ಆಡಳಿತದಲ್ಲಿ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಕನ್ನಡ ಬಳಸುವಂತೆ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಆಡಳಿತದಲ್ಲಿ ಕನ್ನಡ ಕಡ್ಡಾಯಗೊಳಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಕನ್ನಡದಲ್ಲಿ ಬರುವ ಅರ್ಜಿ ಪತ್ರಗಳಿಗೆ ಕನ್ನಡದಲ್ಲಿ ಉತ್ತರಿಸಿ ನಾಮ ಫಲಕ ಕನ್ನಡದಲ್ಲೇ ಪ್ರದರ್ಶಿಸಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ಆದೇಶ ಹೊರಡಿಸಿದ್ದಾರೆ. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟ ಸೂಚನೆ ನೀಡಿದ್ದಾರೆ. ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ […]

ಅನ್ನ ಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಜೊತೆ ಇಂದಿರಾ ಆಹಾರ ಕಿಟ್ ವಿತರಣೆ..!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲಾ ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರಿಗೆ ಪೌಷ್ಟಿಕಾಂಶಗಳನ್ನು ಒಳಗೊಂಡ ಪದಾರ್ಥಗಳಿರುವ ‘ಇಂದಿರಾ ಆಹಾರ ಕಿಟ್’ಗಳನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ‘ಅನ್ನ ಭಾಗ್ಯ’ ಯೋಜನೆಯಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡುತ್ತಿರುವ 5 ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಈ ಕಿಟ್‌ಗಳನ್ನು ನೀಡಲು ನಿರ್ಧರಿಸಲಾಗಿದೆ. ಪಡಿತರ ಅಕ್ಕಿ ಕಾಳಸಂತೆಗೆ ಹೋಗುವುದನ್ನು ತಡೆಯಲು ಈ ಪೌಷ್ಟಿಕ ವಸ್ತುಗಳನ್ನು ಒಳಗೊಂಡ ಕಿಟ್ ವಿತರಿಸುವ ಯೋಜನೆ ರೂಪಿಸಲಾಗಿದೆ. ಏನಿದು ಇಂದಿರಾ ಆಹಾರ್ ಕಿಟ್ಪಡಿತರ ಅಕ್ಕಿ ಜೊತೆ […]

ಬಳ್ಳೆಯಲ್ಲಿ 23ರಂದು ಅರ್ಜುನ ಆನೆ ಸ್ಮಾರಕ ಉದ್ಘಾಟನೆ: ಈಶ್ವರ ಖಂಡ್ರೆ

ಬೆಂಗಳೂರು, ಜೂ.21: ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರೆ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ನಾಗರಹೊಳೆ ಅರಣ್ಯದ ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಜೂ.23ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಸಲಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ 2023ರ ಡಿಸೆಂಬರ್ 4ರಂದು ಹುತಾತ್ಮನಾದ ಕ್ಯಾಪ್ಟನ್ ಎಂದೇ ಖ್ಯಾತವಾಗಿದ್ದ ದಸರಾ ಆನೆ ಅರ್ಜುನನ್ನು ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ ಸಮಾಧಿ ಮಾಡಲಾಗಿತ್ತು. ಅರ್ಜುನನ ಸಮಾಧಿಗೆ […]

ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಪ್ರಚಾರದ ಗೀಳಿಗೆ ಬಿದ್ದ ಕಾಂಗ್ರೆಸ್ ನಾಯಕರು 11 ಜೀವಗಳನ್ನು ಬಲಿತೆಗೆದುಕೊಂಡಿದ್ದಾರೆ ಎಂದು ದೂರಿದರು. ನೈತಿಕ ಹೊಣೆ ಹೊತ್ತು ಈ ಎಲ್ಲಾ ನಾಯಕರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು. News […]

ಜನರ ಭಾವನೆಗಳನ್ನು ನೋಯಿಸಲು ಅಭಿವ್ಯಕ್ತಿ ಸ್ವಾತಂತ್ರ‍್ಯ ಬಳಸಬೇಡಿ- ನಟ ಕಮಲ ಹಾಸನ್ ವಿರುದ್ಧ ಹೈಕೋರ್ಟ್ ತರಾಟೆ..!

ಬೆಂಗಳೂರು: ಕನ್ನಡ ಭಾಷೆಯ ಮೂಲದ ಬಗ್ಗೆ ನಟ ಕಮಲ್‌ಹಾಸನ್ ನೀಡಿದ ವಿವಾದಾತ್ಮಕ ಹೇಳಿಕೆಗೆ ಉಚ್ಚನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ತಮ್ಮ ತಪ್ಪಿಗೆ ಪೊಲೀಸರು ಯಾಕೆ ಭದ್ರತೆ ನೀಡಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ. ಭಾವನೆಗಳನ್ನು ನೋಯಿಸಲು ಮಾತಿನ ಹಕ್ಕನ್ನು ಬಳಸಬೇಡಿ ಎಂದು ಹೇಳಿದೆ. ಕರ್ನಾಟಕದಲ್ಲಿನ ಚಿತ್ರಮಂದಿರಗಳೂ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ತಮ್ಮ ಥಗ್‌ಲೈಫ್ ಚಿತ್ರದ ಪ್ರದರ್ಶನಕ್ಕೆ ಭದ್ರತೆ ಕೋರಿ ಕಮಲಹಾಸನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಪೀಠ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಜನರಿಂದ ಲಾಭಗಳಿಸಲು ಬಯಸುವ […]

ಭೂಕುಸಿತ ಹಿನ್ನೆಲೆ : ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು […]

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ : ಅಧಿಕಾರಿಗಳ ನಿವಾಸ ಶೋಧ..!

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ಮನೆ ಸೇರಿದಂತೆ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಇಂದು ದಾಳಿ ಮಾಡಿದ್ದಾರೆ. ಗದಗ ನಗರದ ಹುಡ್ಕೋ ಕಾಲೊನಿಯ ಗಂಗಾಧರ ಶಿರೋರ ಅವರ ಮನೆ ಹಾಗೂ ನಗರದ ಸಂಬಂಧಿಕರ ಮತ್ತು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ಅವರ ಸಂಬಧಿಕರ ಮನೆ ಮೇಲೆ ಲೋಕಾಯುಕ್ತ ಪೋಲಿಸರು […]

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು‌ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಶಿಷ್ಟ ರಕ್ಷಣೆ-ದುಷ್ಟರ […]

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ :ಜನರು ಆತಂಕ ಪಡುವ ಅಗತ್ಯವಿಲ್ಲ :ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ವರ್ಷ ಇಲ್ಲಿಯವರೆಗೆ, 35 ಪ್ರಕರಣಗಳು ವರದಿಯಾಗಿದ್ದು, ಕಳೆದ 15 ದಿನಗಳಲ್ಲಿ ಸ್ವಲ್ಪ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನದಟ್ಟಣೆಯ ಸ್ಥಳಗಳಿಗೆ ಭೇಟಿ ನೀಡುವಾಗ ಜಾಗರೂಕರಾಗಿರಬೇಕು. ಜನದಟ್ಟಣೆಯ ಪ್ರದೇಶಗಳಲ್ಲಿ […]

ರಾಜಕಾಲುವೆ ಒತ್ತುವರಿ ತೆರವು ಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ

ರಾಜಧಾನಿ ಬೆಂಗಳೂರಿನ ಮಳೆ ಹಾನಿ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ನಗರ ಪ್ರದಕ್ಷಿಣೆ ನಡೆಸಿದರು. ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈ ವೇಳೆ ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದ್ದಾರೆ. ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.ಬಳಿಕ ಊಃಖ ಲೇಔಟ್, […]