ಶಿವಮೊಗ್ಗದಲ್ಲಿ ಮಾದಕ ವಸ್ತುಗಳೇ ದುರ್ಘಟನೆಗೆ ಮೂಲ: ಶಾಸಕ ಚನ್ನಬಸಪ್ಪ

ಶಿವಮೊಗ್ಗದಲ್ಲಿ ಮಾದಕ ವಸ್ತುಗಳೇ ದುರ್ಘಟನೆಗೆ ಮೂಲ: ಶಾಸಕ ಚನ್ನಬಸಪ್ಪ ಕಳವಳ ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಸರಣಿ ದುರ್ಘಟನೆಗಳಿಗೆ ಅಪ್ರಾಪ್ತ ವಯಸ್ಸಿನ ಮಕ್ಕಳು ಮಾದಕ ವಸ್ತುಗಳನ್ನು ಸೇವಿಸುತ್ತಿರುವುದೇ ಮುಖ್ಯ ಕಾರಣ ಎಂದು ಶಾಸಕ ಚನ್ನಬಸಪ್ಪ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗಾಂಜಾ ಸೇವನೆಯಂತಹ ದುಷ್ಕೃತ್ಯಗಳಲ್ಲಿ ತೊಡಗಿರುವ ಬಾಲಾಪರಾಧಿಗಳಲ್ಲಿ ಹೆಚ್ಚಿನವರು 10ನೇ ತರಗತಿ ಮುಗಿಸಿದವರಾಗಿದ್ದಾರೆ. ಇನ್ನೂ ಕೆಲವರು 8 ಮತ್ತು 9ನೇ ತರಗತಿಯಲ್ಲಿ ಉತ್ತೀರ್ಣರಾಗದೆ ಶಾಲೆಯಿಂದ ಹೊರಬಂದವರಾಗಿದ್ದು, ಇಂತಹ ಘಟನೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಅವರು ತಿಳಿಸಿದರು. […]
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ‘ಹೈಟೆಕ್’ ಸ್ಪರ್ಶ: ರಾತ್ರಿ ಹಾರಾಟಕ್ಕೆ ಹಾದಿ ಸುಗಮ

ಶಿವಮೊಗ್ಗ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣವು ಅಂತರರಾಷ್ಟ್ರೀಯ ಮಟ್ಟದ ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವತ್ತ ಮಹತ್ವದ ಹೆಜ್ಜೆ ಇರಿಸಿದೆ. ವಿಮಾನಗಳ ಸುರಕ್ಷಿತ ಸಂಚಾರ ಹಾಗೂ ರಾತ್ರಿ ವೇಳೆ ಇಳಿಯಲು ಪೂರಕವಾದ ತಾಂತ್ರಿಕ ಕಾಮಗಾರಿಗಳು ಈಗ ವೇಗ ಪಡೆದುಕೊಂಡಿವೆ. ಮಣ್ಣು ಪರೀಕ್ಷೆ ಯಶಸ್ವಿವಿಮಾನ ನಿಲ್ದಾಣದ ಸೋಗಾನೆ ಆವರಣದಲ್ಲಿ ಅತ್ಯಂತ ನಿರ್ಣಾಯಕವಾಗಿದ್ದ ಮಣ್ಣಿನ ಸ್ಥಿರತೆ ಪರೀಕ್ಷೆ (Soil Stability Test) ವರದಿ ಈಗ ಬಂದಿದ್ದು, ಭೂಮಿಯ ದೃಢತೆ ತಾಂತ್ರಿಕ ಉಪಕರಣಗಳ ಅಳವಡಿಕೆಗೆ ಪೂರಕವಾಗಿದೆ ಎಂದು ದೃಢಪಟ್ಟಿದೆ. ಭಾರೀ […]
ವೇತನ ಬಡ್ತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ‘ಟ್ರಾಪ್’ನಲ್ಲಿ ಸಿಲುಕಿದ ಭದ್ರಾವತಿ ಶಿಕ್ಷಣಾಧಿಕಾರಿ!

ಶಿವಮೊಗ್ಗ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಮ್ಮದೇ ಕಚೇರಿಯ ಸಿಬ್ಬಂದಿಯ ವೇತನ ಬಡ್ತಿ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟು, ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ:ಭದ್ರಾವತಿ ಬಿ.ಇ.ಒ ಕಚೇರಿಯಲ್ಲಿ ಅಧೀಕ್ಷಕರಾಗಿರುವ ಲಿಂಗರಾಜು ಅವರು 2011 ರಿಂದ 2023 ರವರೆಗಿನ ತಮ್ಮ ವಾರ್ಷಿಕ ವೇತನ ಬಡ್ತಿ ಮತ್ತು ಬಾಕಿ ಇರುವ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ಕೋರಿದ್ದರು. ಈ ಕೆಲಸಕ್ಕಾಗಿ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಎ.ಕೆ. ಹಾಗೂ ಮಧ್ಯವರ್ತಿ ಮಂಜುನಾಥ್ ಎಂಬುವವರು 4 ಲಕ್ಷ […]
ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಏಕೈಕ ಗುರಿ: ಬಿ.ಎಸ್. ಯಡಿಯೂರಪ್ಪ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ 84ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ರಾಜಕೀಯ ಕರ್ಮಭೂಮಿ ಶಿಕಾರಿಪುರದಲ್ಲಿ ಅಭಿಮಾನದ ಹೊನಲು ಮೂಡಿತು ಸಾವಿರಾರು ಅಭಿಮಾನಿಗಳು, ಮಠಾಧೀಶರು ಹಾಗೂ ಗಣ್ಯರ ಸಮ್ಮುಖದಲ್ಲಿ ಹುಟ್ಟುಹಬ್ಬದ ಸಂಭ್ರಮ ಅದ್ದೂರಿಯಾಗಿ ನೆರವೇರಿತು. ಇಲ್ಲಿನ ಏಕಲವ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ಗೌರವ ಸಮರ್ಪಣಾ’ ಸಮಾವೇಶದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, “ನನ್ನ ರಾಜಕೀಯ ಜೀವನದ ಏಕೈಕ ಗುರಿ ಎಂದರೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು. ಇದಕ್ಕಾಗಿ ನಾನು ವಿಶ್ರಾಂತಿ ಪಡೆಯದೆ ರಾಜ್ಯದ ಮೂಲೆ ಮೂಲೆಗೂ […]
ಆಕಾಶವಾಣಿಗೆ ಎಫ್.ಎಂ ಸಂಜೀವಿನಿ; 8 ಜಿಲ್ಲೆಗಳಿಗೆ ಪ್ರಸಾರ ವ್ಯಾಪ್ತಿ ವಿಸ್ತರಣೆ:ಸಚಿವ ಮುರಗನ್

ಶಿವಮೊಗ್ಗ ರೇಡಿಯೋ ಇಂದಿಗೂ ಅತ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು, ಭದ್ರಾವತಿ ಆಕಾಶವಾಣಿಗೆ ಹೈ-ಟೆಕ್ ಎಫ್.ಎಂ ಪ್ರೇಷಕ ಅಳವಡಿಸುವ ಮೂಲಕ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆ ಇಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ತಿಳಿಸಿದರು. ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಭದ್ರಾವತಿ ಆಕಾಶವಾಣಿಯ ನೂತನ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋಟಿ ಜನರಿಗೆ ಶ್ರವಣಾನಂದ ಭದ್ರಾವತಿ […]
ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ; ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರು, ಕೃಷಿ ಕಾರ್ಮಿಕರು ಹಾಗೂ ಪಶು ಸಂಗೋಪನೆಯಲ್ಲಿ ಆಸಕ್ತಿ ಹೊಂದಿರುವವರಿಗೆ ಕರ್ನಾಟಕ ಸರ್ಕಾರವು ಉತ್ತಮ ಅವಕಾಶವೊಂದನ್ನು ಕಲ್ಪಿಸಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ ಯೋಜನೆ (SCP) ಮತ್ತು ಗಿರಿಜನ ಉಪಯೋಜನೆಯಡಿ (TSP) ಹೊಸದಾಗಿ ಕುರಿ ಅಥವಾ ಮೇಕೆ ಘಟಕಗಳನ್ನು ಸ್ಥಾಪಿಸಲು ಆಸಕ್ತ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಯಾರು ಅರ್ಜಿ ಸಲ್ಲಿಸಬಹುದು?: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಕೂಲಿ ಕಾರ್ಮಿಕರು, ಕೃಷಿ […]
ವಿಶ್ವ ದಾಖಲೆಯ ಪುಟ ಸೇರಿದ ಶಿಕಾರಿಪುರದ ಚುರ್ಚಿಗುಂಡಿ ಮುರಾರ್ಜಿ ದೇಸಾಯಿ ವಸತಿ ಶಾಲೆ..!

ಶಿಕಾರಿಪುರ: ತಾಲ್ಲೂಕಿನ ಚುರ್ಚಿಗುಂಡಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯು ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. 2026ರ ಜನವರಿ 26ರಂದು ನಡೆದ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ಮಟ್ಟದ ‘ಸಮೂಹ ರಾಷ್ಟ್ರಗೀತೆ ಗಾಯನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಶಾಲೆಯ ವಿದ್ಯಾರ್ಥಿಗಳು ಪ್ರತಿಷ್ಠಿತ “Cyber Book of World Records” ನಲ್ಲಿ ಸ್ಥಾನ ಪಡೆದಿದ್ದಾರೆ. ಸಾಧನೆಯ ಹಾದಿ:ಗಣರಾಜ್ಯೋತ್ಸವದ ಪವಿತ್ರ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಏಕಕಂಠದಲ್ಲಿ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ರಾಷ್ಟ್ರಭಕ್ತಿಯನ್ನು ಮೆರೆದಿದ್ದಾರೆ. ಇವರ ಈ […]
ಶಿವಮೊಗ್ಗ: ಕ್ಷುಲ್ಲಕ ಜಗಳಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಬಲಿ; ಇಬ್ಬರು ಅಪ್ರಾಪ್ತರ ವಶ

ಶಿವಮೊಗ್ಗ: ನಗರದಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ಜಗಳವೊಂದು ಅಂತಿಮವಾಗಿ 16 ವರ್ಷದ ವಿದ್ಯಾರ್ಥಿಯೊಬ್ಬನ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಇಲ್ಲಿನ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾರುಣ ಘಟನೆ ನಡೆದಿದೆ. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸಂಕೇತ್ (16) ಕೊಲೆಯಾದ ಬಾಲಕ. ಪರೀಕ್ಷೆಗಳು ಹತ್ತಿರವಿರುವ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶೇಷ ತರಗತಿ ಮುಗಿಸಿ ಸಂಕೇತ್ ಮನೆಗೆ ಮರಳುತ್ತಿದ್ದನು. ಈ ವೇಳೆ ಶಾಲೆಯಿಂದ ಸ್ವಲ್ಪ ದೂರದಲ್ಲಿ ಸಂಕೇತ್ನನ್ನು ಅಡ್ಡಗಟ್ಟಿದ ಮೂರ್ನಾಲ್ಕು ಬಾಲಕರು ಆತನೊಂದಿಗೆ ಜಗಳ ತೆಗೆದಿದ್ದಾರೆ. […]
ಶಿರಸಿ ಮಾರಿಕಾಂಬಾ ಜಾತ್ರೆಗೆ ರೈಲ್ವೆ ಸಿಹಿ ಸುದ್ದಿ: ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಸಿರ್ಸಿ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಉಂಟಾಗುವ ಭಕ್ತಾದಿಗಳ ವಿಪರೀತ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರು (ಯಶವಂತಪುರ) ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಘೋಷಿಸಿದೆ. ಫೆಬ್ರವರಿ 27 ಮತ್ತು 28ರಂದು ಈ ವಿಶೇಷ ರೈಲುಗಳು ತಲಾ ಒಂದು ಬಾರಿ (ಸಿಂಗಲ್ ಟ್ರಿಪ್) ಸಂಚರಿಸಲಿವೆ ಎಂದು ರೈಲ್ವೆ ಇಲಾಖೆಯ ಅಧಿಕೃತ ಪ್ರಕಟಣೆ ತಿಳಿಸಿದೆ. ಸಂಚಾರ ಅವಧಿ ಮತ್ತು ಸಮಯ:ರೈಲು ಸಂಖ್ಯೆ 06587 (ಯಶವಂತಪುರ–ತಾಳಗುಪ್ಪ): […]
ರೈಲ್ವೆ ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ: ಭದ್ರಾವತಿ ಪೊಲೀಸರ ಸಮಯಪ್ರಜ್ಞೆ

ಭದ್ರಾವತಿ: ಪ್ರೇಮ ವೈಫಲ್ಯದಿಂದ ಮನನೊಂದು ರೈಲ್ವೆ ಹಳಿ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 18 ವರ್ಷದ ಯುವಕನನ್ನು ಭದ್ರಾವತಿ ನ್ಯೂ ಟೌನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.ಭಾನುವಾರ ತಡರಾತ್ರಿ ನಗರದ ‘ಹುತ್ತ’ ರೈಲ್ವೆ ಟ್ರ್ಯಾಕ್ ಬಳಿ ಈ ಘಟನೆ ನಡೆದಿದೆ. ಘಟನೆಯ ವಿವರ:ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ರೈಲ್ವೆ ಹಳಿ ಮೇಲೆ ಮಲಗಿರುವ ಬಗ್ಗೆ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ನ್ಯೂ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ […]