ದಾವಣಗೆರೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.ಶಾಮನೂರು ಶಿವಶಂಕರಪ್ಪ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದರು.
ಜ.19 ರಂದು ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

ದಾವಣಗೆರೆ,ಜನವರಿ.16 (ಕರ್ನಾಟಕ ವಾರ್ತೆ): ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳ ಆಯ್ಕೆಗೆ ಸ್ಪರ್ಧಾತ್ಮಕ ಪರೀಕ್ಷೆಯು ಜನವರಿ 19 ಮತ್ತು 25 ರಂದು ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನವರಿ 19 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ 1 ರ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 6 ಕೇಂದ್ರಗಳಲ್ಲಿ 3422 […]