ಅಂಬ್ಲಿಗೊಳ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡು (ಪೆಲೆಟ್ಸ್) ಹೊಡೆದ ಗಾಯವೂ ಇರುವುದಾಗಿ ಮಾಧ್ಯಮಗಳಲ್ಲಿ ಸಚಿತ್ರ […]
ಬಂಕಾಪುರಧಾಮದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಮತ್ತೊಂದು ತೋಳ

ಬೆಂಗಳೂರು, ಫೆ.13: ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಮತ್ತೊಂದು ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದು, ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ […]
ಸೊರಬ ತಾಲೂಕಿನಲ್ಲಿ ನೀರಾವರಿ ಬ್ಯಾರೇಜ್ಗಳ ನಿರ್ಮಾಣ ಕಾಮಗಾರಿಗೆ ಚಾಲನೆ: ಮಧು ಬಂಗಾರಪ್ಪ

ಶಿವಮೊಗ್ಗ: ವರದಾನದಿಯ ಅಭಿವೃದ್ಧಿಗಾಗಿ ಕೈಗೆತ್ತಿ ಕೊಂಡಿರುವ ಈ ಯೋಜನೆಗಳಿಂದಾಗಿ ತಾಲೂಕಿನ 39 ಗ್ರಾಮಗಳ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು, ಕೆರೆ-ಕಟ್ಟೆ-ಕಾಲುವೆಗಳ ಭರ್ತಿ ಮಾಡಲು ಸಹಕಾರಿಯಾಗಲಿದೆ. ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. 3013 ಎಕರೆ ಭೂ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. 53 ಕಿ.ಮೀ. ಯೋಜನಾ ವ್ಯಾಪ್ತಿಯ ಉದ್ದವಿದ್ದು, ಅಂದಾಜು 218.62 ಎಂ.ಸಿ.ಎಫ್ .ಟಿ. ಸಾಮರ್ಥ್ಯದ ನೀರಿನ ಶೇಖರಣೆ ಆಗಲಿದೆ ಎಂದರು. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಸೊರಬ ತಾಲೂಕಿನ ಕಡಸೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ […]
ವಿದ್ಯುತ್ ಮಾರ್ಗಗಳ ನಿರ್ಮಾಣದಲ್ಲಿ ರೈತರ ಹಿತ ಕಾಯಲು ಸೂಚನೆ – ಮಧು ಬಂಗಾರಪ್ಪ

ಶಿವಮೊಗ್ಗ : ಜಿಲ್ಲೆಯಲ್ಲಿ ಈಗಾಗಲೇ ಮಂಜೂರಾಗಿ ಕಾಮಗಾರಿ ಕೈಗೆತ್ತಿಕೊಂಡಿರುವ ಜಡೆ-ಬನವಾಸಿ ಮತ್ತು ಈಸೂರು-ಅಂಜನಾಪುರ 110ಕೆ.ವಿ. ವಿದ್ಯುತ್ಪ್ರಸರಣಾ ಮಾರ್ಗದಲ್ಲಿ ಬರುವ ರೈತರೊಂದಿಗೆ ಸಂಬಂಧಿಸಿದ ಮೆಸ್ಕಾಂ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಶೀಘ್ರ ಸಮಾಲೋಚನೆ ನಡೆಸಿ, ರೈತರಿಗೆ ಅನುಕೂಲವಾಗುವ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಇಂದು ನಗರದ ಲೋಕೋಪಯೋಗಿ ಭವನದಲ್ಲಿ ವಿವಿಧ ಇಲಾಖೆಗಳ ಹಲವು ಯೋಜನೆಗಳ ಪ್ರಗತಿ ಪರಿಶೀಲನೆ ಸರಣಿ ಸಭೆಗಳ ಅಧ್ಯಕ್ಷತೆ […]
ಭದ್ರಾವತಿ ಕಾರ್ಖಾನೆ ಮರುಜೀವ :ಹೆಚ್ ಡಿ ಕುಮಾರಸ್ವಾಮಿ..!

ಹಾಸನ: ಭದ್ರಾವತಿಯಲ್ಲಿ ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರು ಕಟ್ಟಿರುವ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚಿ ಹೋಗಿದೆ. ಅದಕ್ಕೆ ಮರು ಜೀವ ಪ್ರಯತ್ನಕ್ಕೂ ಕೈ ಹಾಕಿದ್ದೇನೆ ಎಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಕಾಂಗ್ರೆಸ್ ಸರಕಾರ ಎಷ್ಟರಮಟ್ಟಿಗೆ ನನಗೆ ಬೆಂಬಲ ಕೊಡುತ್ತೋ, ಬಿಡುತ್ತೋ ಗೊತ್ತಿಲ್ಲ. ಇತಿಚೆಗೆ ಜಾರ್ಖಂಡ್ ರಾಜ್ಯದ ಬೋಕಾರೋ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ್ದೆ. ಅಲ್ಲಿ ವಿಸ್ತರಣಾ ಯೋಜನೆಗೆ ₹20,000 […]
ತಾಲೂಕು ಕಚೇರಿ ಎದುರು ಪ್ರತಿಭಟನೆ ವೇಳೆ ವಿಷ ಕುಡಿಯಲು ಯತ್ನಿಸಿದ ರೈತ..!

ಶಿಕಾರಿಪುರ ಪಟ್ಟಣದ ತಾಲೂಕ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಈಸೂರಿನಿಂದ ಅಂಜನಾಪುರವರೆಗೆ ಕೆಇಬಿಗ್ರೀಡ್ ಅವೈಜ್ಞಾನಿಕ ನೀಲನಕ್ಷೆ ವಿದ್ಯುತ್ ಮಾರ್ಗದ ವಿರುದ್ದ ತಾಲೂಕ್ ಕಛೇರಿ ಎದುರು ಪ್ರತಿಭಟನೆ ವೇಳೆ ರೈತನೋರ್ವ ವಿಷ ಕುಡಿಯಲು ಯತ್ನಿಸಿದ ಘಟನೆ ನಡೆದಿದೆ. ಚಿಕ್ಕಜೋಗಿಹಳ್ಳಿಯ ಸುಭಷ್ ಚಂದ್ರ ಎನ್ನುವ ರೈತ ವಿಷ ಕುಡಿಯಲು ಯತ್ನಿಸಿದ ರೈತ ಎಂದು ತಿಳಿದು ಬಂದಿದೆ. ತಕ್ಷಣ ರೈತ ಮುಖಂಡರು ಪೋಲಿಸ್ ಇಲಾಖೆ ಸಿಬ್ಬಂದಿಗಳು ಬಟರ್ ಅನ್ನು ಕಸಿದುಕೊಂಡಿದ್ದಾರೆ. ಸುದ್ದಿ ಜಾಹೀರಾತಿಗಾಗಿ-7411515737
ಜಿಲ್ಲಾದ್ಯಂತ ಒಂದೆ ದರದಲ್ಲಿ ಅಡಿಕೆ ಖೇಣಿ ಹಿಡಿಯಲು ಖೇಣಿದಾರರ ಸಂಘ ನಿರ್ಧಾರ..!

ಶಿಕಾರಿಪುರ ತಾಲೂಕಿನ ಕಣಿವೆಮನೆ ಗ್ರಾಮದಲ್ಲಿ ಜಿಲ್ಲಾ ಅಡಿಕೆ ಖೇಣಿದಾರರ ಸೌಹಾರ್ದ ಸಹಕಾರ ಸಂಘದ ವತಿಯಿಂದ ಜಿಲ್ಲಾ ಖೇಣಿದಾರರ ಸಭೆ ನಡೆಸಲಾಯಿತು. ಈ ವೇಳೆ ಜಿಲ್ಲೆಯ ಅಡಿಕೆ ಖೇಣಿದಾರರು ಒಂದೇ ದರದಲ್ಲಿ ರೈತರ ತೋಟಗಳನ್ನು ಹಿಡಿಯಬೇಕು ಹಾಗೂ ಆಗಸ್ಟ್ 15ರ ನಂತರ ಅಡಿಕೆ ಕೊಯ್ಲು ಶುರು ಮಾಡಬೇಕು ಇದರಿಂದ ರೈತರಿಗೂ ಹಾಗೂ ಖೇಣಿದಾರರಿಗೂ ಅನುಕೂಲ ಆಗಲಿದೆ ಎಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ. ಜಿಲ್ಲಾದ್ಯಂತ ಪ್ರತಿ 75ಕೆಜಿ ಗೆ 1kg ಪೆಚ್ಚು ನಿಗದಿ ಇನ್ನು ಹೆಚ್ಚಿನ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು […]
ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಕೋಟೆಹೊಂಡ ರವಿ ಶರಣಾಗತಿ :ನಕ್ಸಲ್ ಮುಕ್ತ ರಾಜ್ಯವಾಗಿ ಘೋಷಣೆ..!

ಚಿಕ್ಕಮಗಳೂರು: ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ […]
ಶಿವಮೊಗ್ಗಕ್ಕೆ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ

ಶಿವಮೊಗ್ಗ: ಇಂದು ಸಂಜೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ಸಂಜೆ 5 ಗಂಟೆಗೆ ವಿಮಾನ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 6 ಗಂಟೆಗೆ ಆಗಮಿಸಲಿದ್ದು ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಗುರುವಾರ ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ ದಿ.31 ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಪ್ರಯಾಣ ಬೆಳಸಲಿದ್ದಾರೆ. ಸುದ್ದಿ ಮತ್ತು ಜಾಹೀರಾತಿಗಾಗಿ-7411515737
ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]