ಶಿಕಾರಿಪುರ:ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್’ಗಾಗಿ ಮೂರು ಜನ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ..
ಶಿಕಾರಿಪುರ ತಾಲೂಕು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್’ಗಾಗಿ ಮೂರು ಕಾಂಗ್ರೆಸ್ ಮುಖಂಡರು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷದ ನಿಯಮದಿಂದ ಅರ್ಜಿ ಸಲ್ಲಿಸಿದ್ದಾರೆ.
ಶಿಕಾರಿಪುರ ತಾಲೂಕ್ ಬ್ಲಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಣಿ ಮಾಲತೇಶ್ ಅವರು ಅರ್ಜಿಯನ್ನು ಸಲ್ಲಿಸಿದ್ದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು.
ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುರಸಭಾ ಸದಸ್ಯರಾದ ಎಸ್ ಪಿ ನಾಗರಾಜ್ ಗೌಡ್ರು ತಮ್ಮ ಬೆಂಬಲಿಗರೊಂದಿಗೆ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದಾರೆ.
ಇನ್ನೋರ್ವ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪುರಸಭಾ ಸದಸ್ಯ ಉಳ್ಳಿ ದರ್ಶನ್ ಅವರು ಕೂಡ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ
ಇನ್ನು ಕಾಂಗ್ರೆಸ್ ಪಕ್ಷದಿಂದ ಅನೇಕ ಆಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
News By: Raghu shikari-7411515737