ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಎನ್ ಎಸ್’ಯುಐ ಮನವಿ

ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಎನ್ ಎಸ್’ಯುಐ ಮನವಿ
Facebook
Twitter
LinkedIn
WhatsApp

ಪಟ್ಟಣದ ಬಿಇಓ ಕಚೇರಿಯದರು ತಾಲೂಕು ಎನ್ ಎಸ್ ಯು ಐ ಹಾಗೂ ದಲಿತ ಸಂಘರ್ಷ ಸಮಿತಿ ವಿವಿಧ ಸಂಘ ಸಂಸ್ಥೆಗಳ ಸಹಾಯಕದೊಂದಿಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಬೇಕು ಎಂದು ಆದೇಶವಿದ್ದರೂ ಕೆಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಿಸುತ್ತಿಲ್ಲ ಈ ವಿಷಯ ತಮ್ಮ ಗಮನಕ್ಕೆ ಬಂದಿದೆ ಕೂಡಲೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಕಡ್ಡಾಯವಾಗಿ ಎಲ್ಲಾ ಶಾಲೆಗಳಲ್ಲೂ ಸಂವಿಧಾನ ಪೀಠಿಕೆಯನ್ನು ಓದಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಭಂಡಾರಿ ಮಾಲತೇಶ್, ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್, ಡಿಎಸ್ಎಸ್ ಸಂಚಾಲಕ ಜಗದೀಶ್ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷರಾದ ಚರಣ್ ರಾಜ್, ಎನ್ ಎಸ್ ಯು ಐ ಅಧ್ಯಕ್ಷ ಸೈಯದ್ ಹುಸೇನ್ ಸುನಿಲ್,ಅನಿಲ್, ಬಸವರಾಜ್,ಚಂದ್ರು ಇದ್ದರು.

News By: Raghu Shikari-7411515737