ಜಾತಿಗಣತಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ. ನಿರ್ಧಿಷ್ಟ ಸಮಯದೊಳಗೆ ಕೇಂದ್ರ ಸರ್ಕಾರ ಜಾತಿಗಣತಿ ಮುಗಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ಮೇಲೆ ಜಾತಿಗಣತಿ ನಡೆಸುವಂತೆ ಒತ್ತಡ ಹೇರಿದ್ದ ರಾಹುಲ್ ಗಾಂಧಿಯವರನ್ನು ಅವರು ಅಭಿನಂದಿಸಿದ್ದಾರೆ. ಜನಗಣತಿ ಜತೆಗೆ ಜಾತಿಗಣತಿ […]
ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಒಪ್ಪಿಗೆ

ನವದೆಹಲಿ: ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನವದೆಹಲಿಯಲ್ಲಿಂದು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೆಲವು ರಾಜ್ಯಗಳು ಜಾತಿ ಸಮೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ರಾಜಕೀಯ ಉದ್ದೇಶದಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗಬಾರದು ಎಂಬ ಹಿನ್ನೆಲೆಯಲ್ಲಿ ಜನಗಣತಿಯಲ್ಲಿ ಜಾತಿಗಣತಿಯ ಮಾಹಿತಿಯನ್ನು ದಾಖಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಜಾತಿ […]
ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು […]
ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ :ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ […]
ಹುಚ್ಚರಾಯಸ್ವಾಮಿ ಅದ್ದೂರಿ ಬ್ರಹ್ಮ ರಥೋತ್ಸವ

ಶಿಕಾರಿಪುರ ಪಟ್ಟಣದ ಆರಾಧ್ಯದೈವ ಶ್ರೀ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವ ಶನುವಾರ ಅದ್ದೂರಿಯಾಗಿ ನೆರವೇರಿತು. ಹುಚ್ಚರಾಯಸ್ವಾಮಿ ದೇವರ ಉತ್ಸವಮೂರ್ತಿ ಪೂಜೆ ಸಲ್ಲಿಸಿ ಪಲ್ಲಕ್ಕಿ ಮೂಲಕ ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ರಥದ ಉತ್ಸವ ನಡೆಸಲಾಯಿತು. ರಥೋತ್ಸವದ ವೇಳೆ ಗರುಡ ದರ್ಶನ..! ಪ್ರತಿವರ್ಷ ಬ್ರಹ್ಮ ರಥೋತ್ಸವದ ವೇಳೆ ಆಕಾಶದಲ್ಲಿ ಗರುಡ ರಥದ ಸುತ್ತು ಹಾಕುತ್ತದೆ ನಂತರ ರಥವನ್ನು ಎಳೆಯಲಾಗುತ್ತದೆ. ಮಾಜಿ ಸಿಎಂ ಬಿಎಸ್ ವೈ ಭಾಗಿ:ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಹುಚ್ಚರಾಯಸ್ವಾಮಿಯ ಪರಮಭಕ್ತರಾಗಿದ್ದು ರಥೋತ್ಸವಕ್ಕೆ ತಪ್ಪದೆ ಆಗಮಿಸುತ್ತಾರೆ. ಮಕ್ಕಳಾದ ಸಂಸದ ಬಿವೈ […]
ದಲಿತ ಸಮುದಾಯದ ಒಳ ಮೀಸಲಾತಿ ನ್ಯಾ. ನಾಗಮೋಹನ್ ದಾಸ್ ಸಮಿತಿ ಸಿಎಂಗೆ ವರದಿ ಸಲ್ಲಿಕೆ..!

ಬೆಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುದ್ದಿ ಜಾಹೀರಾತಿಗಾಗಿ- 7411515737
ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಯತ್ನಾಳ್ ಉಚ್ಚಾಟನೆ..!

ಬಿಜೆಪಿಯ ಹಿರಿಯ ನಾಯಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯ ಬಿಜೆಪಿ ನಾಯಕರ ವಿರುದ್ದ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್ನಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್ಗೆ ನಿಮ್ಮ ಪ್ರತಿಕ್ರಿಯೆಯನ್ನು […]
ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು:ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು. ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತಂದಿದ್ದು, ಅದನ್ನು ಪುನರ್ ಪರ್ಯಾಲೋಚಿಸಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು. “ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ […]
ಪೋಲಿಸರು ಸ್ವತ ವಾಹನದ ಮೇಲೆ ಪೋಲಿಸ್ ಎಂದು ಬರೆಸುವಂತಿಲ್ಲ:ಡಾ.ಜಿ ಪರಮೇಶ್ವರ್

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ ಪರಮೇಶ್ವರ್ ಉತ್ತರಿಸಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು […]
ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರ ಮಾಹಿತಿ ನೀಡಲು ಸಿಎಂಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ.ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದುಬೈಗೆ ಬೇರೆ ಬೇರೆ ದೇಶಗಳಿಗೆ […]