ಶಿಕಾರಿಪುರ : ಲೋಕಸಭಾ ವ್ಯಾಪ್ತಿಯ ಎಲ್ಲಾ ತಾಲೂಕ್ ಕೇಂದ್ರಗಳೂ ಆಕ್ಸಿಜನ್ ಉತ್ಪಾದನಾ ಪ್ಲಾಟ್ ಸ್ಥಾಪನೆ: ಸಂಸದ ಬಿ.ವೈ ರಾಘವೇಂದ್ರ…!
ಶಿಕಾರಿಪುರ :ಕರೋನ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತಿ ತಾಲೂಕಿಗೆ ಆಕ್ಸಿಜನ್ ಜನರೇಟರ್ ಪ್ಲಾಟ್ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದರು.
ಶಿಕಾರಿಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರರವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಜನರೇಟರ್ ಪ್ಲಾಂಟ್ ಇನ್ನು ಎರಡು ದಿನದಲ್ಲಿ 100LMP (ಪ್ರತಿ ಒಂದು ನಿಮಿಷಕ್ಕೆ ಒಂದು ಲೀಟರ್ ಆಕ್ಸಿಜನ್ ) ಸ್ಥಾಪನೆ ಆಗಲಿದೆ.
ಪ್ರತಿ ತಾಲೂಕಿನಲ್ಲಿ ಕರೋನಾ ರೋಗಿಗಳಿಗೆ ಚಿಕಿತ್ಸೆಗಾಗಿ50 ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು.
ಶಿವಮೊಗ್ಗದ ಮೆಡಿಕಲ್ ಕಾಲೇಜಿನಲ್ಲಿ 3000 LMP ಆಕ್ಸಿಜನ್ ಪ್ಲಾಂಟ್ ಪ್ರಾರಂಭಿಸಲು ಅಧಿಕಾರಿಗಳ ಜೊತೆ ಮಾತನಾಡಿರುತ್ತೇನೆ ಈ ಕುರಿತು ಮುಖ್ಯಮಂತ್ರಿ ಸಚಿವರ ಜೊತೆ ಸಂಪರ್ಕದಲ್ಲಿ ಇದ್ದೇನೆ ಎಂದರು.
ಶಿಕಾರಿಪುರ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದ್ದು ಒಂದು ತಿಂಗಳಿನಲ್ಲಿ ಕಾಮಗಾರಿ ಮುಕ್ತಾಯವಾಗಲಿದೆ.
ಮನೆಮನೆಗೂ ಸಂಪರ್ಕ ಕೊಡುವ ಒಳಚರಂಡಿ ವ್ಯವಸ್ಥೆಯು ಮಳೆಗಾಲ ಮುಗಿಯುವ ಒಳಗೆ ಮುಕ್ತಾಯವಾಗಲಿದೆ.
ಮುಖ್ಯಮಂತ್ರಿಗಳು ಆಶಯದಂತೆ ಶಿಕಾರಿಪುರ ಪಟ್ಟಣವನ್ನು ಎಲ್ಲಾ ರೀತಿಯಲ್ಲಿ ಅಭಿವೃದ್ಧಿಗೊಳಿಸಲು ಮಾದರಿ ನಗರವನ್ನಾಗಿ ಮಾಡಲು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಶಿಕಾರಿಪುರ ಪುರಸಭೆಯ ಅಧ್ಯಕ್ಷರಾದ ಲಕ್ಷ್ಮಿ ಮಹಾಲಿಂಗಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಸ್ವಾಮಿ, ಸದಸ್ಯರಾದ ಪಾಲಕ್ಷಪ್ಪ,ರಮೇಶ್ ಗುಂಡ, ಪ್ರಶಾಂತ್ ,ಸುನಂದ ಮಂಜುನಾಥ,ಉಮಾವತಿ, ಇದ್ದರು.
News by: Raghu Shikari-7411515737