ಶಿವಮೊಗ್ಗ:ಈಸೂರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ ನಿಧನ..!
![ಶಿವಮೊಗ್ಗ:ಈಸೂರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ ನಿಧನ..!](https://shikarinews.com/wp-content/uploads/2020/08/IMG-20200818-WA0023.jpg)
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ(104) ಇಂದು ಮುಂಜಾನೆ ತಮ್ಮ ಸ್ಚಗೃಹದಲ್ಲಿ ವಿಧಿವಶರಾಗಿದ್ದರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರಾದ ಹುಚ್ಚರಾಯಪ್ಪ ಬ್ರಿಟಿಷರ ವಿರುದ್ಧ 1942 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದರು ಜೈಲುವಾಸವನ್ನು ಅನುಭವಿಸಿದ್ದರು.
ಈಸೂರು ಸ್ವಾತಂತ್ರ್ಯ ಹೋರಾಟ ಭಾರತದ ಇತಿಹಾಸ ಮಹತ್ವದ ಪಾತ್ರವನ್ನು ನಿರ್ವಹಿಸಿದೆ
ಭಾರತಸ ಮೊದಲ ಸ್ವಾತಂತ್ರ್ಯ ಪಡೆದ ಗ್ರಾಮವಾಗಿದೆ.
![](https://shikarinews.com/wp-content/uploads/2020/08/IMG-20200815-WA0009.jpg)
ಸ್ವಾತಂತ್ರ್ಯ ಹೋರಾಟಗಾರರಾದ ಹುಚ್ಚರಾಯಪ್ಪ ಅನೇಕ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಈಸೂರು ಹೋರಾಟಗಾರ ಎಲ್ಲಾರೂ ಮೃತರಾಗಿದ್ದು ಇವರು ಕೊನೆಯವರಾಗಿದ್ದಾರೆ ಇಂದು ಹುಚ್ಚರಾಯಪ್ಪ ಮೃತರಾಗಿದ್ದು ಹೋರಾಟಗಾರರ ಕೊನೆಯ ಕೊಂಡಿ ಕಳಚಿಕೊಂಡಿದೆ.
![](https://shikarinews.com/wp-content/uploads/2020/08/IMG-20200815-WA0012-1024x293.jpg)
ಹುಚ್ಚರಾಯಪ್ಪ ಅವರಿಗೆ ಅನೇಕ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ನೀಡಿ ಸರ್ಕಾರ ಗೌರವಿಸಿದೆ.
ಹುಚ್ಚರಾಯಪ್ಪನವರಿಗೆ ನಾಲ್ಕು ಜನ ಮಕ್ಕಳು ಇದ್ದಾರೆ ಇಡೀ ಈಸೂರು ಗ್ರಾಮ ಇವರ ಸಾವಿನಿಂದ ಮೌನಕ್ಕೆ ಶಾರಣಾಗಿದೆ.
News by: Raghu Shikari-7411515737