ಮಳೆಯ ನಡುವೆಯೂ ಸಂಸದ ಬಿ.ವೈ ರಾಘವೇಂದ್ರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ…!
![ಮಳೆಯ ನಡುವೆಯೂ ಸಂಸದ ಬಿ.ವೈ ರಾಘವೇಂದ್ರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ…!](https://shikarinews.com/wp-content/uploads/2020/08/IMG_20200806_170457_695.jpg)
ಶಿವಮೊಗ್ಗ: ಜಿಲ್ಲೆಯಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು ಜಿಲ್ಲಾಧಿಕಾರಿ ಈಗಾಗಲೇ ರೇಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಮಳೆಯಲ್ಲೂ ಸಂಸದ ಬಿ.ವೈ ರಾಘವೇಂದ್ರ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸೋಗಾನೆಯ ವಿಮಾನ ನಿಲ್ದಾಣದ ಕಾಮಗಾರಿಯ ಪ್ರಗತಿ ಪರಿವೀಕ್ಷಣೆ ಮಾಡಿದರು.
![](https://shikarinews.com/wp-content/uploads/2020/08/IMG_20200806_170636_517-1024x498.jpg)
ಶಿವಮೊಗ್ಗ ಜಿಲ್ಲೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ವಿಮಾನ ನಿಲ್ದಾಣ ಕಾಮಗಾರಿ ಈಗಾಗಲೇ ಬರದಿಂದ ಸಾಗುತ್ತಿದ್ದು ರನ್ ವೇ ನಿರ್ಮಾಣ ಕೆಲಸ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಜ್ಯೋತಿಪ್ರಕಾಶ್, ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ ಕಾಂತರಾಜ್, ಕಾರ್ಯಪಾಲಕ ಇಂಜಿನಿಯರ್ ಸಂಪತ್, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಇದ್ದರು.
News by: Raghu Shikari- 7411515737