ವೇತನ ಬಡ್ತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ‘ಟ್ರಾಪ್’ನಲ್ಲಿ ಸಿಲುಕಿದ ಭದ್ರಾವತಿ ಶಿಕ್ಷಣಾಧಿಕಾರಿ!

ಶಿವಮೊಗ್ಗ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಮ್ಮದೇ ಕಚೇರಿಯ ಸಿಬ್ಬಂದಿಯ ವೇತನ ಬಡ್ತಿ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟು, ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ:ಭದ್ರಾವತಿ ಬಿ.ಇ.ಒ ಕಚೇರಿಯಲ್ಲಿ ಅಧೀಕ್ಷಕರಾಗಿರುವ ಲಿಂಗರಾಜು ಅವರು 2011 ರಿಂದ 2023 ರವರೆಗಿನ ತಮ್ಮ ವಾರ್ಷಿಕ ವೇತನ ಬಡ್ತಿ ಮತ್ತು ಬಾಕಿ ಇರುವ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ಕೋರಿದ್ದರು. ಈ ಕೆಲಸಕ್ಕಾಗಿ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಎ.ಕೆ. ಹಾಗೂ ಮಧ್ಯವರ್ತಿ ಮಂಜುನಾಥ್ ಎಂಬುವವರು 4 ಲಕ್ಷ […]
ಆಕಾಶವಾಣಿಗೆ ಎಫ್.ಎಂ ಸಂಜೀವಿನಿ; 8 ಜಿಲ್ಲೆಗಳಿಗೆ ಪ್ರಸಾರ ವ್ಯಾಪ್ತಿ ವಿಸ್ತರಣೆ:ಸಚಿವ ಮುರಗನ್

ಶಿವಮೊಗ್ಗ ರೇಡಿಯೋ ಇಂದಿಗೂ ಅತ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು, ಭದ್ರಾವತಿ ಆಕಾಶವಾಣಿಗೆ ಹೈ-ಟೆಕ್ ಎಫ್.ಎಂ ಪ್ರೇಷಕ ಅಳವಡಿಸುವ ಮೂಲಕ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆ ಇಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ತಿಳಿಸಿದರು. ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಭದ್ರಾವತಿ ಆಕಾಶವಾಣಿಯ ನೂತನ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋಟಿ ಜನರಿಗೆ ಶ್ರವಣಾನಂದ ಭದ್ರಾವತಿ […]
ರೈಲ್ವೆ ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ: ಭದ್ರಾವತಿ ಪೊಲೀಸರ ಸಮಯಪ್ರಜ್ಞೆ

ಭದ್ರಾವತಿ: ಪ್ರೇಮ ವೈಫಲ್ಯದಿಂದ ಮನನೊಂದು ರೈಲ್ವೆ ಹಳಿ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 18 ವರ್ಷದ ಯುವಕನನ್ನು ಭದ್ರಾವತಿ ನ್ಯೂ ಟೌನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.ಭಾನುವಾರ ತಡರಾತ್ರಿ ನಗರದ ‘ಹುತ್ತ’ ರೈಲ್ವೆ ಟ್ರ್ಯಾಕ್ ಬಳಿ ಈ ಘಟನೆ ನಡೆದಿದೆ. ಘಟನೆಯ ವಿವರ:ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ರೈಲ್ವೆ ಹಳಿ ಮೇಲೆ ಮಲಗಿರುವ ಬಗ್ಗೆ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ನ್ಯೂ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ […]
ಶಿಕಾರಿಪುರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 26/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅತಿಯಾದ ಮಳೆಯಿಂದ ಶೀತ ವಾತಾವರಣ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. ಇನ್ನೂ ಶಿವಮೊಗ್ಗ ತಾಲೂಕು, ಸಾಗರ, ಸೊರಬ, ಹೊಸನಗರ, ಭದ್ರಾವತಿ ತೀರ್ಥಹಳ್ಳಿ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ತಹಶಿಲ್ದಾರ್ ಅವರು ರಜೆ […]
FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ

ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]
ಕ್ರೀಡಾಶಾಲೆ-ಕ್ರೀಡಾ ನಿಲಯಗಳಿಗೆ ಆಯ್ಕೆ

ಶಿವಮೊಗ್ಗ,07 ( ಕರ್ನಾಟಕ ವಾರ್ತೆ) ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಕ್ರೀಡಾಶಾಲೆ / ಕ್ರೀಡಾನಿಲಯಗಳ ಪ್ರವೇಶಕ್ಕೆ ವಿವಿಧ ಮಟ್ಟದಲ್ಲಿ ಆಯ್ಕೆ ನಡೆಸಲಾಗುವುದು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಮಾಡಲಾಗುವುದು. ದಿ: 20-01-2025 ರಂದು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು, ತೀರ್ಥಹಳ್ಳಿ. ದಿ: 21-01-2025 ಸಾಗರ ತಾಲ್ಲೂಕಿನಲ್ಲಿ ಸಾಗರ ತಾಲ್ಲೂಕು ಕ್ರೀಡಾಂಗಣ. ದಿ: 23-01-2025 ಹೊಸನಗರ ತಾಲ್ಲೂಕಿನಲ್ಲಿ ಹೊಸನಗರ ತಾಲ್ಲೂಕು ಕ್ರೀಡಾಂಗಣ. ದಿ: 24-01-2025 ಸೊರಬ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು […]
ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ

ಶಿವಮೊಗ್ಗ, ಜ.17 ( ಕರ್ನಾಟಕ ವಾರ್ತೆ): ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಜ.22 ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ನ ಬಸವಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವ ಏರ್ಪಡಿಸಲಾಗಿದೆ.ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಅಗ್ರಾಸನ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ರವರ ಉಪಸ್ಥಿತಿಯಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ […]
ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]