ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣದ ಅಡಿಗಲ್ಲು ಪೂಜೆಗೆ ಶಿವಮೊಗ್ಗದ ತುಂಗಾಭದ್ರ ನದಿ ನೀರು..!
![ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣದ ಅಡಿಗಲ್ಲು ಪೂಜೆಗೆ ಶಿವಮೊಗ್ಗದ ತುಂಗಾಭದ್ರ ನದಿ ನೀರು..!](https://shikarinews.com/wp-content/uploads/2020/07/maxresdefault-2.jpg)
ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಗಸ್ಟ್ 5 ರಂದು ಅಡಿಗಲ್ಲು ಇಡಲಾಗುತ್ತಿದ್ದು ಭೂಮಿ ಪೂಜೆ ವೇಳೆ ತುಂಗಾ ಮತ್ತು ಭದ್ರಾ ನದಿಯ ನೀರು ಬಳಸಲಾಗುತ್ತದೆ. ಹಾಗಾಗಿ ಇಂದು ಎರಡು ನದಿಗಳ ನೀರನ್ನು ಅಯೋಧ್ಯೆಗೆ ಕಳುಹಿಸಲಾಯಿತು.
![](https://shikarinews.com/wp-content/uploads/2020/07/WhatsApp-Image-2020-07-21-at-6.10.29-PM.jpeg)
ಅಯೋಧ್ಯ ರಾಮ ಜನ್ಮಭೂಮಿಯಲ್ಲಿ ಪ್ರಭು ಶ್ರೀರಾಮನ ಮಂದಿರಕ್ಕೆ ಸಕಲ ಸಿದ್ದತೆ ನಡೆಯುತ್ತಿದ್ದು ಮಂದಿರ ನಿರ್ಮಾಣದ ಕಾರ್ಯಕ್ಕೆ ಜಿಲ್ಲೆಯ ಎರಡು ನದಿಯ ನೀರಿನ್ನು ಸಂಗ್ರಹಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಕೋಟೆ ಶ್ರೀ ತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರಮುಖರ ಸಮ್ಮುಖದಲ್ಲಿ ನೀರನ್ನು ವಿಶೇಷವಾಗಿ ಪ್ಯಾಕ್ ಮಾಡಿ ಅಯೋಧ್ಯೆಗೆ ಕಳುಹಿಸಲಾಯಿತು.
![](https://shikarinews.com/wp-content/uploads/2020/07/WhatsApp-Image-2020-07-21-at-6.10.30-PM.jpeg)
ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಲಾಗುತ್ತಿದ್ದು ದೇಶದ ಎಲ್ಲ ಪವಿತ್ರ ನದಿಗಳ ನೀರನ್ನು ಬಳಸಲು ಯೋಜಿಸಲಾಗಿದೆ. ಇದೇ ಕಾರಣಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ನದಿಯ ನೀರನ್ನು ಕಳುಹಿಸಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ.
News By: Raghu Shikari= 7411515737