ಪ್ರತಿಷ್ಠಿತ ಶಾಲೆಯೊಂದರ ವಾಹನದಿಂದ ಕುಮದ್ವತಿ‌ ನದಿಗೆ ಕಸದ ರಾಶಿ…!

ಪ್ರತಿಷ್ಠಿತ ಶಾಲೆಯೊಂದರ ವಾಹನದಿಂದ ಕುಮದ್ವತಿ‌ ನದಿಗೆ ಕಸದ ರಾಶಿ…!
Facebook
Twitter
LinkedIn
WhatsApp

ಶಿಕಾರಿಪುರ ಪಟ್ಟಣದ ಜೀವನದಿ ಕುಮದ್ವತಿ ನದಿಗೆ ಅನೇಕರು ಕಸವನ್ನು ಎಸೆಯುತ್ತಿರುವ ಘಟನೆ ನಡೆಯುತ್ತಿದೆ ಆದರೆ ಜನರಿಗೆ ಜಾಗೃತಿ ಮೂಡಿಸುವ ಶಿಕ್ಷಣ ಸಂಸ್ಥೆಯೊಂದರಿಂದಲೇ ಕಸವನ್ನು ನದಿಗೆ ಹಾಕು ಘಟನೆ ನಡೆದಿರುವುದು ಖಂಡನೀಯವಾಗಿದೆ.

ಶಿಕಾರಿಪುರ ಪಟ್ಟಣದ ಹೊರವಲಯದಲ್ಲಿ ಇರುವ ಕುಮದ್ವತಿ ಸೇತುವೆ ಬಳಿ ಶ್ರೀ ಕೊಟ್ಟರೇಶ್ವರ ವಿದ್ಯಾಸಂಸ್ಥೆಯ ವಾಹನದಿಂದ ಬಂದು ಸಿಬ್ಬಂದಿಗಳು ಚೀಲಗಟ್ಟಲೇ ಕಸವನ್ನು ನದಿಗೆ ಎಸೆಯುತ್ತಿರುವ ದೃಶ್ಯ ಕಂಡುಬಂದಿದೆ‌.

ನದಿಗಳ ಬಗ್ಗೆ ಕಸದ ವಿಲೇವಾರಿ ಬಗ್ಗೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ವಿದ್ಯಾಸಂಸ್ಥೆಯಿಂದ ಈ‌ ರೀತಿಯ ಘಟನೆ ನಡೆಯುತ್ತಿರುವುದು ಸಾರ್ವಜನಿಕರು ಆಕ್ರೋಷಕ್ಕೆ ಕಾರಣವಾಗಿದೆ‌.

ಈ‌ ಕುರಿತು ಪುರಸಭೆ ಅಧಿಕಾರಿಗಳು ಸಂಸ್ಥೆಯ ವಿರುದ್ಧ ಯಾವ ಕ್ರಮ ಕೈಗೊಳ್ಳಲಿದ್ದಾರೆ ಕಾದುಕೊಡಬೇಕಾಗಿದೆ.