ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣವಾಗಬೇಕು:ಸಿ.ಬಿ. ವೆಂಕಟೇಶ್

ಶಿಕಾರಿಪುರ 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕ ದೌರ್ಜನ್ಯವೆಸಗಿದರೆ ಅಪರಾಧ ಘಟಿಸಿದ 24 ಗಂಟೆಗಳಲ್ಲಿ ಮಕ್ಕಳ ವಿಶೇಷ ಪೊಲೀಸರಿಗೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಈ ರೀತಿ ಮಾಡುವುದರಿಂದ ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣಮಾಡಲು ಸಹಾಯವಾಗುತ್ತದೆಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿ.ಬಿ. ವೆಂಕಟೇಶ್ ಅಭಿಮತ ವ್ಯಕ್ತಪಡಿಸಿದರು. ಸಮುದಾಯ ಆರೋಗ್ಯ ಕೇಂದ್ರ ಶಿಕಾರಿಪುರ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಕ್ಕಳಿಗೆ […]
ಪುರಸಭೆ ಸಿಸಿ ಕ್ಯಾಮರಗಳ ನಿರ್ಲಕ್ಷ್ಯ:ಎಸ್ ಸಿಪಿ ಟಿಎಸ್ ಪಿ ಯೋಜನೆ ಫಲಾನುಭವಿಗಳ ಆಯ್ಕೆ ವ್ಯತ್ಯಾಸ-ಸದಸ್ಯ ಸುರೇಶ್ ಆರೋಪ

ಶಿಕಾರಿಪುರ: ಸಿಸಿ ಕ್ಯಾಮೆರಾ ಗಳು ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಹಲವು ಬಾರಿ ಹೇಳಿದರೂ ಮುಖ್ಯ ಅಧಿಕಾರಿ ಅದನ್ನು ಸರಿಪಡಿಸಿಲ್ಲ ಸಭೆಗಳಲ್ಲಿ ಏನಾದರೂ ಅವಘಡ ಸಂಭವಿಸಿದರೆ ದಾಖಲೆಯಾಗಿ ಉಳಿಯುತ್ತದೆ ಆ ವ್ಯವಸ್ಥೆಯನ್ನು ಏಕೆ ಸರಿ ಮಾಡಿಲ್ಲ ಎಂದು ಮುಖ್ಯ ಅಧಿಕಾರಿಗಳನ್ನು ಸದಸ್ಯ ಸುರೇಶ್ ಪ್ರಶ್ನಿಸಿದರು. ಪಟ್ಟಣದ ಪುರಸಭಾ ಕಾರ್ಯಾಲಯದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕೋಟ್ಯಂತರ ರೂ ವ್ಯವಹಾರ ನಡೆಯುವ ಜಾಗ ಲಕ್ಷಾಂತರ ರೂಪಾಯಿಗಳು ವಾಹನಗಳು ಕೋಟ್ಯಾನು ಕೋಟಿ […]
ಉದ್ಯಮಿ ಬಿಜೆಪಿ ಮುಖಂಡ ಎನ್.ವಿ ಈರೇಶ್ ಕಾಂಗ್ರೇಸ್ ಸೇರ್ಪಡೆಗೆ ವೇದಿಕೆ ಸಿದ್ದತೆ.?

ಶಿಕಾರಿಪುರ ತಾಲ್ಲೂಕಿನ ಉದ್ಯಮಿ ಅಖಿಲ ಕರ್ನಾಟಕ ವೀರಶೈವ ಮಹಾಸಭಾದ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ ಎನ್.ವಿ ಈರೇಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನುವ ಪೋಟೋ ಸಖತ್ ವೈರಲ್ ಆಗಿತ್ತು. ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿಲ್ಲ. ಈ ಕುರಿತು ಎನ್ ವಿ ಈರೇಶ್ ಅವರು ಶಿಕಾರಿ ನ್ಯೂಸ್ ನೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ವಿವಿಧ ಸಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಾನು ಕಾಂಗ್ರೆಸ್ ಪಕ್ಷದ ಮೂಲಕ ಮುಂದಿನ ರಾಜಕೀಯ ಭವಿಷ್ಯವನ್ನು […]
ಶಿರಾಳಕೊಪ್ಪದಲ್ಲಿ ಪೋಲಿಸರ ದಾಳಿ ಗೋ ಮಾಂಸ ವಶ: ಕರ್ತವ್ಯಕ್ಕೆ ಅಡ್ಡಿ..!

ಶಿರಾಳಕೊಪ್ಪ: ಪಟ್ಟಣದಲ್ಲಿ ಪೋಲಿಸರ ದಾಳಿ ನಡೆಸಿದ್ದು ಇಬ್ಬರು ಆರೋಪಿಗಳು ಮತ್ತು ಗೋವಿನ ಮಾಂಸ ಪತ್ತೆಯಾಗಿದೆ. ಪಿಎಸ್ಐ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆದಿದೆ ಈ ಘಟನೆಗೆ ಸಂಬಂಧಿಸಿದಾಗ ಮೂವರು ಪೊಲೀಸ್ ಮತ್ತು ಆರೋಪಿತರ ಕಡೆಯಿಂದ ಒಬ್ಬರು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ದಾಳಿಯಲ್ಲಿ ಮೊದಲಿಗೆ ಆರೋಪಿತರೊಬ್ಬರು ಪೊಲೀಸರ ತಡೆಯಲು ಯತ್ನಿಸಿದ್ದಾರೆ. ಮನೆಯ ಮೇಲೆ ದಾಳಿ ಮಾಡಲು ಹೋದ ಪೊಲೀಸರನ್ನ ಮನೆಯವರು ಗೇಟ್ ಬಳಿಯೇ ತಡೆದು ನಿಮಗೆ ದಾಳಿ ಮಾಡಲು ಏನು ಅಧಿಕಾರವಿದೆ ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಎನ್ನಲಾಗಿದೆ. […]
ಶಿಕಾರಿಪುರಶ್ರಾವಣ ಮಾಸದ ಪ್ರಯುಕ್ತ ಬೃಹತ್ ಅನ್ನ ಸಂತರ್ಪಣೆ

ಶಿಕಾರಿಪುರ ಪಟ್ಟಣದ ಆರಾಧ್ಯ ದೈವ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇದೇ ತಿಂಗಳ 9 ರ ಶನಿವಾರ ನೂಲು ಹುಣ್ಣಿಮೆಯ ದಿವಸ ಬರುವ ಭಕ್ತಾದಿಗಳಿಗೆ ಎ ಪಿ ಎಂ ಸಿ ವರ್ತಕರು ಮತ್ತು ರೈಸ್ ಮಿಲ್ ಮಾಲಿಕರ ಸಂಯುಕ್ತಶ್ರಯದಲ್ಲಿ ಬೆಳಗ್ಗೆಯಿಂದಲೇ ಬೃಹತ್ ಅನ್ನ ಸಂತರ್ಪಣೆ ಹಾಗೂ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದೆ ಎಂದು ವರ್ತಕರ ಸಂಘದ ಕರಿಬಸಪ್ಪನವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರಾವಣ ಮಾಸದ ಮೂರನೇ ಶನಿವಾರದಂದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದು, […]
ಶಿಕಾರಿಪುರದಲ್ಲಿ ಪತ್ನಿಕೊಲೆ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ..!

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಸವರಾಜ್ ಎಂಬಾತನೇ ಮೃತ ವ್ಯಕ್ತಿ. ಈ ಘಟನೆ ಜೈಲಿನ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಏನಿದು ಪ್ರಕರಣ..? ಕೌಟುಂಬಿಕ ಕಲಹದ ಹಿನ್ನೆಲೆ ಗಂಡನೇ ಹೆಂಡತಿಯ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ.ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಘಟನೆ ಸಂಭವಿಸಿತ್ತು. ಈ ಘಟನೆ ಜೂನ್ 12 ರಂದು ನಡೆದಿತ್ತು. ಲಾರಿ ಚಾಲಕ ಬಸವರಾಜು ಎಂಬಾತ ತನ್ನ ಪತ್ನಿ ಮಂಜುಳಾ (32) ಎಂಬುವವರ ಕೊಲೆ […]
ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಯಿರಿ – ಹಿಂದೂ ಜನಜಾಗೃತಿ ಸಮಿತಿ

ಆಗಸ್ಟ್ 15ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ ಆದರೆ ಅದೇ ದಿನ ರಾಷ್ಟ್ರಧ್ವಜವು ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ ಹೀಗಾಗಿ ಪ್ಲಾಸ್ಟಿಕ್ ,ರಾಷ್ಟ್ರಧ್ವಜಗಳ ಮಾರಾಟವನ್ನು ಕೂಡಲೇ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಾನ್ಯತಹಶೀಲ್ದಾರ್, ಡಿ.ವೈ. ಎಸ್. ಪಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಷ್ಟ್ರಧ್ವಜದ ಅಗೌರವವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮುಂಬೈ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಯಿತು ಈ ಸಂಬಂಧ […]
ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ದಿಂದ ಈಸೂರಿನ ಹುತಾತ್ಮರ ಸ್ಮಾರಕ ಸ್ವಚ್ಚತೆ..!

ಶಿಕಾರಿಪುರ: ಬಿಜೆಪಿ ಯುವಮೋರ್ಚಾ ವತಿಯಿಂದ ಈಸೂರು ಗ್ರಾಮದಲ್ಲಿ ಹುತಾತ್ಮರ ಸ್ಮಾರಕ ವನ್ನು ಸ್ವಚ್ಛತೆ ಮಾಡುವ ಮೂಲಕ ಕಾರ್ಗಿಲ್ ವಿಜಯ್ ದಿವಸ್ ಆಚರಿಸಿದರು. ಈ ವೇಳೆ ಯುವ ಮೋರ್ಚಾ ಅಧ್ಯಕ್ಷ ವೀರಣ್ಣಗೌಡ ಮಾತನಾಡಿಅದಮ್ಯ ಸಾಹಸ ಅಪ್ರತಿಮ ಶೌರ್ಯ ದೇಶಭಕ್ತಿಯ ಸ್ಫೂರ್ತಿಯೊಂದಿಗೆ ಶತ್ರುಗಳನ್ನು ಸದೆಬಡಿದು ಭಾರತಾಂಬೆಯ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸಿ ಅಮರರಾದ ಕಾರ್ಗಿಲ್ ಯುದ್ಧದ ವೀರ ಹುತಾತ್ಮರಿಗೆ ಕಾರ್ಗಿಲ್ ವಿಜಯ ದಿವಸ ಎಂದು ಆಚರಣೆ ಮಾಡಲಾಗುತ್ತಿದೆ. ಈ ದಿನ ನಮ್ಮ ವೀರ ಯೋಧರಿಗೆ ಗೌರವ ಸಲ್ಲಿಸಲು ಇತಿಹಾಸದಲ್ಲಿ ಮೊಟ್ಟಮೊದಲ […]
ಶಿಕಾರಿಪುರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 26/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅತಿಯಾದ ಮಳೆಯಿಂದ ಶೀತ ವಾತಾವರಣ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. ಇನ್ನೂ ಶಿವಮೊಗ್ಗ ತಾಲೂಕು, ಸಾಗರ, ಸೊರಬ, ಹೊಸನಗರ, ಭದ್ರಾವತಿ ತೀರ್ಥಹಳ್ಳಿ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ತಹಶಿಲ್ದಾರ್ ಅವರು ರಜೆ […]
ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 25/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ಮಲ್ಲೇಶ್ ಬೀರಪ್ಪ ಪೂಜಾರ್ ಅವರು ಘೋಷಿಸಿದ್ದಾರೆ. News by: Raghu Shikari-7411515737