ಶಿಕಾರಿಪುರ : ವಿಶ್ವಕರ್ಮ ಸಮುದಾಯ ಭವನವನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು..!
ಶಿಕಾರಿಪುರ ಪಟ್ಟಣದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ.
ಈ ಪುಣ್ಯ ಸಮಯ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ ಸಮಾಜ ನಾಯಕರು ನೀಡಿದ್ದಾರೆ.
ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಎಲ್ಲಾ ಸಮಾಜದ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಹಣವನ್ನು ಕೊಡಿಸುವ ಕೆಲಸ ಮಾಡಿದ್ದಾರೆ ಎಂದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ. ಪುರಸಭೆ ಅಧ್ಯಕ್ಷರಾದ ಲಕ್ಷ್ಮಿ ಮಹಲಿಂಗಪ್ಪ, ಮಲ್ಲಿಕಾರ್ಜುನ ಆಚಾರ್. ಸರಳಮ್ಮ. ಹಾಲಪ್ಪ. ವಿಶ್ವಕರ್ಮ ಸಮಾಜದ ಬಂಧುಗಳು ಇದ್ದರು.
News By: Raghu Shikari-7411515737