ಇತ್ತೀಚಿನ ದಿನಗಳಲ್ಲಿ ಆರೋಗ್ಯವಾಗಿರಲು ನಾನಾ ರೀತಿಯ ಕಸರತ್ತುಗಳು ನಡೆಯುತ್ತಲೇ ಇರುತ್ತದೆ. ಅದರಲ್ಲಿಯೂ ಹೃದ್ರೋಗದ ಅಪಾಯ ಕಡಿಮೆ ಮಾಡಿ ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಳ್ಳುವುದು ಸುಲಭದ ಮಾತಲ್ಲ. ಏಕೆಂದರೆ ನಾವು ಆರೋಗ್ಯವಾಗಿರಲು ನಮ್ಮ ಆಹಾರ ಪದ್ಧತಿ ಸರಿಯಾಗಿ ಇರಬೇಕು. ಅದಲ್ಲದೆ ಈಗ ಚಳಿಗಾಲವಾದ್ದರಿಂದ ಹಲವಾರು ರೀತಿಯ ಆರೋಗ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಅದಕ್ಕೆಲ್ಲಾ ಪರಿಹಾರವೆಂದರೆ ನಾವು ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಮಾಡಬೇಕು ಅದರಲ್ಲಿಯೂ ಹಸಿರು ತರಕಾರಿಗಳ ಸೇವನೆ ನಮ್ಮ ಹೃದಯದ ಆರೋಗ್ಯವನ್ನು ಚೆನ್ನಾಗಿಡುವುದರ ಜೊತೆಗೆ ಹೃದ್ರೋಗದ ಅಪಾಯವೂ ಕಡಿಮೆ ಮಾಡುತ್ತದೆ. ಹಾಗಾದರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ. ಈ ಸೊಪ್ಪಿನಲ್ಲಿ ಪೋಷಕಾಂಶಗಳು ಸಮೃದ್ಧವಾಗಿದ್ದು ಇದನ್ನು ಚಳಿಗಾಲದಲ್ಲಿ ತಪ್ಪದೆ ತಿನ್ನಬೇಕು ಎಂದು ತಜ್ಞರು ಹೇಳುತ್ತಾರೆ. ಅದಲ್ಲದೆ ಇವುಗಳಲ್ಲಿ ಹಲವಾರು ಬಗೆಯ ವಿಟಮಿನ್ ಗಳು ಹಾಗೂ ಖನಿಜಾಂಶಗಳಿದ್ದು, ಇವುಗಳು ದೇಹದ ಕ್ರಿಯೆಯು ಸರಿಯಾಗಿ ನಡೆಯಲು ಸಹಕಾರಿಯಾಗುತ್ತದೆ. ಈ ಸೊಪ್ಪುಗಳಲ್ಲಿ ಕಬ್ಬಿಣಾಂಶವಿದ್ದು ಬಳಲಿಕೆ ಕಡಿಮೆ ಮಾಡುತ್ತದೆ. ಎಲ್ಲಕಿಂತ ಮುಖ್ಯವಾಗಿ ಇದು ನಿಮ್ಮ ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಪಾಲಕ, ಬಸಳೆ ಇತ್ಯಾದಿ ಹಸಿರೆಲೆ ತರಕಾರಿಗಳನ್ನು ಸೇವನೆ ಮಾಡಿ. ಇವುಗಳಿಂದ ತಯಾರಾಗುವ ಜ್ಯೂಸ್ ಗಳು ಕೂಡ ದೇಹಕ್ಕೆ ಒಳ್ಳೆಯದು. ಆವಕಾಡೊ ಈ ಹಣ್ಣು ಅತ್ಯಧಿಕ ಪೋಷಕಾಂಶಗಳನ್ನು ಹೊಂದಿದ್ದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ. ಅದಕ್ಕಾಗಿಯೇ ಈ ಹಣ್ಣು ಅಮೃತಕ್ಕೆ ಸಮ ಎನ್ನಲಾಗುತ್ತದೆ. ದೈನಂದಿನ ಆಹಾರದಲ್ಲಿ ಒಂದು ಆವಕಾಡೊವನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ, ಹೃದಯದ ಆರೋಗ್ಯವನ್ನು ಹೆಚ್ಚಿಸಿಕೊಳ್ಳುವುದರಿಂದ ಹಿಡಿದು ಚರ್ಮಕ್ಕೆ ಕಾಂತಿ ನೀಡುವ ವರೆಗೆ ವ್ಯಾಪಕವಾದ ಪ್ರಯೋಜನಗಳನ್ನು ನೀಡುತ್ತದೆ.