ಶಿವಮೊಗ್ಗ: ಡಿಕೆಶಿ ಪೋನ್ ಟ್ರಾಪ್ ಮಾಡಿ ದೇಶ ಉದ್ಧಾರ ಮಾಡಬೇಕಾಗಿಲ್ಲ: ಸಚಿವ ಕೆ.ಎಸ್ ಈಶ್ವರಪ್ಪ…!

ಶಿವಮೊಗ್ಗ: ಡಿಕೆಶಿ ಪೋನ್ ಟ್ರಾಪ್ ಮಾಡಿ ದೇಶ ಉದ್ಧಾರ ಮಾಡಬೇಕಾಗಿಲ್ಲ: ಸಚಿವ ಕೆ.ಎಸ್ ಈಶ್ವರಪ್ಪ…!

ಶಿವಮೊಗ್ಗ: ರಾಜ್ಯದಲ್ಲಿ ಭುಗಿಲೆದ್ದಿರುವ ಫೋನ್ ಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ‌ ಶಿವಕುಮಾರ್ ಅವರು ತಮ್ಮ ಪೋನ್ ಟ್ರಾಪ್ ಆಗಿದೆ ಎಂದು ಆರೋಪಿಸಿದರು.

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಡಿಕೆ ಶಿವಕುಮಾರ್ ಅವರ ಸರ್ಕಾರದಿಂದ ಫೋನ್ ಕದ್ದಾಲಿಕೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಡಿಕೆ ಶಿವಕುಮಾರ್ ಕೇವಲ ಪ್ರಚಾರಕ್ಕಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ ಇದರ ಮೂಲಕ ಪ್ರಚಾರ ಪಡೆಯುತ್ತಿದ್ದಾರೆ ಅವರ ಪೋನ್ ಟ್ರಾಪ್ ಮಾಡಿ ದೇಶ ಉದ್ಧಾರ ಮಾಡಬೇಕಾಗಿಲ್ಲ ಎಂದರು.

ರಾಜ್ಯದಲ್ಲಿ ಯಾವುದೇ ರಾಜಕಾರಣಿಗಳ ಫೋನ್ ಟ್ಯಾಪ್ ಅಗುತ್ತಿಲ್ಲ ಅರ್ಥವಿಲ್ಲದ ಹಾಗೂ ಆಧಾರ‌ ಇಲ್ಲದ ಆರೋಪ ಎಂದರು.

ಬಿಜೆಪಿಯಲ್ಲಿ ಕಾರ್ಯಕರ್ತರ ಪಡೆಯಿದ್ದು ಸೈದಾಂತಿಕವಾಗಿ ದೇಶ ಮುನ್ನೆಡಸುವ ಗುರಿ ಎಲ್ಲರ ಮುಂದಿದೆ.

ಇಂದು ಎಲ್ಲರೂ ಬಿಜೆಪಿ ಪಕ್ಷಕ್ಕೆ ಬಂದು ಸೇರುತ್ತಿದ್ದಾರೆ ಕರ್ನಾಟಕದಲ್ಲಿ ಪ್ರಾಮಾಣಿಕ ಸೇವೆ ಮಾಡಿದ್ದ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿ ಸೇರಿದ್ದಾರೆ.

ಅವರು ಬಿಜೆಪಿ ಸೇರಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಚಿವ ಈಶ್ವರಪ್ಪ ಹೇಳಿದರು.

ಕಾಂಗ್ರೆಸ್ ಪಕ್ಷದ ನಾಯಕ ಪರಸ್ಪರ ಒಡೆದ ಕನ್ನಡಿಯಂತೆ ಅಗಿದೆ. ಒಮ್ಮೆ ಒಡೆದ ಕನ್ನಡಿ ಮತ್ತೆ ಸೇರುವುದಕ್ಕೆ ಸಾಧ್ಯವಿಲ್ಲ.

ಅದು ಚೂರು ಚೂರಾಗಿ ಹೋಗಿದೆ ಪಕ್ಷದ ನಾಯಕರ ವಿರುದ್ಧ ಹಿರಿಯ ನಾಯಕರುಗಳೇ ಪತ್ರ ಬರೆಯುವ ಕೆಲಸ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವ ಇಲ್ಲ ಸಿದ್ದಾಂತ ಹಾಗೂ ಸಂಘಟನೆಯ ಕಾರ್ಯಕರ್ತರ ಗುಂಪು ಇಲ್ಲ ಎಂದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!