ಶಿಕಾರಿಪುರ ತಾಲೂಕಿಗೆ ಕೆಪಿಸಿಸಿ ಅಧ್ಯಕ್ಷ ಕನಕಪುರ ಬಂಡೆ ಡಿ.ಕೆ ಶಿವಕುಮಾರ್ ಆಗಮನ..!
ಶಿಕಾರಿಪುರ:ಬಿಜೆಪಿ ಭದ್ರಕೋಟೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಕ್ಷೇತ್ರ ಶಿಕಾರಿಪುರಕ್ಕೆ ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುರುವಾರ ಆಗಮಿಸಲಿದ್ದಾರೆ.
ಶಿಕಾರಿಪುರ ತಾಲೂಕಿನ ಗುರುವಾರ ಮಾಧ್ಯಹ್ನ ಆಗಮಿಸಲಿರುವ ಅವರು ತಾಲೂಕಿನ ಲಂಬಾಣಿ ಜನರೊಂದಿಗೆ ಅವರ ಕುಂದುಕೊರತೆಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಪ್ರದೇಶಿಕ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರ ಪ್ರವಾಸ ಕಾರ್ಯಕ್ರಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ಸಿಎಂ ಬಿ.ಎಸ್ ವೈ ಕ್ಷೇತ್ರಕ್ಕೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗಮಿಸುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತಲ್ಲಿ ಸಂಭ್ರಮ ಮನೆ ಮಾಡಿದೆ.
News by: Raghu Shikari-7411515737