JOB NEWS:ಶಿಕಾರಿಪುರ :ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…!

JOB NEWS:ಶಿಕಾರಿಪುರ :ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…!

ಶಿವಮೊಗ್ಗ : ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಅಂಗವಿಕಲ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಯಡಿ ಶಿಕಾರಿಪುರ ತಾಲೂಕಿನ ಹೊಸಗಿದ್ದನಕೊಪ್ಪ, ಹರಗಿ, ಮಳವಳ್ಳಿ, ಮಂಚಿಕೊಪ್ಪ ಮತ್ತು ಬೇಗೂರು ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು 18 ರಿಂದ 45 ವರ್ಷದೊಳಗಿನವರಾಗಿದ್ದು, ಶಿಕಾರಿಪುರ ತಾ.ಪಂ.ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ನಿಗಧಿತ ನಮೂನೆ ಅರ್ಜಿಯನ್ನು ಪಡೆದು,

ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣ/ಅನುತ್ತೀರ್ಣ ಹೊಂದಿರುವುದಕ್ಕೆ ಅಂಕಪಟ್ಟಿ, ವಾಸ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯು.ಡಿ.ಐ.ಡಿ. ಕಾರ್ಡ್/ ವಿಕಲತೆ ಗುರುತಿನ ಚೀಟಿ ನಕಲು ಪ್ರತಿಗಳನ್ನು ಲಗತ್ತಿಸಿ ಆಗಸ್ಟ್-21 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ದೂ.ಸಂ.: 08182-251676 ನ್ನು ಸಂಪರ್ಕಿಸುವುದು.

News By:Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!