ಶಿಕಾರಿಪುರ: ಮಾರ್ಚ್ ಐದರಂದು ರಾಜ್ಯ ಬಜೆಟ್ ಮಂಡನೆ …!
ಶಿಕಾರಿಪುರ ಪಟ್ಟಣದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಭೀಕರ ಅತೀವೃಷ್ಠಿಯ ಹಿನ್ನಲೆಯಲ್ಲಿ 7 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು ಹಣಕಾಸು ಸ್ಥಿತಿಗತಿಯನ್ನು ನೋಡಿಕೊಂಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಕಡಿಮೆ ಬಡ್ಡಿದರದಲ್ಲಿ ಗುಡಿ ಕೈಗಾರಿಕೆಗಳಿಗೆ ನೆರವು ಯೋಜನೆ ರಸ್ತೆಬದಿ ವ್ಯಾಪಾರ ಮಾಡುವ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿದರದಲ್ಲಿ ನೆರವು ಒದಗಿಸಲು ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಆರಂಭಿಸಲಾಗಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಇದಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆಯನ್ನು ನೀಡಿದರು.
ರಾಜ್ಯದಲ್ಲಿ ನೂತನ ರೈಲ್ವೇ ಮಾರ್ಗ ಯೋಜನೆ ಆರಂಭಿಸಲಾಗಿದೆ ಕೇಂದ್ರ ಸರ್ಕಾರದ ನೆರವಿನಿಂದ ಜಿಲ್ಲೆಯಲ್ಲಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗಿದೆ ರೈತರ ಆದಾಯ ಹೆಚ್ಚಿಸಲು ಯೋಜನೆ ಜಾರಿಗೆ ತರಲಾಗುವುದು ರೈತರ ಬೆಳೆಗೆ ಸರಿಯಾದ ಬೆಲೆ ನೀಡುವು ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಬೆಂಬಲ ಬೆಲೆಯನ್ನು ನಿಗಧಿ ಮಾಡಲಾಗಿದ್ದು ಎಲ್ಲಾ ತಾಲೂಕ್ ಕೇಂದ್ರಗಳಲ್ಲೂ ಖರೀದಿ ಕೇಂದ್ರವನ್ನು ತೆರೆಯಲಾಗಿದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ 10 ತಿಂಗಳ ಒಳಗಾಗಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ವಿಮಾನ ಹಾರಾಟ ಆರಂಭಿಸಲಾಗುವುದು ವಿಮಾನ ನಿಲ್ದಾಣದಿಂದ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಆರಂಭಕ್ಕೆ ಪಾರಕ ವಾತಾವರಣ ನಿರೀಕ್ಷೆ ಅದಕ್ಕೆ ಪೂರಕವಾಗಿ ಎಲ್ಲಾ ರೀತಿ ಹಸಿರು ನಿಶಾನೆ ದೊರೆತಿದೆ ಎಂದರು.
ದಾವೋಸ್ ನಲ್ಲಿ ನಡೆಯುವ ಸಮಾವೇಶದಲ್ಲಿ ಮೂರು ದಿನಗಳ ಕಾಲ ಭಾಗವಹಿಸಲು ತೆರಳಲಿದ್ದು, ರಾಜ್ಯದಲ್ಲಿ ಬಂಡವಾಳ ತೊಡಗಿಸಲು ಕೈಗಾರಿಕೋದ್ಯಮಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಇಂದರಿಂದ ರಾಜ್ಯದ ನಿರುದ್ಯೋಗಿ ಯುಕರಿಗೆ ಉದ್ಯೋಗ ಹಾಗೂ ಕೈಗಾರಿಕೆಗಳ ಅಭಿವೃದ್ಧಿ ರಾಜ್ಯದ ಅರ್ಥಿಕತೆಗೆ ಸಹಕಾರಿಯಾಗಲಿದೆ ಎಂದರು.
News By: Raghu Shikari