ವೈದ್ಯಕೀಯ ಮತ್ತು ಅರೆ ವೈದ್ಯಕೀಯ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಎನ್ಪಿಪಿಸಿಡಿ ವಿಭಾಗದಲ್ಲಿ ಇಎನ್ಟಿ ಸರ್ಜನ್ನ 1 ಹುದ್ದೆ ಖಾಲಿ ಇದ್ದು, ಎಂಎಸ್ ಇಎನ್ಟಿ/ಡಿಪ್ಲೊಮಾ ಎನ್ ಇಎನ್ಟಿ ವಿದ್ಯಾರ್ಹತೆ ಹೊಂದಿರಬೇಕು. ಎಂಹೆಚ್ ಐಸಿಯು-ಹೆಚ್ಡಿಯು ವಿಭಾಗದಲ್ಲಿ ಅರವಳಿಕೆ ತಜ್ಞರ 1 ಹುದ್ದೆ ಖಾಲೆ ಇದ್ದು, ಡಿಎ/ಡಿಎನ್ಬಿ/ಹೆಚ್ಡಿಯು […]
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಜಿ.ಪರಮೇಶ್ವರ

ಬಾಗಲಕೋಟೆ:, ಪಿಎಸ್ಐ ಹಗರಣ ನಂತರಐದು ವರ್ಷಗಳಿಂದ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಈಗ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಬಾಗಲಕೋಟೆ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಯಾವುದೇ ನೇಮಕಾತಿಗಳು ಆಗಿಲ್ಲ. ಒಂದು ಸಾವಿರ ಪಿಎಸ್ ಹುದ್ದೆಗಳು ಖಾಲಿ ಇದ್ದು ಈಗಾಗಲೇ 500 ಜನರ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು ಕೆಲವರು ತರಬೇತಿಯಲ್ಲಿ ದ್ದಾರೆ. ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ […]
ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗೆ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಜೂನ್ 19 ರಿಂದ 25 ರವರೆಗೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯ ತನಕ ಮಾತ್ರ ವಿತರಿಸಲಾಗುವುದು. […]
ತುರ್ತು ಚಿಕಿತ್ಸಾ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಅಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ವೈದ್ಯರುಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ […]
ಪೋಲೀಸ್ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಇಲ್ಲಿದೆ ಮಾಹಿತಿ..!

ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಪೇದೆಗಳಿಂದ ಡಿವೈಎಸ್ಪಿ ಹುದ್ದೆವರೆಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇಖಡ 2 ರಿಂದ ಶೇಖಡ 3 ಕ್ಕೆ ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕ ಸೇವಾ ಆಯೋಗ ತಿದ್ದುಪಡಿ ನಿಯಮಗಳು 2024 ರ ಕರಡನ್ನು ಸಂವಿಧಾನದ ಅನುಚ್ಛೇದ 318ರ ಅನ್ವಯ ರಾಜ್ಯಪಾಲರ ಅನುಮೋದನೆ ಪಡೆದು ರಾಜ್ಯಪತ್ರದಲ್ಲಿ ಪ್ರಕಟಿಸಿ, ಸಲಹೆಗಳನ್ನು ಆಹ್ವಾನಿಸಲು ಸಚಿವ ಸಂಪುಟ ನಿರ್ಧರಿಸಿದೆ. ಕರಡು ನಿಯಮಗಳಲ್ಲಿ ಯಾವುದೇ […]
ಯುವನಿಧಿ ನೋಂದಣಿ ಅಭಿಯಾನ

ಶಿಕಾರಿಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಜ.20ವರೆಗೆ ಕಾಲೇಜಿನಲ್ಲಿ ಸಹಾಯಕೇಂದ್ರ ಸ್ಥಾಪಿಸಲಾಗಿದೆ. ಯುವನಿಧಿ ಅರ್ಜಿ ಸಲ್ಲಿಸುವ ಯುವಕ/ಯುವತಿಯರು 2022, 2023 ಹಾಗೂ 2024ರಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸಿರಬಾರದು ಎಂಬ ನಿಬಂಧನೆಗಳಿವೆ. ಅರ್ಹ ಯುವಕ/ಯುವತಿಯರು ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಸ್ಥಳೀಯ ಸೈಬರ್ ಕೇಂದ್ರಗಳು, ಸೇವಾಸಿಂಧು ಪೋರ್ಟಲ್ […]
ಕೆಪಿಎಸಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ:ಕೆಎಎಸ್ ಪರೀಕ್ಷೆ ಕುರಿತು ಸರ್ಕಾರ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಸಭೆ..!

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಆಡಳಿತ ಸೇವೆ (KAS) 384 ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಯಡವಟ್ಟು ಆಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ ಅವರು ಆದ ಸಮಸ್ಯೆಗಳು ಪರಿಶೀಲಿಸಬೇಕು. ಚರ್ಚಿಸಲು ಸಭೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.ನಾಳೆ ಶನಿವಾರ ಜನವರಿ 18ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಮಹತ್ವ ಸಭೆ ನಡೆಯಲಿದೆ. ಸಭೆ ಬಳಿಕ ಮಹತ್ವ […]