ಶಿರಾಳಕೊಪ್ಪದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ: ಶಿಕಾರಿಪುರದಲ್ಲಿ ಶೀಘ್ರದಲ್ಲಿ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರ : ಶಿರಾಳಕೊಪ್ಪ ಪಟ್ಟಣದಲ್ಲಿ ಇಂದು ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ಈಗಾಗಲೇ ಸೊರಬ ಆನವಟ್ಟಿ, ಶಿರಾಳಕೊಪ್ಪ ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದು. ಮುಂದಿನ ದಿನಗಳಲ್ಲಿ ಶಿಕಾರಿಪುರ ಪಟ್ಟಣದಲ್ಲಿ ಸಹ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲಿದ್ದೇವೆ ಎಂದರು. ದಿವಂಗತ ಶ್ರೀಮತಿ ಇಂದಿರಾ ಗಾಂಧಿ ಪ್ರಧಾನಿಯಾದ ಸಮಯದಲ್ಲಿ ಬಡವರ ಕಲ್ಯಾಣಕ್ಕಾಗಿ 20 ಅಂಶಗಳ ಕಾರ್ಯಕ್ರಮವನ್ನು ಅವರ ಹಮ್ಮಿಕೊಂಡಿದ್ದು. ಅದರಲ್ಲಿ ಹಸಿವು ಮುಕ್ತ ಭಾರತ ಕಾರ್ಯಕ್ರಮವು ಒಂದಾಗಿದೆ. ವಿರೋಧ ಪಕ್ಷದವರು ಇಷ್ಟು ದಿನ ನಾವು […]

ಮುಂಗಾರು ಪೂರ್ವ ಮಳೆಗೆ ಅಧಿಕಾರಿಗಳು ಮನಚ್ಚರಿಕೆ‌ ವಹಿಸಿ: ಸಂಸದ ಬಿವೈ ರಾಘವೇಂದ್ರ ಸೂಚನೆ

ಶಿಕಾರಿಪುರ: ತಾಲ್ಲೂಕಿನಲ್ಲಿ ಮುಂಗಾರು ಪೂರ್ವ ಮಳೆ ನಿರೀಕ್ಷೆಗಿಂತಲೂ ಹೆಚ್ಚಾಗಿದ್ದು ಯಾವುದೆ ಅನಾಹುತ ಆಗದಂತೆ ಈಗಲೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪಟ್ಟಣದಲ್ಲಿ ಗುರುವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಮುಂಗಾರು ಆರಂಭಕ್ಕೂ ಮುನ್ನವೆ ತಾಲ್ಲೂಕಿನ ಅಂಜನಾಪುರ, ಅಂಬ್ಲಿಗೊಳ್ಳ ನಾಲೆ ಸ್ವಚ್ಛಗೊಳಿಸುವ ಕೆಲಸಕ್ಕೆ ಆದ್ಯತೆ ನೀಡಬೇಕು, ಶಾಲೆ, ಹಾಸ್ಟೆಲ್ ಆರಂಭಗೊಂಡ ನಂತರ ಸ್ವಚ್ಚತೆ ಕೈಗೊಳ್ಳದೆ ಮಳೆಗಾಲಕ್ಕೂ ಮುನ್ನೆಚ್ಚರಿಕೆ ಸೇರಿ ಈಗಲೆ ಯಾವುದೆ ಸಣ್ಣ ಪುಟ್ಟ ಕೆಲಸ ಪೂರ್ಣಗೊಳಿಸಬೇಕು. ಆರೋಗ್ಯ ಕೇಂದ್ರದಲ್ಲೂ ಮಳೆಗಾಲಕ್ಕೆ ಅಗತ್ಯವಿರುವ ಔಷಧ […]

ಸಾರ್ವಜನಿಕರಿಗೆ ತೊಂದರೆ ಕೊಡದೆ ಜವಾಬ್ದಾರಿಯಿಂದ‌ ಕರ್ತವ್ಯ ನಿರ್ವಹಿಸಿ: ಶಾಸಕ ಬಿ ವೈ ವಿಜಯೇಂದ್ರ

ಶಿಕಾರಿಪುರ: ಪಟ್ಟಣದ ತಾಲೂಕ್ ಕಛೇರಿ ಸಭಾಂಗಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್‌ ವಿತರಿಸಿ ಶಾಸಕ ಬಿವೈ ವಿಜಯೇಂದ್ರ ಮಾತನಾಡಿದರು. ಸರ್ಕಾರ ಕಂದಾಯ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಗಮನಿಸಿ ತಂತ್ರಜ್ಞಾನ ಬಳಸಿಕೊಂಡು‌ ಜನರಿಗೆ ಹೆಚ್ಚು ಸೇವೆ‌ ಒದಗಿಸು ಅಧಿಕಾರಿಗಳಿಗೆ ಸಹಕಾರಿಯಾಗಲು ಲ್ಯಾಪ್ ಟಾಪ್ ನೀಡಲಾಗಿದೆ‌.ಶಿಕಾರಿಪುರ ತಾಲೂಕು ರಾಜ್ಯದಲ್ಲಿ ಅಭಿವೃದ್ಧಿ ಹೊಂದಿದ ತಾಲೂಕು ಎಂಬ ಹೆಗ್ಗಳಿಕೆಗೆ ಸಾಕ್ಷಿಯಾಗಿದೆ ಅಧಿಕಾರಿಗಳು ಜ‌ನರಿಗೆ ತೊಂದರೆ ಕೊಡದೆ ಪ್ರೀತಿ ವಿಶ್ವಾಸದಿಂದ ಕೆಲಸ ಮಾಡಬೇಕು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು‌. ಸಂಸದ ಬಿವೈ ರಾಘವೇಂದ್ರ […]

ಶಿಕಾರಿಪುರ ಸರ್ಕಾರಿ ವೈದ್ಯ ಲೋಕಯುಕ್ತ ಬಲೆಗೆ..!

ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ವೈದ್ಯರೊಬ್ಬರು ಲಂಚವನ್ನು ಸ್ವೀಕರಿಸುವ ವೇಳೆ ಲೋಕಯುಕ್ತ ಅಧಿಕಾರಿಗಳು‌ ದಾಳಿ ನಡೆಸಿ ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದ ಸುನೀಲ್ ಎಂಬಾತ ತಮ್ಮ ಸಂಬಂಧಿಕರೊಬ್ಬ ಮರಣೋತ್ತರ ವರದಿ ಪಡೆಯಲು ಅರ್ಜಿ ಸಲ್ಲಿಸಿದ್ದರು ವರದಿಯನ್ನು ನೀಡಲು ಡಾ.ಗೋಪಲ್ ಜಿ ಹರಗಿ‌ ಅವರು 20,000 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು 10,000 ಲಂಚದ ಹಣವನ್ನು ನೀಡುವ ವೇಳೆ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಟ್ರಾಪ್ ಕಾರ್ಯಾಚರಣೆಯಲ್ಲಿ ಲೋಕಯುಕ್ತ ಅಧೀಕ್ಷಕರಾದ ಮಂಜುನಾಥ ಚೌಧರಿ ಉಪ ಅಧೀಕ್ಷಕರಾದ […]

ಶಿಕಾರಿಪುರ ಪೋಲಿಸರ ಭರ್ಜರಿ ಕಾರ್ಯಚರಣೆ : 16 ಬೈಕ್ ಗಳ ವಶ..!

ಶಿಕಾರಿಪುರ ಪಟ್ಟಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೋಲಿಸರು 16 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳುವಾದ ಬೈಕ್ ಹಾಗೂ ಆರೋಪಿತರ ಪತ್ತೆಗಾಗಿ ಮಿಥುನ್ ಕುಮಾರ್ ಜಿ.‌ ಕೆ. ಐಪಿಎಸ್ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಅನಿಲ್ ಕುಮಾರ್ ಭೂಮರಡ್ಡಿ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 1, ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ. ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಕೇಶವ್* […]

ಹುಚ್ಚರಾಯಸ್ವಾಮಿ ಅದ್ದೂರಿ ಬ್ರಹ್ಮ‌ ರಥೋತ್ಸವ

ಶಿಕಾರಿಪುರ ಪಟ್ಟಣದ ಆರಾಧ್ಯದೈವ ಶ್ರೀ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವ ಶನುವಾರ ಅದ್ದೂರಿಯಾಗಿ ನೆರವೇರಿತು. ಹುಚ್ಚರಾಯಸ್ವಾಮಿ ದೇವರ ಉತ್ಸವಮೂರ್ತಿ ಪೂಜೆ ಸಲ್ಲಿಸಿ ಪಲ್ಲಕ್ಕಿ ಮೂಲಕ ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ರಥದ ಉತ್ಸವ ನಡೆಸಲಾಯಿತು‌. ರಥೋತ್ಸವದ ವೇಳೆ ಗರುಡ ದರ್ಶನ..! ಪ್ರತಿವರ್ಷ ಬ್ರಹ್ಮ ರಥೋತ್ಸವದ ವೇಳೆ ಆಕಾಶದಲ್ಲಿ ಗರುಡ ರಥದ ಸುತ್ತು ಹಾಕುತ್ತದೆ‌ ನಂತರ ರಥವನ್ನು ಎಳೆಯಲಾಗುತ್ತದೆ. ಮಾಜಿ‌ ಸಿಎಂ ಬಿಎಸ್ ವೈ ಭಾಗಿ:ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಹುಚ್ಚರಾಯಸ್ವಾಮಿಯ ಪರಮಭಕ್ತರಾಗಿದ್ದು ರಥೋತ್ಸವಕ್ಕೆ ತಪ್ಪದೆ ಆಗಮಿಸುತ್ತಾರೆ. ಮಕ್ಕಳಾದ ಸಂಸದ ಬಿವೈ […]

ಶಿರಾಳಕೊಪ್ಪ ಪುರಸಭೆ :ಎ ಮತ್ತು ಬಿ ಖಾತಾ ಪಡೆಯಲು ಅವಕಾಶ

ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪುರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಶಿರಾಳಕೊಪ್ಪ ಪುರಸಭೆ ಪ್ರಕಟಣೆಯಲ್ಲಿ ತಿಳಿಸಿದೆ. ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿAದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ […]

ಅಂಬ್ಲಿಗೊಳ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡು (ಪೆಲೆಟ್ಸ್) ಹೊಡೆದ ಗಾಯವೂ ಇರುವುದಾಗಿ ಮಾಧ್ಯಮಗಳಲ್ಲಿ ಸಚಿತ್ರ […]

ವಿದ್ಯುತ್ ಮಾರ್ಗಗಳ ನಿರ್ಮಾಣದಲ್ಲಿ ರೈತರ ಹಿತ ಕಾಯಲು ಸೂಚನೆ – ಮಧು ಬಂಗಾರಪ್ಪ

ಶಿವಮೊಗ್ಗ : ಜಿಲ್ಲೆಯಲ್ಲಿ ಈಗಾಗಲೇ ಮಂಜೂರಾಗಿ ಕಾಮಗಾರಿ ಕೈಗೆತ್ತಿಕೊಂಡಿರುವ ಜಡೆ-ಬನವಾಸಿ ಮತ್ತು ಈಸೂರು-ಅಂಜನಾಪುರ 110ಕೆ.ವಿ. ವಿದ್ಯುತ್ಪ್ರಸರಣಾ ಮಾರ್ಗದಲ್ಲಿ ಬರುವ ರೈತರೊಂದಿಗೆ ಸಂಬಂಧಿಸಿದ ಮೆಸ್ಕಾಂ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಶೀಘ್ರ ಸಮಾಲೋಚನೆ ನಡೆಸಿ, ರೈತರಿಗೆ ಅನುಕೂಲವಾಗುವ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಇಂದು ನಗರದ ಲೋಕೋಪಯೋಗಿ ಭವನದಲ್ಲಿ ವಿವಿಧ ಇಲಾಖೆಗಳ ಹಲವು ಯೋಜನೆಗಳ ಪ್ರಗತಿ ಪರಿಶೀಲನೆ ಸರಣಿ ಸಭೆಗಳ ಅಧ್ಯಕ್ಷತೆ […]

ವ್ಯಾಲೆಂಟೈನ್ ಡೇ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಯಿರಿ – ಹಿಂದೂ ಜನಜಾಗೃತಿ ಸಮಿತಿ

ಶಿಕಾರಿಪುರ: ಫೆ14 ರ ವ್ಯಾಲೆಂಟೈನ್ ಡೇ ಯಂದು ನಡೆಯುವ ಅನಾಚಾರಗಳನ್ನು ತಡೆಯುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳವಾರ ಶಿಕಾರಿಪುರದ ತಾಲೂಕು ಕಚೇರಿ, ಡಿವೈಎಸ್ಪಿ ಕಚೇರಿ, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದರು. ಕಳೆದ ಕೆಲವು ವರ್ಷಗಳಿಂದ 14 ಫೆಬ್ರವರಿಯನ್ನು ವ್ಯಾಲೆಂಟೈನ್ ಡೇ ಎಂದು ಆಚರಿಸುವ ಪಾಶ್ಚಾತ್ಯರ ದುಷ್ಟ ಪ್ರವೃತ್ತಿಯು ಭಾರತದಲ್ಲಿಯೂ ವ್ಯಾಪಕವಾಗಿ ಪಸರಿಸಿದೆ ಪಾಶ್ಚಾತ್ಯರ ವ್ಯಾಪಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯ ಪ್ರಚಾರದಿಂದ ಯುವ ಪೀಳಿಗೆ ಭೋಗವಾದ ಮತ್ತು ಅನೈತಿಕತೆಯಲ್ಲಿ […]