ಸಮಾಜ ಸೇವೆ ಮತ್ತು ಆಧ್ಯಾತ್ಮಿಕತೆಯಿಂದ ಮಾನವ ಜನ್ಮ ಸಾರ್ಥಕ: ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ: “ದೇವರು ಕೊಟ್ಟಿರುವ ಪವಿತ್ರವಾದ ಮಾನವ ಜನ್ಮವನ್ನು ವ್ಯರ್ಥ ಮಾಡದೆ, ಸಮಾಜಕ್ಕೆ ಒಳಿತು ಮಾಡುವ ಮೂಲಕ ಸಾರ್ಥಕಪಡಿಸಿಕೊಳ್ಳಬೇಕು,” ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಕರೆ ನೀಡಿದರು. ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಮಹಾಶಿವರಾತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈಶ್ವರಿಯ ವಿಶ್ವವಿದ್ಯಾಲಯದ ಸದಸ್ಯರ ಆಧ್ಯಾತ್ಮಿಕ ಜೀವನಶೈಲಿ ಮತ್ತು ಶಿಸ್ತು ಇಡೀ ಸಮಾಜಕ್ಕೆ ಮಾದರಿಯಾಗಿದೆ. ಉತ್ತಮ ಜೀವನಶೈಲಿಯು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುತ್ತದೆ. ಆರೋಗ್ಯವಂತ ದೇಹವಿದ್ದರೆ ಮಾತ್ರ ನಾವು ಸಮಾಜಕ್ಕೆ ಉತ್ತಮ ಸೇವೆ […]
ಅಭಿವೃದ್ಧಿಯೇ ಮುಖ್ಯ, ರಾಜಕಾರಣವಲ್ಲ: ಸಚಿವ ಸತೀಶ್ ಜಾರಕಿಹೊಳೆ

ಶಿಕಾರಿಪುರ: “ನಮ್ಮ ಕೆಲಸಗಳು ಗಟ್ಟಿಯಾಗಿರಬೇಕೆಂದು ನಾವು ಬಯಸುತ್ತೇವೆ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸದೆ, ಜನಪರ ಕಾರ್ಯಗಳಿಗೆ ನಾವು ಮೊದಲ ಆದ್ಯತೆ ನೀಡುತ್ತೇವೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳೆ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಶ್ರೀ ವಾಲ್ಮೀಕಿ ಮಹರ್ಷಿ ಹಾಗೂ ಬೇಡರ ಕಣ್ಣಪ್ಪ ಶಿಲಾಮೂರ್ತಿಗಳ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಿಕ್ಷಣಕ್ಕೆ ಹೊಸ ಆಯಾಮ: 100 ಶಾಲೆಗಳ ನಿರ್ಮಾಣಶಿಕ್ಷಣ ಕ್ಷೇತ್ರದ ಕುರಿತು ತಮ್ಮ […]
ಶಿಕಾರಿಪುರ: ಮನೆಯಲ್ಲೇ ಅಂಗನವಾಡಿ ಸಹಾಯಕಿ ಭೀಕರ ಕೊಲೆ

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬಿಳಕಿ ಗ್ರಾಮದಲ್ಲಿ ನಡುಕ ಹುಟ್ಟಿಸುವ ಘಟನೆಯೊಂದು ನಡೆದಿದೆ. ಗ್ರಾಮದ ಅಂಗನವಾಡಿ ಸಹಾಯಕಿಯೊಬ್ಬರು ತಮ್ಮ ಸ್ವಗೃಹದಲ್ಲೇ ನಿಗೂಢವಾಗಿ ಕೊಲೆಯಾಗಿದ್ದಾರೆ. ಘಟನೆಯ ವಿವರ:ಕೊಲೆಯಾದ ದುರ್ದೈವಿಯನ್ನು ಬಿಳಕಿ ಗ್ರಾಮದ ನಿವಾಸಿ ಪ್ರೇಮಕ್ಕ (52) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ರಾತ್ರಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಇಂದು ಬೆಳಿಗ್ಗೆ ಪ್ರೇಮಕ್ಕ ಅವರ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ […]
ಬಿಜೆಪಿ ಮುಖಂಡನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ..!

ಶಿಕಾರಿಪುರ: ವಿರೋಧಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳಿ ಅಧ್ಯಕ್ಷ ಬಿ.ಡಿ ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಚಿವ ಸಂಪುಟ ಸ್ಥಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರ ಎಲ್ಲಾ ನಿಗಮ ಮಂಡಳಿಯ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಆದೇಶವನ್ನು ನೀಡಿತ್ತು. ಬಿ.ಡಿ.ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಂಪುಟ ಸ್ಥಾನವನ್ನ ಸರ್ಕಾರ ಹಿಂಪಡೆದಿದ್ದು ಬಿ.ಡಿ.ಭೂಕಾಂತ್ ಅವರು ಬಿಜೆಪಿ ಮುಖಂಡರಾಗಿದ್ದು ಆಗಿದ್ದು ಅವರ ಪತ್ನಿ ಬಿಜೆಪಿಯಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದು ಇನ್ನೂ […]
ಶಿಕಾರಿಪುರ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿ ಲೋಕಯುಕ್ತ ಬಲೆಗೆ..!

ಶಿಕಾರಿಪುರ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವಾಗ ಲೋಕಯುಕ್ತ ಅಧಿಕಾರಿಗಳ ಬಲೆಗೆ ಬಿದಿದ್ದಾರೆ. ಶಿಕಾರಿಪುರ ತಾಲ್ಲೂಕಿಕ ಚಿಕ್ಕ ಜಂಬೂರು ಗ್ರಾಮದ ಗ್ರಾಮ ಆಡಳಿತ ಅಧಿಕಾರಿ( VA) ವಿಠ್ಠಲ್ ಕೋಲ್ಹಾರ 1ಲಕ್ಷ ಲಂಚ ಸ್ವೀಕರಿಸುವಾಗ ಟ್ರ್ಯಾಪ್ ಮಾಡಲಾಗಿದೆ. ಎಂದು ಲೋಕಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣವಾಗಬೇಕು:ಸಿ.ಬಿ. ವೆಂಕಟೇಶ್

ಶಿಕಾರಿಪುರ 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕ ದೌರ್ಜನ್ಯವೆಸಗಿದರೆ ಅಪರಾಧ ಘಟಿಸಿದ 24 ಗಂಟೆಗಳಲ್ಲಿ ಮಕ್ಕಳ ವಿಶೇಷ ಪೊಲೀಸರಿಗೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಈ ರೀತಿ ಮಾಡುವುದರಿಂದ ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣಮಾಡಲು ಸಹಾಯವಾಗುತ್ತದೆಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿ.ಬಿ. ವೆಂಕಟೇಶ್ ಅಭಿಮತ ವ್ಯಕ್ತಪಡಿಸಿದರು. ಸಮುದಾಯ ಆರೋಗ್ಯ ಕೇಂದ್ರ ಶಿಕಾರಿಪುರ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಕ್ಕಳಿಗೆ […]
ಪುರಸಭೆ ಸಿಸಿ ಕ್ಯಾಮರಗಳ ನಿರ್ಲಕ್ಷ್ಯ:ಎಸ್ ಸಿಪಿ ಟಿಎಸ್ ಪಿ ಯೋಜನೆ ಫಲಾನುಭವಿಗಳ ಆಯ್ಕೆ ವ್ಯತ್ಯಾಸ-ಸದಸ್ಯ ಸುರೇಶ್ ಆರೋಪ

ಶಿಕಾರಿಪುರ: ಸಿಸಿ ಕ್ಯಾಮೆರಾ ಗಳು ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಹಲವು ಬಾರಿ ಹೇಳಿದರೂ ಮುಖ್ಯ ಅಧಿಕಾರಿ ಅದನ್ನು ಸರಿಪಡಿಸಿಲ್ಲ ಸಭೆಗಳಲ್ಲಿ ಏನಾದರೂ ಅವಘಡ ಸಂಭವಿಸಿದರೆ ದಾಖಲೆಯಾಗಿ ಉಳಿಯುತ್ತದೆ ಆ ವ್ಯವಸ್ಥೆಯನ್ನು ಏಕೆ ಸರಿ ಮಾಡಿಲ್ಲ ಎಂದು ಮುಖ್ಯ ಅಧಿಕಾರಿಗಳನ್ನು ಸದಸ್ಯ ಸುರೇಶ್ ಪ್ರಶ್ನಿಸಿದರು. ಪಟ್ಟಣದ ಪುರಸಭಾ ಕಾರ್ಯಾಲಯದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕೋಟ್ಯಂತರ ರೂ ವ್ಯವಹಾರ ನಡೆಯುವ ಜಾಗ ಲಕ್ಷಾಂತರ ರೂಪಾಯಿಗಳು ವಾಹನಗಳು ಕೋಟ್ಯಾನು ಕೋಟಿ […]
ಉದ್ಯಮಿ ಬಿಜೆಪಿ ಮುಖಂಡ ಎನ್.ವಿ ಈರೇಶ್ ಕಾಂಗ್ರೇಸ್ ಸೇರ್ಪಡೆಗೆ ವೇದಿಕೆ ಸಿದ್ದತೆ.?

ಶಿಕಾರಿಪುರ ತಾಲ್ಲೂಕಿನ ಉದ್ಯಮಿ ಅಖಿಲ ಕರ್ನಾಟಕ ವೀರಶೈವ ಮಹಾಸಭಾದ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ ಎನ್.ವಿ ಈರೇಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನುವ ಪೋಟೋ ಸಖತ್ ವೈರಲ್ ಆಗಿತ್ತು. ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿಲ್ಲ. ಈ ಕುರಿತು ಎನ್ ವಿ ಈರೇಶ್ ಅವರು ಶಿಕಾರಿ ನ್ಯೂಸ್ ನೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ವಿವಿಧ ಸಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಾನು ಕಾಂಗ್ರೆಸ್ ಪಕ್ಷದ ಮೂಲಕ ಮುಂದಿನ ರಾಜಕೀಯ ಭವಿಷ್ಯವನ್ನು […]
ಶಿರಾಳಕೊಪ್ಪದಲ್ಲಿ ಪೋಲಿಸರ ದಾಳಿ ಗೋ ಮಾಂಸ ವಶ: ಕರ್ತವ್ಯಕ್ಕೆ ಅಡ್ಡಿ..!

ಶಿರಾಳಕೊಪ್ಪ: ಪಟ್ಟಣದಲ್ಲಿ ಪೋಲಿಸರ ದಾಳಿ ನಡೆಸಿದ್ದು ಇಬ್ಬರು ಆರೋಪಿಗಳು ಮತ್ತು ಗೋವಿನ ಮಾಂಸ ಪತ್ತೆಯಾಗಿದೆ. ಪಿಎಸ್ಐ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆದಿದೆ ಈ ಘಟನೆಗೆ ಸಂಬಂಧಿಸಿದಾಗ ಮೂವರು ಪೊಲೀಸ್ ಮತ್ತು ಆರೋಪಿತರ ಕಡೆಯಿಂದ ಒಬ್ಬರು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ದಾಳಿಯಲ್ಲಿ ಮೊದಲಿಗೆ ಆರೋಪಿತರೊಬ್ಬರು ಪೊಲೀಸರ ತಡೆಯಲು ಯತ್ನಿಸಿದ್ದಾರೆ. ಮನೆಯ ಮೇಲೆ ದಾಳಿ ಮಾಡಲು ಹೋದ ಪೊಲೀಸರನ್ನ ಮನೆಯವರು ಗೇಟ್ ಬಳಿಯೇ ತಡೆದು ನಿಮಗೆ ದಾಳಿ ಮಾಡಲು ಏನು ಅಧಿಕಾರವಿದೆ ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಎನ್ನಲಾಗಿದೆ. […]
ಶಿಕಾರಿಪುರಶ್ರಾವಣ ಮಾಸದ ಪ್ರಯುಕ್ತ ಬೃಹತ್ ಅನ್ನ ಸಂತರ್ಪಣೆ

ಶಿಕಾರಿಪುರ ಪಟ್ಟಣದ ಆರಾಧ್ಯ ದೈವ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇದೇ ತಿಂಗಳ 9 ರ ಶನಿವಾರ ನೂಲು ಹುಣ್ಣಿಮೆಯ ದಿವಸ ಬರುವ ಭಕ್ತಾದಿಗಳಿಗೆ ಎ ಪಿ ಎಂ ಸಿ ವರ್ತಕರು ಮತ್ತು ರೈಸ್ ಮಿಲ್ ಮಾಲಿಕರ ಸಂಯುಕ್ತಶ್ರಯದಲ್ಲಿ ಬೆಳಗ್ಗೆಯಿಂದಲೇ ಬೃಹತ್ ಅನ್ನ ಸಂತರ್ಪಣೆ ಹಾಗೂ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದೆ ಎಂದು ವರ್ತಕರ ಸಂಘದ ಕರಿಬಸಪ್ಪನವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರಾವಣ ಮಾಸದ ಮೂರನೇ ಶನಿವಾರದಂದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದು, […]