ಪಕ್ಷದಲ್ಲಿ ಏನೆಲ್ಲಾ ಡ್ಯಾಮೇಜ್ ಆಗಬೇಕು ಎಲ್ಲಾವೂ ಆಗಿದೆ: ಬಿವೈ ವಿಜಯೇಂದ್ರ
ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಕ್ಷಕ್ಕೆ ಏನೆಲ್ಲಾ ಡ್ಯಾಮೇಜ್ ಆಗಬೇಕು ಎಲ್ಲಾ ಆಗಿದೆ ಇನ್ನೊಂದು ವಾರದಲ್ಲಿ ರಾಜ್ಯಾಧ್ಯಕ್ಷರು ಯಾರು ಆಗಲಿದ್ದಾರೆ ಎಲ್ಲಾ ತಿಳಿಯಲಿದೆ. ಬಿಜೆಪಿ ಯತ್ನಲ್ ಬಣದಿಂದ ದೆಹಲಿ ಪ್ರವಾಸ ಕೈಗೊಂಡಿದ್ದು ಇಂದು ಬಿಜೆಪಿ ಹೈ ಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವರ್ಷದಿಂದ ನಾನು ಯಾರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ ಪಕ್ಷಕ್ಕೆ ನಿಷ್ಠನಾಗಿ ದುಡಿಯುತ್ತಿದ್ದೇನೆ.ಇನ್ನೋಂದು ವಾರ […]
ಜಿಲ್ಲಾದ್ಯಂತ ಒಂದೆ ದರದಲ್ಲಿ ಅಡಿಕೆ ಖೇಣಿ ಹಿಡಿಯಲು ಖೇಣಿದಾರರ ಸಂಘ ನಿರ್ಧಾರ..!
ಶಿಕಾರಿಪುರ ತಾಲೂಕಿನ ಕಣಿವೆಮನೆ ಗ್ರಾಮದಲ್ಲಿ ಜಿಲ್ಲಾ ಅಡಿಕೆ ಖೇಣಿದಾರರ ಸೌಹಾರ್ದ ಸಹಕಾರ ಸಂಘದ ವತಿಯಿಂದ ಜಿಲ್ಲಾ ಖೇಣಿದಾರರ ಸಭೆ ನಡೆಸಲಾಯಿತು. ಈ ವೇಳೆ ಜಿಲ್ಲೆಯ ಅಡಿಕೆ ಖೇಣಿದಾರರು ಒಂದೇ ದರದಲ್ಲಿ ರೈತರ ತೋಟಗಳನ್ನು ಹಿಡಿಯಬೇಕು ಹಾಗೂ ಆಗಸ್ಟ್ 15ರ ನಂತರ ಅಡಿಕೆ ಕೊಯ್ಲು ಶುರು ಮಾಡಬೇಕು ಇದರಿಂದ ರೈತರಿಗೂ ಹಾಗೂ ಖೇಣಿದಾರರಿಗೂ ಅನುಕೂಲ ಆಗಲಿದೆ ಎಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ. ಜಿಲ್ಲಾದ್ಯಂತ ಪ್ರತಿ 75ಕೆಜಿ ಗೆ 1kg ಪೆಚ್ಚು ನಿಗದಿ ಇನ್ನು ಹೆಚ್ಚಿನ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು […]
ಶಿವಮೊಗ್ಗಕ್ಕೆ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ
ಶಿವಮೊಗ್ಗ: ಇಂದು ಸಂಜೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ಸಂಜೆ 5 ಗಂಟೆಗೆ ವಿಮಾನ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 6 ಗಂಟೆಗೆ ಆಗಮಿಸಲಿದ್ದು ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಗುರುವಾರ ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ ದಿ.31 ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಪ್ರಯಾಣ ಬೆಳಸಲಿದ್ದಾರೆ. ಸುದ್ದಿ ಮತ್ತು ಜಾಹೀರಾತಿಗಾಗಿ-7411515737
ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?
ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]
ಫ್ರೀಡಂ ಪಾರ್ಕ್ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು(ಫ್ರೀಡಂ ಪಾರ್ಕ್)ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ(ರೂ.5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿಸಿದರು. ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಕರಕುಶಲ ಉತ್ಪನ್ನಗಳನ್ನು ಖರೀದಿಸಿ, ಕುಶಲಕರ್ಮಿಗಳನ್ನು ಉತ್ತೇಜಿಸಿದರು. ಹಾಗೂ ತಿಂಡಿ ತಿನಿಸು ಮಳಿಗೆಯಲ್ಲಿ ತಿನಿಸುಗಳನ್ನು ಸವಿದರು. ಈ ವೇಳೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಅತ್ಯುತ್ತಮ ಕುಶಲಕರ್ಮಿಗಳು ಇದ್ದು, ಅಚ್ಚುಕಟ್ಟಾಗಿ […]
ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ..!
ಶಿವಮೊಗ್ಗ: ಮಲೆನಾಡಿನ ಅನೇಕ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿಗಿದ್ದು ಅನೇಕ ಕಡೆಗಳಲ್ಲಿ ಕಾಡು ಆನೆಗಳ ದಾಳಿಯಿಂದ ರೈತರ ಬೆಳೆಗಳು ನಾಶವಾಗಿದೆ ಪ್ರಾಣಿಹಾನಿಯಂತ ಘಟನೆಗಳು ನಡೆಯುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದರು. ಶಿವಮೊಗ್ಗ ನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಎದುರು ಬಿಜೆಪಿ ರೈತಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಿ ಕಾಡುಪ್ರಾಣಿಗಳಿಂದ ದಾಳಿಗೆ ಒಳಾದ ಕುಟುಂಬಕ್ಕೆ ಪರಿಹಾರ ಹಾಗೂ ಬೆಳೆಹಾನಿಯಾದ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಮನವಿ ಮಾಡಲಾಯಿತು. ಈ […]
ಬಿ.ಎಸ್ ಯಡಿಯೂರಪ್ಪನವರ ವಿರುದ್ಧದ ಅಪಮಾನ ಕಾರ್ಯಕರ್ತರು ನೊಂದಿದ್ದಾರೆ : ಬಿ ವೈ ವಿಜಯೇಂದ್ರ
ಶಿವಮೊಗ್ಗದ ಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದಲ್ಲಿನ ಆಂತರಿಕ ಗೊಂದಲಗಳು ತನಗೆ ಖುಷಿ ತಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುವ ಮೊದಲೇ ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳು ಬಗೆಹರಿಯಬೇಕು. ನಾನೂ ಸಹ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ. ಈ ಅಹಿತ ಬೆಳವಣಿಗೆಗಳು ನನಗೂ ಸಂತೋಷ ತಂದಿಲ್ಲ. ಕಾರ್ಯಕರ್ತರಲ್ಲೂ ಸಹ ಬೇಸರದಿಂದಿದ್ದಾರೆ. ಕೇಂದ್ರ ನಾಯಕರ ಮೇಲೆ ನನಗೆ ವಿಶ್ವಾಸವಿದೆ. ವಿಶೇಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ […]
FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ
ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]
ಕ್ರೀಡಾಶಾಲೆ-ಕ್ರೀಡಾ ನಿಲಯಗಳಿಗೆ ಆಯ್ಕೆ
ಶಿವಮೊಗ್ಗ,07 ( ಕರ್ನಾಟಕ ವಾರ್ತೆ) ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಕ್ರೀಡಾಶಾಲೆ / ಕ್ರೀಡಾನಿಲಯಗಳ ಪ್ರವೇಶಕ್ಕೆ ವಿವಿಧ ಮಟ್ಟದಲ್ಲಿ ಆಯ್ಕೆ ನಡೆಸಲಾಗುವುದು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಮಾಡಲಾಗುವುದು. ದಿ: 20-01-2025 ರಂದು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು, ತೀರ್ಥಹಳ್ಳಿ. ದಿ: 21-01-2025 ಸಾಗರ ತಾಲ್ಲೂಕಿನಲ್ಲಿ ಸಾಗರ ತಾಲ್ಲೂಕು ಕ್ರೀಡಾಂಗಣ. ದಿ: 23-01-2025 ಹೊಸನಗರ ತಾಲ್ಲೂಕಿನಲ್ಲಿ ಹೊಸನಗರ ತಾಲ್ಲೂಕು ಕ್ರೀಡಾಂಗಣ. ದಿ: 24-01-2025 ಸೊರಬ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು […]
ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ
ಶಿವಮೊಗ್ಗ, ಜ.17 ( ಕರ್ನಾಟಕ ವಾರ್ತೆ): ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಜ.22 ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ನ ಬಸವಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವ ಏರ್ಪಡಿಸಲಾಗಿದೆ.ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಅಗ್ರಾಸನ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ರವರ ಉಪಸ್ಥಿತಿಯಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ […]