ಶಿಕಾರಿಪುರ: ಫೆ14 ರ ವ್ಯಾಲೆಂಟೈನ್ ಡೇ ಯಂದು ನಡೆಯುವ ಅನಾಚಾರಗಳನ್ನು ತಡೆಯುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳವಾರ ಶಿಕಾರಿಪುರದ ತಾಲೂಕು ಕಚೇರಿ, ಡಿವೈಎಸ್ಪಿ ಕಚೇರಿ, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ಕಳೆದ ಕೆಲವು ವರ್ಷಗಳಿಂದ 14 ಫೆಬ್ರವರಿಯನ್ನು ವ್ಯಾಲೆಂಟೈನ್ ಡೇ ಎಂದು ಆಚರಿಸುವ ಪಾಶ್ಚಾತ್ಯರ ದುಷ್ಟ ಪ್ರವೃತ್ತಿಯು ಭಾರತದಲ್ಲಿಯೂ ವ್ಯಾಪಕವಾಗಿ ಪಸರಿಸಿದೆ ಪಾಶ್ಚಾತ್ಯರ ವ್ಯಾಪಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯ ಪ್ರಚಾರದಿಂದ ಯುವ ಪೀಳಿಗೆ ಭೋಗವಾದ ಮತ್ತು ಅನೈತಿಕತೆಯಲ್ಲಿ ಮುಳುಗುತ್ತಿದೆ ವ್ಯಾಲೆಂಟೈನ್ ಡೇ ಹಿನ್ನೆಲೆಯಲ್ಲಿ ಪ್ರೇಮದ ಭೀಭತ್ಸ ಪ್ರದರ್ಶನ ಮಾಡುವ ನೆಪದಲ್ಲಿ ಇತ್ತೀಚಿಗೆ ಏಕಮುಖ ಪ್ರೀತಿಯಿಂದ ಯುವತಿಯರ ಮೇಲಿನ ಕಿರುಕುಳ ಹಾಗೂ ಹಲವಾರು ಹಿಂಸಾತ್ಮಕ ಘಟನೆಗಳು ಸಂಭವಿಸುತ್ತಿವೆ.

ಇದರ ಜೊತೆಗೆ ನಡೆಯುವ ಪಾರ್ಟಿಗಳಲ್ಲಿ ಯುವಕ ಯುವತಿಯರು ಮಧ್ಯಪಾನ, ಧೂಮಪಾನ, ಮಾದಕ ವಸ್ತುಗಳ ಸೇವನೆ ಮುಂತಾದ ಅನಾಚಾರಗಳಲ್ಲಿ ತೊಡಗಿರುವುದನ್ನು ಕಾಣಬಹುದಾಗಿದೆ ಇದರ ಜೊತೆಗೆ ಈ ದಿನ ಗರ್ಭನಿರೋಧಕ ಸಾಮಗ್ರಿಗಳ ಹೆಚ್ಚಿನ ಮಾರಾಟವು ಅನೈತಿಕ ಸಂಬಂಧಗಳ ಹೆಚ್ಚಳವನ್ನು ತೋರಿಸುತ್ತದೆ ಯುವತಿಯರನ್ನು ಪ್ರಭಾವಿತ ಮಾಡಲು ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸುವುದರಿಂದ ಅಪಘಾತಗಳ ಸಂಖ್ಯೆಯು ಹೆಚ್ಚುತ್ತಿದೆ ಅಲ್ಲದೆ ಸುಳ್ಳು ಹೆಸರು ಹೇಳಿ ಯುವತಿಯರಿಗೆ ಮೋಸ ಮಾಡುವವರಿಂದ ಲವ್ ಜಿಹಾದ್ ಕೂಡ ನಡೆಯುತ್ತಿದೆ.

ವೆಲೆಂಟೈನ್ ಡೇ ಕಾರಣದಿಂದ ಶಾಲಾ-ಕಾಲೇಜುಗಳ ಆವರಣದಲ್ಲಿ ಕಾನೂನು ಮತ್ತು ಶಿಸ್ತಿನ ಸಮಸ್ಯೆ ಉಂಟಾಗುತ್ತಿದೆ ಜೊತೆಗೆ ಶೈಕ್ಷಣಿಕ ವಾತಾವರಣವು ಹಾಳಾಗುತ್ತಿದೆ ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತದಲ್ಲಿ ಪ್ರತಿ 16 ನಿಮಿಷಕ್ಕೊಮ್ಮೆ ಅತ್ಯಾಚಾರ ಸಂಭವಿಸುತ್ತಿದ್ದು ಮಹಿಳೆಯರ ಮೇಲೆ ನಡೆಯುತ್ತಿರುವ ಅಕ್ರಮ ಗಳ ಭಯಾನಕ ಅಂಕಿ ಅಂಶಗಳು ತಕ್ಷಣ ಕಾನೂನು ಕ್ರಮಗಳ ಅಗತ್ಯತೆಯನ್ನು ತೋರಿಸುತ್ತವೆ

ಈ ಅನಾಚಾರಗಳನ್ನು ತಡೆಯಲು ವಿವಿಧ ಆಧ್ಯಾತ್ಮಿಕ ಮತ್ತು ಸಮಾಜ ಸೇವಾ ಸಂಸ್ಥೆಗಳು ಈ ಡೇ ಸಂಸ್ಕೃತಿ ವಿರುದ್ಧ ಧ್ವನಿ ಎತ್ತಿ ಭಾರತೀಯ ಸಂಪ್ರದಾಯಗಳನ್ನು ಅನುಸರಿಸಲು ಕರೆಕೊಟ್ಟಿವೆ. ವಿದೇಶಗಳಲ್ಲಿ ಭಾರತೀಯ ಸಂಸ್ಕೃತಿಯ ಮಹತ್ವವನ್ನು ಅರ್ಥ ಮಾಡಿಕೊಂಡು ಅದನ್ನು ಅನುಸರಿಸುವವರ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಭಾರತೀಯ ಯುವ ಪೀಳಿಗೆಯನ್ನು ಪಾಶ್ಚಾತ್ಯ ದುಷ್ಕೃತ್ಯಗಳತ್ತ ಪ್ರೇರೇಪಿಸಲು ಭಾರಿ ಕುತಂತ್ರ ನಡೆಯುತ್ತಿದೆ ಭಾರತೀಯ ಸಮಾಜ ವ್ಯವಸ್ಥೆ ಶ್ರೇಷ್ಠವಾಗಿ ಉಳಿಯಲು ಹಾಗೆಯೇ ಅನೈತಿಕ ಕೃತ್ಯಗಳಿಂದ ಉಂಟಾಗುವ ಅವ್ಯವಸ್ಥೆ ತಡೆಯಲು ಯುವ ಪೀಳಿಗೆಗೆ ಪ್ರಬೋಧನೆ ನೀಡುವುದು ಅತ್ಯಗತ್ಯವಾಗಿದೆ.

ಹೀಗಾಗಿ ಫೆಬ್ರವರಿ 14ರಂದು ವಿಶೇಷ ಪೊಲೀಸ್ ದಳ ನಿಯೋಜಿಸಿ ಶಾಲೆ ಕಾಲೇಜು ಆವರಣದಲ್ಲಿ ಕಾನೂನು ವಿರೋಧಿ ಕೃತ್ಯಗಳಲ್ಲಿ ತೊಡಗುವವರ ಮೇಲೆ ನಿಗಾ ಇಡಬೇಕು ಅತಿ ವೇಗದಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಮಹಿಳೆಯರ ಮೇಲೆ ವ್ಯಾಲೆಂಟೈನ್ ಡೇ ಸಂದರ್ಭದಲ್ಲಿ ಹೆಚ್ಚುತ್ತಿರುವ ದೌರ್ಜನ್ಯಗಳ ದೃಷ್ಟಿಯಿಂದ ಶಾಲಾ-ಕಾಲೇಜುಗಳು ಆವರಣದಲ್ಲಿ ಈ ಅನಾಚಾರಗಳು ನಡೆಯದಂತೆ ಸರ್ಕಾರದಿಂದ ಮಾರ್ಗಸೂಚಿಗಳನ್ನು ಜಾರಿ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಪರಶುರಾಮ, ಈರೇಶ್, ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ವಿ.ರಾಮಣ್ಣ ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾದ ಬಿ. ವಿ ಮಂಜುನಾಥ್, ಎಸ್ ವಿ ಕೆ ಮೂರ್ತಿ, ಮೋಹನ್, ಜಯ ಕರ್ನಾಟಕ ಸಂಘಟನೆಯ ಶಿವಯ್ಯ ಶಾಸ್ತ್ರಿ ಉಪಸ್ಥಿತರಿದ್ದರು.
ಸುದ್ದಿ ಜಾಹೀರಾತಿಗಾಗಿ-7411515737