ಕೆಎಸ್ಆರ್ ಟಿಸಿ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರ ಸ್ಥಿತಿ ಗಂಭೀರ…!

ಕೆಎಸ್ಆರ್ ಟಿಸಿ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರ ಸ್ಥಿತಿ ಗಂಭೀರ…!
Facebook
Twitter
LinkedIn
WhatsApp

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿದ್ದು ಪೊಲೀಸರು ಸಂಚಾರ ತೆರವುಗೊಳಿಸುವಲ್ಲಿ ಕಾರ್ಯನಿರತರಾಗಿದ್ದಾರೆ.ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿದ್ದಾರೆ.