ತುರ್ತು ಪರಿಸ್ಥಿತಿ ಅಧಿಕಾರಕ್ಕಾಗಿ ಪವಿತ್ರ ಸಂವಿಧಾನವನ್ನೇ ಬಲಿ ಕೊಟ್ಟ ದಿನಗಳು- ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಕೇವಲ ತಮ್ಮ ಅಧಿಕಾರಕ್ಕಾಗಿ ನಮ್ಮ ಪವಿತ್ರ ಸಂವಿಧಾನವನ್ನೇ ಆಗ ಬಲಿ ಕೊಡಲಾಗಿತ್ತು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. “ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಬೆಂಗಳೂರು” ಇವರ ವತಿಯಿಂದ ಇಂದು ಟೌನ್ ಹಾಲ್ ನಲ್ಲಿ “1975ರ ತುರ್ತು ಪರಿಸ್ಥಿತಿ 50ನೇ ವರ್ಷ-ಕರಾಳ ದಿನಗಳು” ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಗ […]

ಜನರ ಭಾವನೆಗಳನ್ನು ನೋಯಿಸಲು ಅಭಿವ್ಯಕ್ತಿ ಸ್ವಾತಂತ್ರ‍್ಯ ಬಳಸಬೇಡಿ- ನಟ ಕಮಲ ಹಾಸನ್ ವಿರುದ್ಧ ಹೈಕೋರ್ಟ್ ತರಾಟೆ..!

ಬೆಂಗಳೂರು: ಕನ್ನಡ ಭಾಷೆಯ ಮೂಲದ ಬಗ್ಗೆ ನಟ ಕಮಲ್‌ಹಾಸನ್ ನೀಡಿದ ವಿವಾದಾತ್ಮಕ ಹೇಳಿಕೆಗೆ ಉಚ್ಚನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ತಮ್ಮ ತಪ್ಪಿಗೆ ಪೊಲೀಸರು ಯಾಕೆ ಭದ್ರತೆ ನೀಡಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ. ಭಾವನೆಗಳನ್ನು ನೋಯಿಸಲು ಮಾತಿನ ಹಕ್ಕನ್ನು ಬಳಸಬೇಡಿ ಎಂದು ಹೇಳಿದೆ. ಕರ್ನಾಟಕದಲ್ಲಿನ ಚಿತ್ರಮಂದಿರಗಳೂ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ತಮ್ಮ ಥಗ್‌ಲೈಫ್ ಚಿತ್ರದ ಪ್ರದರ್ಶನಕ್ಕೆ ಭದ್ರತೆ ಕೋರಿ ಕಮಲಹಾಸನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಪೀಠ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಜನರಿಂದ ಲಾಭಗಳಿಸಲು ಬಯಸುವ […]

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು‌ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಶಿಷ್ಟ ರಕ್ಷಣೆ-ದುಷ್ಟರ […]

ರಾಜ್ಯದ ಐದು ನವೀಕೃತ ರೈಲು ನಿಲ್ದಾಣಗಳು ನಾಳೆ ಪ್ರಧಾನಿಯಿಂದ ವರ್ಚ್ಯುಯಲ್ ಮೂಲಕ ಲೋಕಾರ್ಪಣೆ

ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಅತ್ಯಾಧುನಿಕ ಸೌಲಭ್ಯಗಳಿಂದ ನವೀಕೃತಗೊಳಿಸಲಾಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಐದು ರೈಲು ನಿಲ್ದಾಣಗಳನ್ನು ವರ್ಚ್ಯುಯಲ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ಈ ಪೈಕಿ ಬೆಳಗಾವಿಯ ಗೋಕಾಕ ರೋಡ್ ರೈಲು ನಿಲ್ದಾಣ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮಾರುಕಟ್ಟೆಯ ಆಕರ್ಷಣೆ ಹಾಗೂ ಗೋಕಾಕ ಫಾಲ್ಸ್ ದಂತಹ ಪ್ರವಾಸಿ ಕೇಂದ್ರದ ದೃಷ್ಟಿಯಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಪ್ರಮುಖ ರೈಲು ನಿಲ್ದಾಣವಾಗಿರುವ ಗೋಕಾಕ ರೋಡ್ […]

ಪಾಕಿಸ್ತಾನಿ ಉಗ್ರ ನೆಲೆ ಮೇಲೆ ಭಾರತೀಯ ಸೇನೆ ದಾಳಿ: ಆಪರೇಷನ್ ಸಿಂಧೂರ

ಭಾರತೀಯ ಸಶಸ್ತ್ರ ಪಡೆಗಳು ಮಧ್ಯರಾತ್ರಿಯ ನಂತರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿವೆ. ಒಟ್ಟು ಒಂಬತ್ತು ತಾಣಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ತನ್ನ ಕ್ರಮಗಳು ಕೇಂದ್ರೀಕೃತವಾಗಿವೆ ಎಂದು ಸಚಿವಾಲಯ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಆಪರೇಷನ್ ಸಿಂಧೂರವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿದರು.ಇದೇ ವೇಳೆ ಪಾಕಿಸ್ತಾನದ ಯಾವುದೇ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಲಾಗಿಲ್ಲ. ಗುರಿಗಳ ಆಯ್ಕೆ ಮತ್ತು ಕಾರ್ಯಗತಗೊಳಿಸುವ ವಿಧಾನದಲ್ಲಿ […]

ಪೆಹಲ್ಗಾಮ್ ಉಗ್ರರ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂಗಳ ಪರಿಹಾರ

ಚಿಕ್ಕಮಗಳೂರು : ಪೆಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ ಮೃತಪಟ್ಟ ಕುಟುಂಬಗಳೀಗೆ ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ದ ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಗಳ ಪರಿಹಾರವನ್ನು ಘೋಷಣೆ ಮಾಡಿದೆ. ದಾಳಿಯಲ್ಲಿ ಮೃತಪಟ್ಟ ಒಟ್ಟು 26 ಸದಸ್ಯರ ಕುಟುಂಬಗಳೀಗೆ ಒಟ್ಟು 52 ಲಕ್ಷ ರೂ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಶೃಂಗೇರಿ ಶಾರದ ಮಠದಲ್ಲಿ ಇಂದು ನಡೆದ ಅನುರಾಗ ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿತೀರ್ಥ ಸ್ವಾಮೀಜಿಯವರು ಕಾಶ್ಮೀರದಲ್ಲಿ ಶ್ರೀ ಶಾರದಾ ಮಾತೆಯು ನೆಲ್ಲೆಸಿದಾಳೆ […]

ಜಾತಿಗಣತಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ. ನಿರ್ಧಿಷ್ಟ ಸಮಯದೊಳಗೆ ಕೇಂದ್ರ ಸರ್ಕಾರ ಜಾತಿಗಣತಿ ಮುಗಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ಮೇಲೆ ಜಾತಿಗಣತಿ ನಡೆಸುವಂತೆ ಒತ್ತಡ ಹೇರಿದ್ದ ರಾಹುಲ್ ಗಾಂಧಿಯವರನ್ನು ಅವರು ಅಭಿನಂದಿಸಿದ್ದಾರೆ. ಜನಗಣತಿ ಜತೆಗೆ ಜಾತಿಗಣತಿ […]

ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಒಪ್ಪಿಗೆ

ನವದೆಹಲಿ: ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನವದೆಹಲಿಯಲ್ಲಿಂದು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೆಲವು ರಾಜ್ಯಗಳು ಜಾತಿ ಸಮೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ರಾಜಕೀಯ ಉದ್ದೇಶದಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗಬಾರದು ಎಂಬ ಹಿನ್ನೆಲೆಯಲ್ಲಿ ಜನಗಣತಿಯಲ್ಲಿ ಜಾತಿಗಣತಿಯ ಮಾಹಿತಿಯನ್ನು ದಾಖಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಜಾತಿ […]

ದೇಶದ ಪವಿತ್ರ ಚಾರ್‌ಧಾಮ್ ಯಾತ್ರೆ ನಾಳೆಯಿಂದ ಆರಂಭ

ಭಾರತದ ಅತ್ಯಂತ ಪವಿತ್ರ ತೀರ್ಥಯಾತ್ರೆಯಲ್ಲಿ ಒಂದಾದ ಉತ್ತರಾಖಂಡದಲ್ಲಿ ನಡೆಯುವ ಚಾರ್‌ಧಾಮ್ ಯಾತ್ರೆ ನಾಳೆ ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಆರಂಭವಾಗಲಿದೆ. ಉತ್ತರ ಕಾಶಿ ಜಿಲ್ಲೆಯ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ಬಾಗಿಲು ತೆರೆಯುವುದರೊಂದಿಗೆ ಯಾತ್ರೆ ಆರಂಭವಾಗಲಿದೆ. ರುದ್ರಪ್ರಯಾಗ್ ಜಿಲ್ಲೆಯ ಕೇದರಾನಾಥ ದೇವಾಲಯದ ದ್ವಾರಗಳು ಮೇ 2 ರಂದು ಹಾಗೂ ಚಮೋಲಿ ಜಿಲ್ಲೆಯ ಬದರಿನಾಥ್ ಧಾಮದ ಬಾಗಿಲುಗಳು ಮೇ 4 ರಂದು ತೆರಯಲಿದೆ. ವೈದಿಕ ಸ್ತೋತ್ರಗಳು ಮತ್ತು ಇತರೆ ಧಾರ್ಮಿಕ ಆಚರಣೆಗಳ ನಡುವೆ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ […]

ಭಾರತೀಯ ಸೈನ್ಯಕ್ಕೆ ಸಂಪೂರ್ಣ ಸ್ವಾತಂತ್ರ್ಯ : ಗುರಿ, ಸಮಯ ನಿರ್ಧರಿಸಿ ಉಗ್ರರನ್ನು ಹೊಡೆದು ಹಾಕಿ: ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿ ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್‌ ಜನರಲ್ ಅನಿಲ್ ಚೌಹಾಣ್, ಭೂಸೇನೆ, ವಾಯುಸೇನೆ, ನೌಕಾಸೇನೆಯ ಮುಖ್ಯಸ್ಥರ ಜೊತೆ ಸಭೆ ನಡೆಸಿದರು. ಭಯೋತ್ಪಾದನೆಯನ್ನು ಸಂಪೂರ್ಣ ತೊಡೆದು ಹಾಕುವುದು ನಮ್ಮ ರಾಷ್ಟ್ರೀಯ ಸಂಕಲ್ಪ. ಭಾರತೀಯ ಸೇನೆಯ […]