ತೀರ್ಥಹಳ್ಳಿ: ಕಾಡುಕೋಣ ದಾಳಿ ಭತ್ತದ ಸಸಿಗಳು ನಾಶ..!

ಶಿವಮೊಗ್ಗ: ಮಲೆನಾಡಿನಲ್ಲಿ ಮುಂದುವರಿದ ಕಾಡು ಪ್ರಾಣಿಗಳ ಹಾವಳಿಯಿಂದ ಸಾರ್ವಜನಿಕರು ಬೆಸತ್ತು ಹೊಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಮ್ಮರಡಿ ಬಳಿ ಕೆಸಲೂರ ಹಡ್ಸೆ ಗ್ರಾಮದ ಕೃಷ್ಣಪ್ಪ ಹೆಚ್ ಸಿ ಮತ್ತು ಸುಂದೇಶ್ ಹೆಚ್ ಡಿ ಎಂಬುವರರು ಗದ್ದೆಯಲ್ಲಿ ಭತ್ತದ ಸಸಿಗಳನ್ನು ಕಾಡುಕೋಣಗಳು ನಾಶ ಪಡಿಸಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಮಲೆನಾಡಿನ ಅನೇಕ ಭಾಗಗಳಲ್ಲಿ ಈಗಾಗಲೇ ಜನಾಕ್ರೋಶ ಹೆಚ್ಚಿಗೆಯಾಗಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಹೋರಾಟ ನಡೆಸುತ್ತಿದೆ ಈ ಕುರಿತು ಅರಣ್ಯ ಅಧಕಾರಿಗಳು ಗಮನ ನೀಡಬೇಕಾಗಿದೆ. News by: Raghu Shikari-7411515737
ಶಿಕಾರಿಪುರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 26/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅತಿಯಾದ ಮಳೆಯಿಂದ ಶೀತ ವಾತಾವರಣ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. ಇನ್ನೂ ಶಿವಮೊಗ್ಗ ತಾಲೂಕು, ಸಾಗರ, ಸೊರಬ, ಹೊಸನಗರ, ಭದ್ರಾವತಿ ತೀರ್ಥಹಳ್ಳಿ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ತಹಶಿಲ್ದಾರ್ ಅವರು ರಜೆ […]
ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]
ಕ್ರೀಡಾಶಾಲೆ-ಕ್ರೀಡಾ ನಿಲಯಗಳಿಗೆ ಆಯ್ಕೆ

ಶಿವಮೊಗ್ಗ,07 ( ಕರ್ನಾಟಕ ವಾರ್ತೆ) ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಕ್ರೀಡಾಶಾಲೆ / ಕ್ರೀಡಾನಿಲಯಗಳ ಪ್ರವೇಶಕ್ಕೆ ವಿವಿಧ ಮಟ್ಟದಲ್ಲಿ ಆಯ್ಕೆ ನಡೆಸಲಾಗುವುದು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಮಾಡಲಾಗುವುದು. ದಿ: 20-01-2025 ರಂದು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು, ತೀರ್ಥಹಳ್ಳಿ. ದಿ: 21-01-2025 ಸಾಗರ ತಾಲ್ಲೂಕಿನಲ್ಲಿ ಸಾಗರ ತಾಲ್ಲೂಕು ಕ್ರೀಡಾಂಗಣ. ದಿ: 23-01-2025 ಹೊಸನಗರ ತಾಲ್ಲೂಕಿನಲ್ಲಿ ಹೊಸನಗರ ತಾಲ್ಲೂಕು ಕ್ರೀಡಾಂಗಣ. ದಿ: 24-01-2025 ಸೊರಬ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು […]
ತೀರ್ಥಹಳ್ಳಿ : ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ, ಜನವರಿ 15, (ಕರ್ನಾಟಕ ವಾರ್ತೆ) : ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜ. 20 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬAಧ ಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;9448289508.
ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]