ಬಡವರಿಗೆ ಮನೆ ವಿತರಣೆಯಲ್ಲೂ ಭ್ರಷ್ಟಾಚಾರ: ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ:ಬಿವೈ ವಿಜಯೇಂದ್ರ

ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರ ಮಾಹಿತಿ ನೀಡಲು ಸಿಎಂಗೆ ವಿಜಯೇಂದ್ರ ಆಗ್ರಹ
Facebook
Twitter
LinkedIn
WhatsApp

ಬೆಂಗಳೂರು:ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಬಿ.ಆರ್.ಪಾಟೀಲ್ ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚಲ್ಲಿದ್ದಾರೆ.ಬಡವರಿಗೆ ಮನೆಗಳನ್ನು ಕೊಡಬೇಕಿತ್ತು ಅಲ್ಲಿಯೂ ಸಹ ಭ್ರಷ್ಟಾಚಾರ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ .

ಹಿರಿಯ ನಾಯಕರಾದ ಬಿ.ಆರ್ ಪಾಟೀಲ್ ರವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರಿಗೆ ರೈತರಿಗೆ ಶಾಪವಾಗಿ ಪರಿಣಮಿಸಿದೆ.

ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ.ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರಪರ ಯೋಜನೆ ನೀಡಿದ್ರು ಎಲ್ಲಾ ಯೋಜನೆ ಮರೆತಿದ್ದಾರೆ ಭ್ರಷ್ಟಾಚಾರ ಭ್ರಷ್ಟಾಚಾರ ಭ್ರಷ್ಟಾಚಾರ ಬಿಟ್ರೆ ಈ ಸರ್ಕಾರದಲ್ಲಿ ಯಾವುದೇ ಯೋಜನೆ ಇಲ್ಲ .

ಎಲ್ಲೊ ಒಂದು ಕಡೆ ಸ್ಟೇಟ್ ಸ್ಪಾನ್ಸರ್ ಕರೆಪ್ಷನ್ ರಾಜ್ಯ ಸರ್ಕಾರವೇ ಭ್ರಷ್ಟಾಚಾರಕ್ಕೆ ಉತ್ತೇಜನ ನೀಡುತ್ತಿದೆ. ಈ ಎಲ್ಲಾವನ್ನ ಬಿ.ಆರ್ ಪಾಟೀಲ್ ಹೇಳಿಕೆಯಿಂದ ಗೊತ್ತಾಗುತ್ತಿದೆ.ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

News By: Raghu Shikari-7411515737