ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ‘ಹೈಟೆಕ್’ ಸ್ಪರ್ಶ: ರಾತ್ರಿ ಹಾರಾಟಕ್ಕೆ ಹಾದಿ ಸುಗಮ

ಶಿವಮೊಗ್ಗ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣವು ಅಂತರರಾಷ್ಟ್ರೀಯ ಮಟ್ಟದ ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವತ್ತ ಮಹತ್ವದ ಹೆಜ್ಜೆ ಇರಿಸಿದೆ. ವಿಮಾನಗಳ ಸುರಕ್ಷಿತ ಸಂಚಾರ ಹಾಗೂ ರಾತ್ರಿ ವೇಳೆ ಇಳಿಯಲು ಪೂರಕವಾದ ತಾಂತ್ರಿಕ ಕಾಮಗಾರಿಗಳು ಈಗ ವೇಗ ಪಡೆದುಕೊಂಡಿವೆ. ಮಣ್ಣು ಪರೀಕ್ಷೆ ಯಶಸ್ವಿವಿಮಾನ ನಿಲ್ದಾಣದ ಸೋಗಾನೆ ಆವರಣದಲ್ಲಿ ಅತ್ಯಂತ ನಿರ್ಣಾಯಕವಾಗಿದ್ದ ಮಣ್ಣಿನ ಸ್ಥಿರತೆ ಪರೀಕ್ಷೆ (Soil Stability Test) ವರದಿ ಈಗ ಬಂದಿದ್ದು, ಭೂಮಿಯ ದೃಢತೆ ತಾಂತ್ರಿಕ ಉಪಕರಣಗಳ ಅಳವಡಿಕೆಗೆ ಪೂರಕವಾಗಿದೆ ಎಂದು ದೃಢಪಟ್ಟಿದೆ. ಭಾರೀ […]
ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಏಕೈಕ ಗುರಿ: ಬಿ.ಎಸ್. ಯಡಿಯೂರಪ್ಪ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ 84ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ರಾಜಕೀಯ ಕರ್ಮಭೂಮಿ ಶಿಕಾರಿಪುರದಲ್ಲಿ ಅಭಿಮಾನದ ಹೊನಲು ಮೂಡಿತು ಸಾವಿರಾರು ಅಭಿಮಾನಿಗಳು, ಮಠಾಧೀಶರು ಹಾಗೂ ಗಣ್ಯರ ಸಮ್ಮುಖದಲ್ಲಿ ಹುಟ್ಟುಹಬ್ಬದ ಸಂಭ್ರಮ ಅದ್ದೂರಿಯಾಗಿ ನೆರವೇರಿತು. ಇಲ್ಲಿನ ಏಕಲವ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ಗೌರವ ಸಮರ್ಪಣಾ’ ಸಮಾವೇಶದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, “ನನ್ನ ರಾಜಕೀಯ ಜೀವನದ ಏಕೈಕ ಗುರಿ ಎಂದರೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು. ಇದಕ್ಕಾಗಿ ನಾನು ವಿಶ್ರಾಂತಿ ಪಡೆಯದೆ ರಾಜ್ಯದ ಮೂಲೆ ಮೂಲೆಗೂ […]
ಆಕಾಶವಾಣಿಗೆ ಎಫ್.ಎಂ ಸಂಜೀವಿನಿ; 8 ಜಿಲ್ಲೆಗಳಿಗೆ ಪ್ರಸಾರ ವ್ಯಾಪ್ತಿ ವಿಸ್ತರಣೆ:ಸಚಿವ ಮುರಗನ್

ಶಿವಮೊಗ್ಗ ರೇಡಿಯೋ ಇಂದಿಗೂ ಅತ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು, ಭದ್ರಾವತಿ ಆಕಾಶವಾಣಿಗೆ ಹೈ-ಟೆಕ್ ಎಫ್.ಎಂ ಪ್ರೇಷಕ ಅಳವಡಿಸುವ ಮೂಲಕ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆ ಇಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ತಿಳಿಸಿದರು. ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಭದ್ರಾವತಿ ಆಕಾಶವಾಣಿಯ ನೂತನ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋಟಿ ಜನರಿಗೆ ಶ್ರವಣಾನಂದ ಭದ್ರಾವತಿ […]
ಬೇಟೆಗಾರನನ್ನೇ ಬೆನ್ನಟ್ಟಿದ ದಿಂಡದಹಳ್ಳಿ ಶ್ವಾನಗಳು! ಹೊಂಡದಲ್ಲಿ ಸಿಲುಕಿದ ಚಿರತೆ ಕೊನೆಗೂ ಸೆರೆ

ಶಿಕಾರಿಪುರ: ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸೃಷ್ಟಿಯಾಗಿದ್ದ ಚಿರತೆ ಭೀತಿ ಈಗ ಹೊಸ ತಿರುವು ಪಡೆದುಕೊಂಡಿದೆ. ಗ್ರಾಮದ ಹೊಂಡವೊಂದರಲ್ಲಿ ಚಿರತೆ ಬಿದ್ದಿರುವುದು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಅದನ್ನು ಸೆರೆಹಿಡಿಯಲು ಮುಂದಾಗಿದೆ. ಶ್ವಾನಗಳ ಸಾಹಸ:ಸಾಮಾನ್ಯವಾಗಿ ಚಿರತೆ ಕಂಡರೆ ನಾಯಿಗಳು ಹೆದರುತ್ತವೆ. ಆದರೆ ಇಲ್ಲಿ ಉಲ್ಟಾ ನಡೆದಿದೆ! ನಿತ್ರಾಣಗೊಂಡಿದ್ದ ಚಿರತೆಯನ್ನು ಗ್ರಾಮದ ನಾಯಿಗಳೇ ಗುಂಪುಕಟ್ಟಿ ಬೆನ್ನಟ್ಟಿವೆ. ಈ ರೋಚಕ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಾಯಿಗಳಿಗೆ ಹೆದರಿ ಓಡುವಾಗ ಚಿರತೆಯು ಹತ್ತಿರದ ಸಣ್ಣ ಹೊಂಡಕ್ಕೆ ಬಿದ್ದಿದೆ. ಅರಣ್ಯ […]
ಬಿ.ಎಸ್.ವೈ ಜನ್ಮದಿನೋತ್ಸವ: ಶಿಕಾರಿಪುರದಲ್ಲಿ ಅರ್ಜುನ್ ಜನ್ಯ ತಂಡದಿಂದ ಸಂಗೀತ ಸುಧೆ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 84ನೇ ಜನ್ಮದಿನದ ಅಂಗವಾಗಿ ಫೆಬ್ರವರಿ 27 ರಂದು ಪಟ್ಟಣದ ಕುಮದ್ವತಿ ಕಾಲೇಜಿನ ಏಕಲವ್ಯ ಕ್ರೀಡಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಲಾಗಿದೆ. ಈ ಸಂಭ್ರಮಕ್ಕೆ ಮೆರುಗು ನೀಡಲು ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ತಂಡದವರಿಂದ ‘ಸಂಗೀತ ಸುಧೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ಅಭಿಮಾನಿಗಳ ಬಳಗದ ಸಂಚಾಲಕ ಕೆ.ಎಸ್. ಗುರುಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ‘ಸಮಾಜ ಗೌರವ ಸಮರ್ಪಣೆ’ ಕಾರ್ಯಕ್ರಮ […]
ವಿಶ್ವ ದಾಖಲೆಯ ಪುಟ ಸೇರಿದ ಶಿಕಾರಿಪುರದ ಚುರ್ಚಿಗುಂಡಿ ಮುರಾರ್ಜಿ ದೇಸಾಯಿ ವಸತಿ ಶಾಲೆ..!

ಶಿಕಾರಿಪುರ: ತಾಲ್ಲೂಕಿನ ಚುರ್ಚಿಗುಂಡಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯು ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. 2026ರ ಜನವರಿ 26ರಂದು ನಡೆದ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ಮಟ್ಟದ ‘ಸಮೂಹ ರಾಷ್ಟ್ರಗೀತೆ ಗಾಯನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಶಾಲೆಯ ವಿದ್ಯಾರ್ಥಿಗಳು ಪ್ರತಿಷ್ಠಿತ “Cyber Book of World Records” ನಲ್ಲಿ ಸ್ಥಾನ ಪಡೆದಿದ್ದಾರೆ. ಸಾಧನೆಯ ಹಾದಿ:ಗಣರಾಜ್ಯೋತ್ಸವದ ಪವಿತ್ರ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಏಕಕಂಠದಲ್ಲಿ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ರಾಷ್ಟ್ರಭಕ್ತಿಯನ್ನು ಮೆರೆದಿದ್ದಾರೆ. ಇವರ ಈ […]
ಚಿಕ್ಕಮಗಳೂರಿನಲ್ಲಿ ಕಾಡಾನೆ ಅಟ್ಟಹಾಸ: ವಾರದಲ್ಲಿ ಎರಡನೇ ಬಲಿ, ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಸರಣಿ ದಾಳಿ ಮುಂದುವರಿದಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳಾ ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯ ಹಿನ್ನೆಲೆ:ಮೃತರನ್ನು ಹಾವೇರಿ ಜಿಲ್ಲೆಯ ಹಾನಗಲ್ ಮೂಲದ ಬೋರಮ್ಮ (33) ಎಂದು ಗುರುತಿಸಲಾಗಿದೆ. ಕಳೆದ ಸೋಮವಾರವಷ್ಟೇ ಇದೇ ಪ್ರದೇಶದಲ್ಲಿ ಆನೆಯೊಂದು ಕಾರ್ಮಿಕನನ್ನು ಬಲಿ ಪಡೆದಿತ್ತು. ಆ ಘಟನೆ ಮಾಸುವ ಮುನ್ನವೇ ಇಂದು ಅದೇ ಜಾಗದಲ್ಲಿ ಬೋರಮ್ಮ ಅವರ ಮೇಲೆ ಆನೆ ದಾಳಿ ನಡೆಸಿದೆ. […]
ಮುಂದಿನ ಜಾತ್ರೆಗೆ ಚಂದ್ರಗುತ್ತಿ ದೇಗುಲ ಹೊಸ ರೂಪ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ‘ಚಂದ್ರಗುತ್ತಿ ರೇಣುಕಾಂಬ ದೇವಾಲಯದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲಾಗಿದ್ದು, ಮುಂದಿನ ಜಾತ್ರೆಯ ವೇಳೆಗೆ ಭಕ್ತರಿಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಿ ದೇವಸ್ಥಾನಕ್ಕೆ ಕಾಯಕಲ್ಪ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭರವಸೆ ನೀಡಿದರು. ಶನಿವಾರ ಚಂದ್ರಗುತ್ತಿಯಲ್ಲಿ ರೇಣುಕಾಂಬ ದೇವಾಲಯದ ₹2.84 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ನಂತರ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನವರಿ ಮಾಹೆಯಲ್ಲಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. […]
ಈಸೂರು ದಂಗೆಯ ಕೊನೆಯ ಕೊಂಡಿ ಕಳಚಿತು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ. ದೇವೇಂದ್ರಪ್ಪ ಇನ್ನಿಲ್ಲ

ಶಿಕಾರಿಪುರ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಮೊದಲ ಬಾರಿಗೆ ‘ಸ್ವತಂತ್ರ ಹಳ್ಳಿ’ ಎಂದು ಘೋಷಿಸಿಕೊಂಡು ಇತಿಹಾಸ ಸೃಷ್ಟಿಸಿದ್ದ ಶಿವಮೊಗ್ಗ ಜಿಲ್ಲೆಯ ಈಸೂರು ದಂಗೆಯ ಸಾಕ್ಷಿಯಾಗಿದ್ದ ಕೊನೆಯ ಕೊಂಡಿ ಕಳಚಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಕೆ. ದೇವೇಂದ್ರಪ್ಪ (99) ಅವರು ಇಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿಕಾರಿಪುರ ತಾಲ್ಲೂಕಿನ ತಿಮ್ಲಾಪುರ ಗ್ರಾಮದ ನಿವಾಸಿಯಾಗಿದ್ದ ದೇವೇಂದ್ರಪ್ಪ ಅವರು, 1942ರ ‘ಕ್ವಿಟ್ ಇಂಡಿಯಾ’ ಚಳುವಳಿಯ ಸಂದರ್ಭದಲ್ಲಿ ನಡೆದ ಐತಿಹಾಸಿಕ ಈಸೂರು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ’ಏಸೂರು ಕೊಟ್ಟರೂ ಈಸೂರು […]
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶೀಘ್ರವೇ ನೈಟ್ ಲ್ಯಾಂಡಿಂಗ್ ವ್ಯವಸ್ಥೆ; ಅಧ್ಯಕ್ಷ ನಂಜಯ್ಯನಮಠ್

ಶಿವಮೊಗ್ಗ: ಮಲೆನಾಡಿಗರಿಗೆ ಸಾರಿಗೆ ಕ್ಷೇತ್ರದಲ್ಲಿ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮುಂದಿನ ಆರೇಳು ತಿಂಗಳ ಒಳಗಾಗಿ ರಾತ್ರಿ ವೇಳೆಯೂ ವಿಮಾನ ಸಂಚಾರಕ್ಕೆ ಅನುಕೂಲವಾಗುವಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂಜಯ್ಯನಮಠ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಅಂತ್ಯದ ವೇಳೆಗೆ ಸುಮಾರು 6 ಕೋಟಿ ರೂ. ವೆಚ್ಚದ ಕಾಮಗಾರಿಗಳು ಆರಂಭಗೊಳ್ಳಲಿವೆ. ದಿಕ್ಸೂಚಿ ಯಾಂತ್ರಿಕ ವ್ಯವಸ್ಥೆ (DBOR) ಅಳವಡಿಕೆಗೆ ಟೆಂಡರ್ […]