ ಅವರು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಮದುವೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮೈಸೂರಿನಲ್ಲೇ ಮದುವೆ ಆಗಬೇಕು ಎನ್ನುವುದು ನಮ್ಮ ಕನಸು. ನನ್ನ ವಿದ್ಯಾಭ್ಯಾಸ, ಚಿತ್ರರಂಗಕ್ಕೆ ಕಾಲಿಟ್ಟಿದ್ದು ಎಲ್ಲವು ಮೈಸೂರಿನಿಂದಲೇ. ತಾಯಿ ಚಾಮುಂಡೇಶ್ವರಿ […]
ರಾಜ್ಯ ಮಟ್ಟದ ಡೊಳ್ಳು ಕುಣಿತದಲ್ಲಿಕುಸ್ಕೂರು ಸರ್ಕಾರಿ ಪ್ರೌಢ ಶಾಲೆ ಪ್ರಥಮ

ಶಿಕಾರಿಪುರ ತಾಲ್ಲೂಕಿನ ಕುಸ್ಕೂರು ಗ್ರಾಮ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಡೊಳ್ಳು ಕುಣಿತ ಜನಪದ ನೃತ್ಯ ಸ್ಪರ್ಧೆಯಲ್ಲಿ, ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಪ್ರಥಮ ಸ್ಥನ ಪಡೆದಿದ್ದಾರೆ . ಈ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದ, ಎಸ್ ಡಿಎಂಸಿ ಕಮಿಟಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ. ಸುದ್ದಿ ಮತ್ತು ಜಾಹೀರಾತಿಗಾಗಿ-7411515737
ಚಿಕ್ಕಮಗಳೂರು : ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ..!

ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹತ್ತಾರು ಎಕರೆ ಅರಣ್ಯ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಗುಡ್ಡದ ಒಂದು ಭಾಗ ಹಸರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ ವ್ಯಕ್ತವಾಗಿದೆ. ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ ಮೂಡಿದೆ.
ಕೊವಿಡ್ ಲಸಿಕೆ ಅಡ್ಡಪರಿಣಾಮ ಸಮರ್ಪಕ ಸಂಶೋಧನೆಗೆ ಸಿಎಂ ಸೂಚನೆ..!

ಬೆಂಗಳೂರು: ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರಈ ಸಮಸ್ಯೆಯ ಮೂಲ ಪತ್ತೆಮಾಡಿ, […]
15 ಸಾವಿರ ಶಿಕ್ಷಕರ ಶೀಘ್ರ ನೇಮಕ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಈಗಾಗಲೇ ಹದಿಮೂರು ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಇನ್ನೂ ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಮುರುಘಮಠದ ಅನುಭವ ಮಂಟಪದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ’ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024-2025’ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಲೆ, ಸಂಗೀತ ಮತ್ತು ಇತರೆ ಸಾಂಸ್ಕೃತಿಕ ಕಲೆಗಳನ್ನು ಕಲಿಸುವ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಮಾಹಿತಿ ನೀಡಿದರು. ಸುದ್ದಿ […]
ತಟಸ್ಥರು ಮೊದಲು ಬಿಎಸ್ ವೈ ವಿರುದ್ಧ ಟೀಕೆ ಮಾಡುವವರ ಬಾಯಿ ಮುಚ್ಚಿಸಲಿ: ಬಿವೈ ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಟಸ್ಥ ಎಂದು ಹೇಳಿಕೊಳ್ಳುವ ನಾಯಕರು ಮೊದಲಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದು . ಪಕ್ಷಕ್ಕೆ ಯಡಿಯೂರಪ್ಪರವರ ಕೊಡುಗೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಾವ ಕ್ಷಣದಲ್ಲಾದರೂ ಆಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಅನುಭವದ ಕೊರತೆ ಇದೆ ಎಂಬ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿ ರಾಜ್ಯಾಧ್ಯಕ್ಷನಾಗಿ ಅನುಭವ […]
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಠಿಣ ಕಾನೂನು ಜಾರಿಗೆ ಸಿದ್ದತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಸಣ್ಣ ಹಣಕಾಸು ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಂಡದ ಪ್ರಮಾಣವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಸಷ್ಟಪಡಿಸಿದ್ದಾರೆ. ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ರಾಜ್ಯಪಾಲರಿಗೆ ಈಗಾಗಲೇ ಮಸೂದೆ ಕಳುಹಿಸಲಾಗಿದೆ. ಅವರು ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ […]
ನಾಳೆ ದೆಹಲಿ ವಿಧಾನಸಭಾ ಚುನಾವಣೆಗೆ ರಾಷ್ಟ್ರ ರಾಜಧಾನಿ ಸಕಲ ಸಿದ್ಧತೆ..!

ದೆಹಲಿ: 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಕೋಟಿ 56 ಲಕ್ಷಕ್ಕೂ ಹೆಚ್ಚು ಮತದಾರರು ಕಣದಲ್ಲಿರುವ 699 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ. ಈ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ. ಸುಗಮ ಚುನಾವಣೆಗಾಗಿ ಚುನಾವಣಾ ಆಯೋಗ 1.8 ಲಕ್ಷಕ್ಕೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದೆ. ಇಲ್ಲಿಯವರೆಗೆ ಸುಮಾರು 220 ಕೋಟಿಗೂ ಅಧಿಕ […]
ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಖಂಡ್ರೆ ಸೂಚನೆ

ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ. […]
ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಚಿಂಕೆ ಮರಿ ಸಾವು..!

ಶಿವಮೊಗ್ಗ: ಅರಣ್ಯ ಅಧಿಕಾರಿಗಳಿಂದ ಜಿಂಕೆ ಮರಿಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಗ್ರಾಮದ ಬಳಿ ಶನಿವಾರ ನಡೆದಿದೆ. ಉಳವಿ ಗ್ರಾಮದಿಂದ ಶಿರಾಳಕೊಪ್ಪ ಹೋಗುವ ಮಾರ್ಗದಲ್ಲಿ ಬರುವ ದಟ್ಟ ಕಾಡಿನ ನಡುವೆ ಚಿಂಕೆ ಮರಿ ಒಂದು ದಿಢೀರನೇ ರಸ್ತೆಗೆ ಬಂದಿದೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಪರಿಚಿತ ಕಾರು ಒಂದು ಚಿಂಕೆ ಮರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಮರಿಯ ಕಾಲಿಗೆ ತೀವ್ರವಾದ ಪೆಟ್ಟು ಬಿದ್ದು ರಸ್ತೆಗೆ ಬಿದ್ದಿತ್ತು. ತಕ್ಷಣ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರು ಹಾಗೂ […]