ಶಿಕಾರಿಪುರದಲ್ಲಿ ನೂತನ ಕನ್ನಡ ಸಾಹಿತ್ಯ ಭವನ ಉದ್ಘಾಟನೆ

ಶಿಕಾರಿಪುರ: “ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಗೀಳಿಗೆ ಅಂಟಿಕೊಳ್ಳುತ್ತಿರುವುದು ಆತಂಕಕಾರಿ. ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡುವ ಬದಲು ಪುಸ್ತಕಗಳನ್ನು ನೀಡಿ ಸಾಹಿತ್ಯಾಭಿರುಚಿ ಬೆಳೆಸಬೇಕು,” ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು. ಪಟ್ಟಣದ ಶಿಶು ವಿಹಾರ ರಸ್ತೆಯಲ್ಲಿ ಶನಿವಾರ ನೂತನವಾಗಿ ನಿರ್ಮಿಸಿರುವ ಕನ್ನಡ ಸಾಹಿತ್ಯ ಪರಿಷತ್ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿವಮೊಗ್ಗ ಜಿಲ್ಲೆಯು ರಾಷ್ಟ್ರಕವಿಗಳನ್ನು ನೀಡಿದ ಜ್ಞಾನಪೀಠದ ನಾಡು. ಈ ನೆಲದ ಸಾಹಿತ್ಯಿಕ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. […]
ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಏಕೈಕ ಗುರಿ: ಬಿ.ಎಸ್. ಯಡಿಯೂರಪ್ಪ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ 84ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ರಾಜಕೀಯ ಕರ್ಮಭೂಮಿ ಶಿಕಾರಿಪುರದಲ್ಲಿ ಅಭಿಮಾನದ ಹೊನಲು ಮೂಡಿತು ಸಾವಿರಾರು ಅಭಿಮಾನಿಗಳು, ಮಠಾಧೀಶರು ಹಾಗೂ ಗಣ್ಯರ ಸಮ್ಮುಖದಲ್ಲಿ ಹುಟ್ಟುಹಬ್ಬದ ಸಂಭ್ರಮ ಅದ್ದೂರಿಯಾಗಿ ನೆರವೇರಿತು. ಇಲ್ಲಿನ ಏಕಲವ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ಗೌರವ ಸಮರ್ಪಣಾ’ ಸಮಾವೇಶದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, “ನನ್ನ ರಾಜಕೀಯ ಜೀವನದ ಏಕೈಕ ಗುರಿ ಎಂದರೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು. ಇದಕ್ಕಾಗಿ ನಾನು ವಿಶ್ರಾಂತಿ ಪಡೆಯದೆ ರಾಜ್ಯದ ಮೂಲೆ ಮೂಲೆಗೂ […]
ಬೇಟೆಗಾರನನ್ನೇ ಬೆನ್ನಟ್ಟಿದ ದಿಂಡದಹಳ್ಳಿ ಶ್ವಾನಗಳು! ಹೊಂಡದಲ್ಲಿ ಸಿಲುಕಿದ ಚಿರತೆ ಕೊನೆಗೂ ಸೆರೆ

ಶಿಕಾರಿಪುರ: ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸೃಷ್ಟಿಯಾಗಿದ್ದ ಚಿರತೆ ಭೀತಿ ಈಗ ಹೊಸ ತಿರುವು ಪಡೆದುಕೊಂಡಿದೆ. ಗ್ರಾಮದ ಹೊಂಡವೊಂದರಲ್ಲಿ ಚಿರತೆ ಬಿದ್ದಿರುವುದು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಅದನ್ನು ಸೆರೆಹಿಡಿಯಲು ಮುಂದಾಗಿದೆ. ಶ್ವಾನಗಳ ಸಾಹಸ:ಸಾಮಾನ್ಯವಾಗಿ ಚಿರತೆ ಕಂಡರೆ ನಾಯಿಗಳು ಹೆದರುತ್ತವೆ. ಆದರೆ ಇಲ್ಲಿ ಉಲ್ಟಾ ನಡೆದಿದೆ! ನಿತ್ರಾಣಗೊಂಡಿದ್ದ ಚಿರತೆಯನ್ನು ಗ್ರಾಮದ ನಾಯಿಗಳೇ ಗುಂಪುಕಟ್ಟಿ ಬೆನ್ನಟ್ಟಿವೆ. ಈ ರೋಚಕ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಾಯಿಗಳಿಗೆ ಹೆದರಿ ಓಡುವಾಗ ಚಿರತೆಯು ಹತ್ತಿರದ ಸಣ್ಣ ಹೊಂಡಕ್ಕೆ ಬಿದ್ದಿದೆ. ಅರಣ್ಯ […]
ಬಿ.ಎಸ್.ವೈ ಜನ್ಮದಿನೋತ್ಸವ: ಶಿಕಾರಿಪುರದಲ್ಲಿ ಅರ್ಜುನ್ ಜನ್ಯ ತಂಡದಿಂದ ಸಂಗೀತ ಸುಧೆ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 84ನೇ ಜನ್ಮದಿನದ ಅಂಗವಾಗಿ ಫೆಬ್ರವರಿ 27 ರಂದು ಪಟ್ಟಣದ ಕುಮದ್ವತಿ ಕಾಲೇಜಿನ ಏಕಲವ್ಯ ಕ್ರೀಡಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಲಾಗಿದೆ. ಈ ಸಂಭ್ರಮಕ್ಕೆ ಮೆರುಗು ನೀಡಲು ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ತಂಡದವರಿಂದ ‘ಸಂಗೀತ ಸುಧೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ಅಭಿಮಾನಿಗಳ ಬಳಗದ ಸಂಚಾಲಕ ಕೆ.ಎಸ್. ಗುರುಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ‘ಸಮಾಜ ಗೌರವ ಸಮರ್ಪಣೆ’ ಕಾರ್ಯಕ್ರಮ […]
ವಿಶ್ವ ದಾಖಲೆಯ ಪುಟ ಸೇರಿದ ಶಿಕಾರಿಪುರದ ಚುರ್ಚಿಗುಂಡಿ ಮುರಾರ್ಜಿ ದೇಸಾಯಿ ವಸತಿ ಶಾಲೆ..!

ಶಿಕಾರಿಪುರ: ತಾಲ್ಲೂಕಿನ ಚುರ್ಚಿಗುಂಡಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯು ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. 2026ರ ಜನವರಿ 26ರಂದು ನಡೆದ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ಮಟ್ಟದ ‘ಸಮೂಹ ರಾಷ್ಟ್ರಗೀತೆ ಗಾಯನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಶಾಲೆಯ ವಿದ್ಯಾರ್ಥಿಗಳು ಪ್ರತಿಷ್ಠಿತ “Cyber Book of World Records” ನಲ್ಲಿ ಸ್ಥಾನ ಪಡೆದಿದ್ದಾರೆ. ಸಾಧನೆಯ ಹಾದಿ:ಗಣರಾಜ್ಯೋತ್ಸವದ ಪವಿತ್ರ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಏಕಕಂಠದಲ್ಲಿ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ರಾಷ್ಟ್ರಭಕ್ತಿಯನ್ನು ಮೆರೆದಿದ್ದಾರೆ. ಇವರ ಈ […]
ಮೊಬೈಲ್ ವ್ಯಾಮೋಹ ಬಿಡಿ, ನಾಟಕ ನೋಡಿ: ಶಿಕಾರಿಪುರದಲ್ಲಿ 3 ದಿನ ನಾಟಕೋತ್ಸವ

ಶಿಕಾರಿಪುರ: ಆಧುನಿಕತೆಯ ಅಬ್ಬರದಲ್ಲಿ ನಶಿಸಿಹೋಗುತ್ತಿರುವ ಸಾಂಸ್ಕೃತಿಕ ಹಾಗೂ ಜಾನಪದ ಕಲೆಗಳನ್ನು ಉಳಿಸಿ, ಯುವಜನತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಫೆಬ್ರವರಿ 24ರಿಂದ 26ರವರೆಗೆ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಮೂರು ದಿನಗಳ ಕಾಲ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಜಗಜ್ಯೋತಿ ಬಸವೇಶ್ವರ ಯುವ ಬಳಗದ ಅಧ್ಯಕ್ಷ ಪ್ರವೀಣ್ ದೂದಿಹಳ್ಳಿ ತಿಳಿಸಿದರು. ಪಟ್ಟಣದ ಸುದ್ದಿಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದಿನ ಯುವಜನತೆ ಮೊಬೈಲ್, ವಾಟ್ಸಾಪ್, ಇನ್ಸ್ಟಾಗ್ರಾಮ್ಗಳಂತಹ ಸಾಮಾಜಿಕ ಜಾಲತಾಣಗಳಿಗೆ ಮಾರುಹೋಗಿ ನಮ್ಮ ಪುರಾತನ ಕಲೆ, ನಾಟಕ ಮತ್ತು ಜಾನಪದ ಕ್ರೀಡೆಗಳಿಂದ ದೂರವಾಗುತ್ತಿದ್ದಾರೆ. […]
ಟಿಪ್ಪು-ಔರಂಗಜೇಬ್ ಮನಸ್ಥಿತಿಯವರಿಗೆ ತಕ್ಕ ಪಾಠ ಕಲಿಸಿ’: ಬಿ.ವೈ. ವಿಜಯೇಂದ್ರ ಆಕ್ರೋಶ

ಶಿಕಾರಿಪುರ:ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, “ದೇಶದೊಳಗೆ ದೇಶದ್ರೋಹಿ ಕೃತ್ಯ ಎಸಗುವವರಿಗೆ ಹಾಗೂ ಟಿಪ್ಪು-ಔರಂಗಜೇಬ್ ಮನಸ್ಥಿತಿ ಇರುವವರಿಗೆ ಸರ್ಕಾರ ತಕ್ಕ ಪಾಠ ಕಲಿಸಬೇಕು” ಎಂದು ಆಗ್ರಹಿಸಿದ್ದಾರೆ. ಶುಕ್ರವಾರ ಶಿಕಾರಿಪುರ ಪಟ್ಟಣದಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಘಟನೆಯು ವ್ಯವಸ್ಥಿತ ಸಂಚು ಎಂದು ಆರೋಪಿಸಿದರು. “ಶಾಂತಿಯುತವಾಗಿ ನಡೆಯುತ್ತಿದ್ದ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧ. ಇಂತಹ ಕಿಡಿಗೇಡಿಗಳನ್ನು ಈಗಾಗಲೇ […]
ಯುವಜನತೆ ಹತಾಶೆ ಬಿಟ್ಟು ಅವಕಾಶ ಸದುಪಯೋಗಪಡಿಸಿಕೊಳ್ಳಿ: ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ: “ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಪದವಿ ಪಡೆದು ಹೊರಬರುತ್ತಿದ್ದಾರೆ. ಉದ್ಯೋಗವಿಲ್ಲದೆ ಹತಾಶರಾಗಿರುವ ಯುವಶಕ್ತಿಗೆ ಆಸರೆ ನೀಡಿ, ರಾಷ್ಟ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ,” ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಕುಮದ್ವತಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಸಂಯುಕ್ತವಾಗಿ ಆಯೋಜಿಸಿದ್ದ ‘ಭವ್ಯ ಉದ್ಯೋಗ ಮೇಳ’ವನ್ನು […]
ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಫೆಬ್ರವರಿ 20 ಮತ್ತು 21ರಂದು ಪಟ್ಟಣದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮೂಡಬಿದಿರೆಯ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಆಶ್ರಯದಲ್ಲಿ ಈ ವಿಶೇಷ ಮೇಳ ಆಯೋಜಿಸಲಾಗಿದೆ. ಇದು ಯುವಜನತೆಗೆ ಉದ್ಯೋಗದ […]
ಈಸೂರು ದಂಗೆಯ ಕೊನೆಯ ಕೊಂಡಿ ಕಳಚಿತು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ. ದೇವೇಂದ್ರಪ್ಪ ಇನ್ನಿಲ್ಲ

ಶಿಕಾರಿಪುರ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಮೊದಲ ಬಾರಿಗೆ ‘ಸ್ವತಂತ್ರ ಹಳ್ಳಿ’ ಎಂದು ಘೋಷಿಸಿಕೊಂಡು ಇತಿಹಾಸ ಸೃಷ್ಟಿಸಿದ್ದ ಶಿವಮೊಗ್ಗ ಜಿಲ್ಲೆಯ ಈಸೂರು ದಂಗೆಯ ಸಾಕ್ಷಿಯಾಗಿದ್ದ ಕೊನೆಯ ಕೊಂಡಿ ಕಳಚಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಕೆ. ದೇವೇಂದ್ರಪ್ಪ (99) ಅವರು ಇಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿಕಾರಿಪುರ ತಾಲ್ಲೂಕಿನ ತಿಮ್ಲಾಪುರ ಗ್ರಾಮದ ನಿವಾಸಿಯಾಗಿದ್ದ ದೇವೇಂದ್ರಪ್ಪ ಅವರು, 1942ರ ‘ಕ್ವಿಟ್ ಇಂಡಿಯಾ’ ಚಳುವಳಿಯ ಸಂದರ್ಭದಲ್ಲಿ ನಡೆದ ಐತಿಹಾಸಿಕ ಈಸೂರು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ’ಏಸೂರು ಕೊಟ್ಟರೂ ಈಸೂರು […]